ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ‘ಇಂಡಿಯನ್ ಪೀನಲ್ ಕೋಡ್'(ಐಪಿಸಿ), ‘ಕೋಡ್ ಆಫ್ ಕ್ರಿಮಿನಲ್ ಪ್ರೊಸಿಜರ್'(ಸಿಆರ್ಪಿಸಿ) ಮತ್ತು ‘ಎವಿಡೆನ್ಸ್ ಆಕ್ಟ್’ಗಳ ಬದಲಿಗೆ ಇಂದಿನಿಂದ (ಜುಲೈ.1) ಹೊಸ ಮೂರು ಕ್ರಿಮಿನಲ್ ಕಾನೂನುಗಳಾದ ‘ಭಾರತೀಯ ನ್ಯಾಯ ಸಂಹಿತಾ'(ಬಿಎನ್ಎಸ್), ‘ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ'(ಬಿಎನ್ಎಸ್ಎಸ್) ಮತ್ತು ‘ಭಾರತೀಯ ಸಾಕ್ಷ್ಯ ಅಧಿನಿಯಮ'(ಬಿಎಸ್ಎ) ದೇಶಾದ್ಯಂತ ಜಾರಿಯಾಗಿವೆ.
1.ಭಾರತೀಯ ದಂಡ ಸಂಹಿತೆ (ಐಪಿಸಿ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ(ಬಿಎನ್ಎಸ್)
2.ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್)
3.ಭಾರತೀಯ ಸಾಕ್ಷ್ಯ ಕಾಯಿದೆ ಬದಲಿಗೆ ಭಾರತೀಯ ಸಾಕ್ಷಿ ಅಧಿನಿಯಮ(ಬಿಎಸ್ಎ) ಜಾರಿ
ಹಳೆಯ ಕಾನೂನುಗಳು ಬ್ರಿಟಿಷ್ ಸಾಮ್ರಾಜ್ಯದ ಹಿತಾಸಕ್ತಿಗೆ ಆದ್ಯತೆ ನೀಡುತ್ತಿದ್ದವು. ಆದರೆ, ಈ ಮೂರು ಹೊಸ ಕಾನೂನುಗಳ ಉದ್ದೇಶ ಶಿಕ್ಷೆ ನೀಡುವ ಬದಲಿಗೆ ನ್ಯಾಯ ಒದಗಿಸುವುದಾಗಿದೆ.
ಭಾರತೀಯ ದಂಡ ಸಂಹಿತೆ ಬದಲಿಗೆ ಬರಲಿರುವ ಭಾರತೀಯ ನ್ಯಾಯ ಸಂಹಿತಾ ಕಾಯಿದೆಯು ಹಿಂದಿನ 511 ಸೆಕ್ಷನ್ಗಳ ಬದಲಿಗೆ 358 ಸೆಕ್ಷನ್ಗಳನ್ನು ಹೊಂದಿದೆ. ಇಲ್ಲೂ175 ಸೆಕ್ಷನ್ಗಳನ್ನು ಬದಲಿಸಿ, 8 ಹೊಸ ಸೆಕ್ಷನ್ಗಳನ್ನು ಸೇರಿಸಿ, 22 ಸೆಕ್ಷನ್ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಈಗ 513 ಸೆಕ್ಷನ್ಗಳನ್ನು ಹೊಂದಿದ್ದು, ಹಳೆಯ ಕಾನೂನಿನ 160 ಸೆಕ್ಷನ್ಗಳನ್ನು ಬದಲಾಯಿಸಲಾಗಿದೆ. ಅದರಲ್ಲಿ 9 ಹೊಸ ಸೆಕ್ಷನ್ ಸೇರ್ಪಡೆ, 9 ಸೆಕ್ಷನ್ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ಸಾಕ್ಷಿ ಸಂಹಿತೆ ಹಿಂದಿನ 167ರ ಬದಲಿಗೆ 170 ವಿಭಾಗಗಳನ್ನು ಹೊಂದಿರುತ್ತದೆ. 23 ವಿಭಾಗಗಳನ್ನು ಬದಲಾಯಿಸಲಾಗಿದೆ. ಒಂದು ಹೊಸ ವಿಭಾಗ ಸೇರಿಸಲಾಗಿದೆ ಮತ್ತು 5 ವಿಭಾಗಗಳನ್ನು ರದ್ದುಗೊಳಿಸಲಾಗಿದೆ.
ಹೊಸ ಕಾನೂನುಗಳ ಅನುಷ್ಠಾನದ ನಂತರ, ಎಫ್ಐಆರ್ನಿಂದ ನ್ಯಾಯಾಲಯದ ತೀರ್ಪಿನವರೆಗೆ, ಸಂಪೂರ್ಣ ಪ್ರಕ್ರಿಯೆಯು ಆನ್ಲೈನ್ ಆಗಿರುತ್ತದೆ ಮತ್ತು ಭಾರತವು ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿಆಧುನಿಕ ತಂತ್ರಜ್ಞಾನವನ್ನು ಅತಿ ಹೆಚ್ಚು ಬಳಸುವ ದೇಶವಾಗಲಿದೆ. ಈ ಕಾನೂನುಗಳು ತಾರೀಖ್-ಪೆ-ತಾರೀಖ್ (ಪದೇಪದೆ ವಿಚಾರಣೆ ಮುಂದೂಡುವುದು) ಪ್ರವೃತ್ತಿಗೆ ಅಂತ್ಯ ಹಾಡುವ ಜತೆಗೆ ಮೂರು ವರ್ಷಗಳಲ್ಲಿ ನ್ಯಾಯವನ್ನು ನೀಡುವ ನ್ಯಾಯಾಂಗ ವ್ಯವಸ್ಥೆ ಖಾತ್ರಿಪಡಿಸುತ್ತದೆ ಎನ್ನಲಾಗುತ್ತಿದೆ.
ನಮ್ಮ ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಎಲ್ಲಾ 7 ವಲಯಗಳು, 6 ಕಮಿಷನರೇಟ್ ಘಟಕಗಳು ಮತ್ತು 1063 ಪೊಲೀಸ್ ಠಾಣೆಗಳಿಗೆ ತರಬೇತಿ ನೀಡಲಾಗಿದ್ದು, ಈ ವಿಷಯದ ಬಗ್ಗೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…