ಭಾರತದಲ್ಲೂ ಪಿಕಲ್‌ಬಾಲ್‌ ಆಟವನ್ನು ಜನಪ್ರಿಯಗೊಳಿಸಲು ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌ನೊಂದಿಗೆ ಸಹಯೋಗ

ಬೆಂಗಳೂರು: ವಿಶ್ವದೆಲ್ಲೆಡೆ ಹೆಚ್ಚು ಚಾಲ್ತಿಯಲ್ಲಿರುವ “ಪಿಕಲ್‌ಬಾಲ್‌” ಆಟವನ್ನು ಭಾರತದಲ್ಲೂ ಪ್ರಸಿದ್ಧಿಗೆ ತರುವ ಉದ್ದೇಶದಿಂದ ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌ ಐಟಿಸಿ ಅವರ “ಬಿಂಗೋ” ತಿಂಡಿಯೊಂದಿಗೆ ಸಹಯೋಗತ್ವವನ್ನು ಘೋಷಿಸಿದೆ.

ಬಿಂಗೊ ಸಹಭಾಗಿತ್ವದಲ್ಲಿ “ವಿಶ್ವ ಪಿಕಲ್‌ಬಾಲ್‌ ಚಾಂಪಿಯನ್‌ಶಿಪ್‌”ಗೆ ನಟಿ ಮಂದಿರಾ ಬೇಡಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಐಟಿಸಿ ಸ್ನ್ಯಾಕ್ಸ್, ನೂಡಲ್ಸ್ ಮತ್ತು ಪಾಸ್ಟಾ ವಿಭಾಗದ ವಿಪಿ ಸುರೇಶ್‌ ಚಂದ್‌, ವಿಶ್ವ ಪಿಕಲ್‌ಬಾಲ್ ಚಾಂಪಿಯನ್‌ಶಿಪ್ (WPC), ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಗಳಲ್ಲಿ ಒಂದಾಗಿದ್ದು, ಈ ಕ್ರೀಡೆಯನ್ನು ಭಾರತದಲ್ಲೂ ಉತ್ತೇಜಿಸಲು ನಾವು ಮುಂದಾಗಿದ್ದೇವೆ.
ಪಿಕಲ್‌ಬಾಲ್‌ ಆಟವು ಈಗಾಗಲೇ 84 ದೇಶಗಳಾದ್ಯಂತ 5 ಮಿಲಿಯನ್ ಆಟಗಾರರನ್ನು ಸೆಳೆದಿದ್ದು, ಶೇ.40ರಷ್ಟು ಮಹಿಳಾ ಆಟಗಾರರೇ ಭಾಗವಹಿಸುತ್ತಿದ್ದಾರೆ.

ಭಾರತದಲ್ಲಿ, ಕಳೆದ ಮೂರು ವರ್ಷಗಳಲ್ಲಿ ಈ ಕ್ರೀಡೆಯ ಸಕ್ರಿಯ ಆಟಗಾರರಲ್ಲಿ ಶೇ.275 ರಷ್ಟು ಬೆಳವಣಿಗೆ ಕಂಡಿದ್ದು, 2028 ರ ವೇಳೆಗೆ ಒಂದು ಮಿಲಿಯನ್ ಸಕ್ರಿಯ ಆಟಗಾರರನ್ನು ಮೀರಿಸುವ ನಿರೀಕ್ಷೆಯಿದೆ. ಪ್ರಸ್ತುತ ಬಿಂಗೋ ಸಹಭಾಗಿತ್ವದಲ್ಲಿ ಈ ಆಟವನ್ನು ಇನ್ನಷ್ಟು ಪ್ರಚಲಿತಗೊಳಿಸಲು 23 ರಾಜ್ಯಗಳ ಎಲ್ಲಾ ಕಾಲೇಜುಗಳ ಪಂದ್ಯಾವಳಿಗಳಲ್ಲಿ ಪಿಕಲ್‌ಬಾಲ್‌ ಆಟವನ್ನು ಪರಿಚಯಿಸಲಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳು ಶಿಕ್ಷಣದ ಸಂದರ್ಭದಿಂದಲೇ ಈ ಆಟದಲ್ಲಿ ನಿರತರಾಗಲು ಹಾಗೂ ಅಭ್ಯಾಸಿಸಲು ಸಹಕಾರಿಯಾಗಲಿದೆ ಎಂದರು.

ಅಖಿಲ ಭಾರತ ಪಿಕಲ್‌ಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಅರವಿಂದ್ ಪ್ರಭು, ನಟ ಅಲಿ ಫಜಲ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

58 minutes ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

13 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

15 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

15 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

22 hours ago