ಭಾರತದಲ್ಲೂ ಪಿಕಲ್‌ಬಾಲ್‌ ಆಟವನ್ನು ಜನಪ್ರಿಯಗೊಳಿಸಲು ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌ನೊಂದಿಗೆ ಸಹಯೋಗ

ಬೆಂಗಳೂರು: ವಿಶ್ವದೆಲ್ಲೆಡೆ ಹೆಚ್ಚು ಚಾಲ್ತಿಯಲ್ಲಿರುವ “ಪಿಕಲ್‌ಬಾಲ್‌” ಆಟವನ್ನು ಭಾರತದಲ್ಲೂ ಪ್ರಸಿದ್ಧಿಗೆ ತರುವ ಉದ್ದೇಶದಿಂದ ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌ ಐಟಿಸಿ ಅವರ “ಬಿಂಗೋ” ತಿಂಡಿಯೊಂದಿಗೆ ಸಹಯೋಗತ್ವವನ್ನು ಘೋಷಿಸಿದೆ.

ಬಿಂಗೊ ಸಹಭಾಗಿತ್ವದಲ್ಲಿ “ವಿಶ್ವ ಪಿಕಲ್‌ಬಾಲ್‌ ಚಾಂಪಿಯನ್‌ಶಿಪ್‌”ಗೆ ನಟಿ ಮಂದಿರಾ ಬೇಡಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಐಟಿಸಿ ಸ್ನ್ಯಾಕ್ಸ್, ನೂಡಲ್ಸ್ ಮತ್ತು ಪಾಸ್ಟಾ ವಿಭಾಗದ ವಿಪಿ ಸುರೇಶ್‌ ಚಂದ್‌, ವಿಶ್ವ ಪಿಕಲ್‌ಬಾಲ್ ಚಾಂಪಿಯನ್‌ಶಿಪ್ (WPC), ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಗಳಲ್ಲಿ ಒಂದಾಗಿದ್ದು, ಈ ಕ್ರೀಡೆಯನ್ನು ಭಾರತದಲ್ಲೂ ಉತ್ತೇಜಿಸಲು ನಾವು ಮುಂದಾಗಿದ್ದೇವೆ.
ಪಿಕಲ್‌ಬಾಲ್‌ ಆಟವು ಈಗಾಗಲೇ 84 ದೇಶಗಳಾದ್ಯಂತ 5 ಮಿಲಿಯನ್ ಆಟಗಾರರನ್ನು ಸೆಳೆದಿದ್ದು, ಶೇ.40ರಷ್ಟು ಮಹಿಳಾ ಆಟಗಾರರೇ ಭಾಗವಹಿಸುತ್ತಿದ್ದಾರೆ.

ಭಾರತದಲ್ಲಿ, ಕಳೆದ ಮೂರು ವರ್ಷಗಳಲ್ಲಿ ಈ ಕ್ರೀಡೆಯ ಸಕ್ರಿಯ ಆಟಗಾರರಲ್ಲಿ ಶೇ.275 ರಷ್ಟು ಬೆಳವಣಿಗೆ ಕಂಡಿದ್ದು, 2028 ರ ವೇಳೆಗೆ ಒಂದು ಮಿಲಿಯನ್ ಸಕ್ರಿಯ ಆಟಗಾರರನ್ನು ಮೀರಿಸುವ ನಿರೀಕ್ಷೆಯಿದೆ. ಪ್ರಸ್ತುತ ಬಿಂಗೋ ಸಹಭಾಗಿತ್ವದಲ್ಲಿ ಈ ಆಟವನ್ನು ಇನ್ನಷ್ಟು ಪ್ರಚಲಿತಗೊಳಿಸಲು 23 ರಾಜ್ಯಗಳ ಎಲ್ಲಾ ಕಾಲೇಜುಗಳ ಪಂದ್ಯಾವಳಿಗಳಲ್ಲಿ ಪಿಕಲ್‌ಬಾಲ್‌ ಆಟವನ್ನು ಪರಿಚಯಿಸಲಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳು ಶಿಕ್ಷಣದ ಸಂದರ್ಭದಿಂದಲೇ ಈ ಆಟದಲ್ಲಿ ನಿರತರಾಗಲು ಹಾಗೂ ಅಭ್ಯಾಸಿಸಲು ಸಹಕಾರಿಯಾಗಲಿದೆ ಎಂದರು.

ಅಖಿಲ ಭಾರತ ಪಿಕಲ್‌ಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಅರವಿಂದ್ ಪ್ರಭು, ನಟ ಅಲಿ ಫಜಲ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

6 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

7 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

8 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

8 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

12 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

14 hours ago