ಭಾರತದಲ್ಲೂ ಪಿಕಲ್‌ಬಾಲ್‌ ಆಟವನ್ನು ಜನಪ್ರಿಯಗೊಳಿಸಲು ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌ನೊಂದಿಗೆ ಸಹಯೋಗ

ಬೆಂಗಳೂರು: ವಿಶ್ವದೆಲ್ಲೆಡೆ ಹೆಚ್ಚು ಚಾಲ್ತಿಯಲ್ಲಿರುವ “ಪಿಕಲ್‌ಬಾಲ್‌” ಆಟವನ್ನು ಭಾರತದಲ್ಲೂ ಪ್ರಸಿದ್ಧಿಗೆ ತರುವ ಉದ್ದೇಶದಿಂದ ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌ ಐಟಿಸಿ ಅವರ “ಬಿಂಗೋ” ತಿಂಡಿಯೊಂದಿಗೆ ಸಹಯೋಗತ್ವವನ್ನು ಘೋಷಿಸಿದೆ.

ಬಿಂಗೊ ಸಹಭಾಗಿತ್ವದಲ್ಲಿ “ವಿಶ್ವ ಪಿಕಲ್‌ಬಾಲ್‌ ಚಾಂಪಿಯನ್‌ಶಿಪ್‌”ಗೆ ನಟಿ ಮಂದಿರಾ ಬೇಡಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಐಟಿಸಿ ಸ್ನ್ಯಾಕ್ಸ್, ನೂಡಲ್ಸ್ ಮತ್ತು ಪಾಸ್ಟಾ ವಿಭಾಗದ ವಿಪಿ ಸುರೇಶ್‌ ಚಂದ್‌, ವಿಶ್ವ ಪಿಕಲ್‌ಬಾಲ್ ಚಾಂಪಿಯನ್‌ಶಿಪ್ (WPC), ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಗಳಲ್ಲಿ ಒಂದಾಗಿದ್ದು, ಈ ಕ್ರೀಡೆಯನ್ನು ಭಾರತದಲ್ಲೂ ಉತ್ತೇಜಿಸಲು ನಾವು ಮುಂದಾಗಿದ್ದೇವೆ.
ಪಿಕಲ್‌ಬಾಲ್‌ ಆಟವು ಈಗಾಗಲೇ 84 ದೇಶಗಳಾದ್ಯಂತ 5 ಮಿಲಿಯನ್ ಆಟಗಾರರನ್ನು ಸೆಳೆದಿದ್ದು, ಶೇ.40ರಷ್ಟು ಮಹಿಳಾ ಆಟಗಾರರೇ ಭಾಗವಹಿಸುತ್ತಿದ್ದಾರೆ.

ಭಾರತದಲ್ಲಿ, ಕಳೆದ ಮೂರು ವರ್ಷಗಳಲ್ಲಿ ಈ ಕ್ರೀಡೆಯ ಸಕ್ರಿಯ ಆಟಗಾರರಲ್ಲಿ ಶೇ.275 ರಷ್ಟು ಬೆಳವಣಿಗೆ ಕಂಡಿದ್ದು, 2028 ರ ವೇಳೆಗೆ ಒಂದು ಮಿಲಿಯನ್ ಸಕ್ರಿಯ ಆಟಗಾರರನ್ನು ಮೀರಿಸುವ ನಿರೀಕ್ಷೆಯಿದೆ. ಪ್ರಸ್ತುತ ಬಿಂಗೋ ಸಹಭಾಗಿತ್ವದಲ್ಲಿ ಈ ಆಟವನ್ನು ಇನ್ನಷ್ಟು ಪ್ರಚಲಿತಗೊಳಿಸಲು 23 ರಾಜ್ಯಗಳ ಎಲ್ಲಾ ಕಾಲೇಜುಗಳ ಪಂದ್ಯಾವಳಿಗಳಲ್ಲಿ ಪಿಕಲ್‌ಬಾಲ್‌ ಆಟವನ್ನು ಪರಿಚಯಿಸಲಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳು ಶಿಕ್ಷಣದ ಸಂದರ್ಭದಿಂದಲೇ ಈ ಆಟದಲ್ಲಿ ನಿರತರಾಗಲು ಹಾಗೂ ಅಭ್ಯಾಸಿಸಲು ಸಹಕಾರಿಯಾಗಲಿದೆ ಎಂದರು.

ಅಖಿಲ ಭಾರತ ಪಿಕಲ್‌ಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಅರವಿಂದ್ ಪ್ರಭು, ನಟ ಅಲಿ ಫಜಲ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

8 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

8 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

8 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

17 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

19 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

1 day ago