ಭಾರತದಲ್ಲೂ ಪಿಕಲ್‌ಬಾಲ್‌ ಆಟವನ್ನು ಜನಪ್ರಿಯಗೊಳಿಸಲು ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌ನೊಂದಿಗೆ ಸಹಯೋಗ

ಬೆಂಗಳೂರು: ವಿಶ್ವದೆಲ್ಲೆಡೆ ಹೆಚ್ಚು ಚಾಲ್ತಿಯಲ್ಲಿರುವ “ಪಿಕಲ್‌ಬಾಲ್‌” ಆಟವನ್ನು ಭಾರತದಲ್ಲೂ ಪ್ರಸಿದ್ಧಿಗೆ ತರುವ ಉದ್ದೇಶದಿಂದ ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌ ಐಟಿಸಿ ಅವರ “ಬಿಂಗೋ” ತಿಂಡಿಯೊಂದಿಗೆ ಸಹಯೋಗತ್ವವನ್ನು ಘೋಷಿಸಿದೆ.

ಬಿಂಗೊ ಸಹಭಾಗಿತ್ವದಲ್ಲಿ “ವಿಶ್ವ ಪಿಕಲ್‌ಬಾಲ್‌ ಚಾಂಪಿಯನ್‌ಶಿಪ್‌”ಗೆ ನಟಿ ಮಂದಿರಾ ಬೇಡಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಐಟಿಸಿ ಸ್ನ್ಯಾಕ್ಸ್, ನೂಡಲ್ಸ್ ಮತ್ತು ಪಾಸ್ಟಾ ವಿಭಾಗದ ವಿಪಿ ಸುರೇಶ್‌ ಚಂದ್‌, ವಿಶ್ವ ಪಿಕಲ್‌ಬಾಲ್ ಚಾಂಪಿಯನ್‌ಶಿಪ್ (WPC), ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಗಳಲ್ಲಿ ಒಂದಾಗಿದ್ದು, ಈ ಕ್ರೀಡೆಯನ್ನು ಭಾರತದಲ್ಲೂ ಉತ್ತೇಜಿಸಲು ನಾವು ಮುಂದಾಗಿದ್ದೇವೆ.
ಪಿಕಲ್‌ಬಾಲ್‌ ಆಟವು ಈಗಾಗಲೇ 84 ದೇಶಗಳಾದ್ಯಂತ 5 ಮಿಲಿಯನ್ ಆಟಗಾರರನ್ನು ಸೆಳೆದಿದ್ದು, ಶೇ.40ರಷ್ಟು ಮಹಿಳಾ ಆಟಗಾರರೇ ಭಾಗವಹಿಸುತ್ತಿದ್ದಾರೆ.

ಭಾರತದಲ್ಲಿ, ಕಳೆದ ಮೂರು ವರ್ಷಗಳಲ್ಲಿ ಈ ಕ್ರೀಡೆಯ ಸಕ್ರಿಯ ಆಟಗಾರರಲ್ಲಿ ಶೇ.275 ರಷ್ಟು ಬೆಳವಣಿಗೆ ಕಂಡಿದ್ದು, 2028 ರ ವೇಳೆಗೆ ಒಂದು ಮಿಲಿಯನ್ ಸಕ್ರಿಯ ಆಟಗಾರರನ್ನು ಮೀರಿಸುವ ನಿರೀಕ್ಷೆಯಿದೆ. ಪ್ರಸ್ತುತ ಬಿಂಗೋ ಸಹಭಾಗಿತ್ವದಲ್ಲಿ ಈ ಆಟವನ್ನು ಇನ್ನಷ್ಟು ಪ್ರಚಲಿತಗೊಳಿಸಲು 23 ರಾಜ್ಯಗಳ ಎಲ್ಲಾ ಕಾಲೇಜುಗಳ ಪಂದ್ಯಾವಳಿಗಳಲ್ಲಿ ಪಿಕಲ್‌ಬಾಲ್‌ ಆಟವನ್ನು ಪರಿಚಯಿಸಲಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳು ಶಿಕ್ಷಣದ ಸಂದರ್ಭದಿಂದಲೇ ಈ ಆಟದಲ್ಲಿ ನಿರತರಾಗಲು ಹಾಗೂ ಅಭ್ಯಾಸಿಸಲು ಸಹಕಾರಿಯಾಗಲಿದೆ ಎಂದರು.

ಅಖಿಲ ಭಾರತ ಪಿಕಲ್‌ಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಅರವಿಂದ್ ಪ್ರಭು, ನಟ ಅಲಿ ಫಜಲ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

10 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

10 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

15 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

1 day ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago