ಭಾರತದಲ್ಲೂ ಪಿಕಲ್‌ಬಾಲ್‌ ಆಟವನ್ನು ಜನಪ್ರಿಯಗೊಳಿಸಲು ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌ನೊಂದಿಗೆ ಸಹಯೋಗ

ಬೆಂಗಳೂರು: ವಿಶ್ವದೆಲ್ಲೆಡೆ ಹೆಚ್ಚು ಚಾಲ್ತಿಯಲ್ಲಿರುವ “ಪಿಕಲ್‌ಬಾಲ್‌” ಆಟವನ್ನು ಭಾರತದಲ್ಲೂ ಪ್ರಸಿದ್ಧಿಗೆ ತರುವ ಉದ್ದೇಶದಿಂದ ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌ ಐಟಿಸಿ ಅವರ “ಬಿಂಗೋ” ತಿಂಡಿಯೊಂದಿಗೆ ಸಹಯೋಗತ್ವವನ್ನು ಘೋಷಿಸಿದೆ.

ಬಿಂಗೊ ಸಹಭಾಗಿತ್ವದಲ್ಲಿ “ವಿಶ್ವ ಪಿಕಲ್‌ಬಾಲ್‌ ಚಾಂಪಿಯನ್‌ಶಿಪ್‌”ಗೆ ನಟಿ ಮಂದಿರಾ ಬೇಡಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಐಟಿಸಿ ಸ್ನ್ಯಾಕ್ಸ್, ನೂಡಲ್ಸ್ ಮತ್ತು ಪಾಸ್ಟಾ ವಿಭಾಗದ ವಿಪಿ ಸುರೇಶ್‌ ಚಂದ್‌, ವಿಶ್ವ ಪಿಕಲ್‌ಬಾಲ್ ಚಾಂಪಿಯನ್‌ಶಿಪ್ (WPC), ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಗಳಲ್ಲಿ ಒಂದಾಗಿದ್ದು, ಈ ಕ್ರೀಡೆಯನ್ನು ಭಾರತದಲ್ಲೂ ಉತ್ತೇಜಿಸಲು ನಾವು ಮುಂದಾಗಿದ್ದೇವೆ.
ಪಿಕಲ್‌ಬಾಲ್‌ ಆಟವು ಈಗಾಗಲೇ 84 ದೇಶಗಳಾದ್ಯಂತ 5 ಮಿಲಿಯನ್ ಆಟಗಾರರನ್ನು ಸೆಳೆದಿದ್ದು, ಶೇ.40ರಷ್ಟು ಮಹಿಳಾ ಆಟಗಾರರೇ ಭಾಗವಹಿಸುತ್ತಿದ್ದಾರೆ.

ಭಾರತದಲ್ಲಿ, ಕಳೆದ ಮೂರು ವರ್ಷಗಳಲ್ಲಿ ಈ ಕ್ರೀಡೆಯ ಸಕ್ರಿಯ ಆಟಗಾರರಲ್ಲಿ ಶೇ.275 ರಷ್ಟು ಬೆಳವಣಿಗೆ ಕಂಡಿದ್ದು, 2028 ರ ವೇಳೆಗೆ ಒಂದು ಮಿಲಿಯನ್ ಸಕ್ರಿಯ ಆಟಗಾರರನ್ನು ಮೀರಿಸುವ ನಿರೀಕ್ಷೆಯಿದೆ. ಪ್ರಸ್ತುತ ಬಿಂಗೋ ಸಹಭಾಗಿತ್ವದಲ್ಲಿ ಈ ಆಟವನ್ನು ಇನ್ನಷ್ಟು ಪ್ರಚಲಿತಗೊಳಿಸಲು 23 ರಾಜ್ಯಗಳ ಎಲ್ಲಾ ಕಾಲೇಜುಗಳ ಪಂದ್ಯಾವಳಿಗಳಲ್ಲಿ ಪಿಕಲ್‌ಬಾಲ್‌ ಆಟವನ್ನು ಪರಿಚಯಿಸಲಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳು ಶಿಕ್ಷಣದ ಸಂದರ್ಭದಿಂದಲೇ ಈ ಆಟದಲ್ಲಿ ನಿರತರಾಗಲು ಹಾಗೂ ಅಭ್ಯಾಸಿಸಲು ಸಹಕಾರಿಯಾಗಲಿದೆ ಎಂದರು.

ಅಖಿಲ ಭಾರತ ಪಿಕಲ್‌ಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಅರವಿಂದ್ ಪ್ರಭು, ನಟ ಅಲಿ ಫಜಲ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

16 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago