ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಹೊಸ ಮೂರು ಕ್ರಿಮಿನಲ್ ಕಾನೂನುಗಳ ಜಾರಿ: ಇದರ ಕಂಪ್ಲೀಟ್ ಮಾಹಿತಿ ಇಲ್ಲಿದೆ…

ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ‘ಇಂಡಿಯನ್‌ ಪೀನಲ್‌ ಕೋಡ್‌'(ಐಪಿಸಿ), ‘ಕೋಡ್‌ ಆಫ್‌ ಕ್ರಿಮಿನಲ್‌ ಪ್ರೊಸಿಜರ್‌'(ಸಿಆರ್‌ಪಿಸಿ) ಮತ್ತು ‘ಎವಿಡೆನ್ಸ್‌ ಆಕ್ಟ್’ಗಳ ಬದಲಿಗೆ ಇಂದಿನಿಂದ (ಜುಲೈ.1) ಹೊಸ ಮೂರು ಕ್ರಿಮಿನಲ್ ಕಾನೂನುಗಳಾದ ‘ಭಾರತೀಯ ನ್ಯಾಯ ಸಂಹಿತಾ'(ಬಿಎನ್‌ಎಸ್‌), ‘ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ'(ಬಿಎನ್‌ಎಸ್‌ಎಸ್‌) ಮತ್ತು ‘ಭಾರತೀಯ ಸಾಕ್ಷ್ಯ ಅಧಿನಿಯಮ'(ಬಿಎಸ್‌ಎ) ದೇಶಾದ್ಯಂತ ಜಾರಿಯಾಗಿವೆ.

1.ಭಾರತೀಯ ದಂಡ ಸಂಹಿತೆ (ಐಪಿಸಿ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್‌)

2.ಕ್ರಿಮಿನಲ್‌ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌)

3.ಭಾರತೀಯ ಸಾಕ್ಷ್ಯ ಕಾಯಿದೆ ಬದಲಿಗೆ ಭಾರತೀಯ ಸಾಕ್ಷಿ ಅಧಿನಿಯಮ(ಬಿಎಸ್‌ಎ) ಜಾರಿ

ಹಳೆಯ ಕಾನೂನುಗಳು ಬ್ರಿಟಿಷ್‌ ಸಾಮ್ರಾಜ್ಯದ ಹಿತಾಸಕ್ತಿಗೆ ಆದ್ಯತೆ ನೀಡುತ್ತಿದ್ದವು. ಆದರೆ, ಈ ಮೂರು ಹೊಸ ಕಾನೂನುಗಳ ಉದ್ದೇಶ ಶಿಕ್ಷೆ ನೀಡುವ ಬದಲಿಗೆ ನ್ಯಾಯ ಒದಗಿಸುವುದಾಗಿದೆ.

ಭಾರತೀಯ ದಂಡ ಸಂಹಿತೆ ಬದಲಿಗೆ ಬರಲಿರುವ ಭಾರತೀಯ ನ್ಯಾಯ ಸಂಹಿತಾ ಕಾಯಿದೆಯು ಹಿಂದಿನ 511 ಸೆಕ್ಷನ್‌ಗಳ ಬದಲಿಗೆ 358 ಸೆಕ್ಷನ್‌ಗಳನ್ನು ಹೊಂದಿದೆ. ಇಲ್ಲೂ175 ಸೆಕ್ಷನ್‌ಗಳನ್ನು ಬದಲಿಸಿ, 8 ಹೊಸ ಸೆಕ್ಷನ್‌ಗಳನ್ನು ಸೇರಿಸಿ, 22 ಸೆಕ್ಷನ್‌ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಈಗ 513 ಸೆಕ್ಷನ್‌ಗಳನ್ನು ಹೊಂದಿದ್ದು, ಹಳೆಯ ಕಾನೂನಿನ 160 ಸೆಕ್ಷನ್‌ಗಳನ್ನು ಬದಲಾಯಿಸಲಾಗಿದೆ. ಅದರಲ್ಲಿ 9 ಹೊಸ ಸೆಕ್ಷನ್‌ ಸೇರ್ಪಡೆ, 9 ಸೆಕ್ಷನ್‌ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ಸಾಕ್ಷಿ ಸಂಹಿತೆ ಹಿಂದಿನ 167ರ ಬದಲಿಗೆ 170 ವಿಭಾಗಗಳನ್ನು ಹೊಂದಿರುತ್ತದೆ. 23 ವಿಭಾಗಗಳನ್ನು ಬದಲಾಯಿಸಲಾಗಿದೆ. ಒಂದು ಹೊಸ ವಿಭಾಗ ಸೇರಿಸಲಾಗಿದೆ ಮತ್ತು 5 ವಿಭಾಗಗಳನ್ನು ರದ್ದುಗೊಳಿಸಲಾಗಿದೆ.

ಹೊಸ ಕಾನೂನುಗಳ ಅನುಷ್ಠಾನದ ನಂತರ, ಎಫ್‌ಐಆರ್‌ನಿಂದ ನ್ಯಾಯಾಲಯದ ತೀರ್ಪಿನವರೆಗೆ, ಸಂಪೂರ್ಣ ಪ್ರಕ್ರಿಯೆಯು ಆನ್‌ಲೈನ್‌ ಆಗಿರುತ್ತದೆ ಮತ್ತು ಭಾರತವು ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿಆಧುನಿಕ ತಂತ್ರಜ್ಞಾನವನ್ನು ಅತಿ ಹೆಚ್ಚು ಬಳಸುವ ದೇಶವಾಗಲಿದೆ. ಈ ಕಾನೂನುಗಳು ತಾರೀಖ್‌-ಪೆ-ತಾರೀಖ್‌ (ಪದೇಪದೆ ವಿಚಾರಣೆ ಮುಂದೂಡುವುದು) ಪ್ರವೃತ್ತಿಗೆ ಅಂತ್ಯ ಹಾಡುವ ಜತೆಗೆ ಮೂರು ವರ್ಷಗಳಲ್ಲಿ ನ್ಯಾಯವನ್ನು ನೀಡುವ ನ್ಯಾಯಾಂಗ ವ್ಯವಸ್ಥೆ ಖಾತ್ರಿಪಡಿಸುತ್ತದೆ ಎನ್ನಲಾಗುತ್ತಿದೆ.

ನಮ್ಮ ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಎಲ್ಲಾ 7 ವಲಯಗಳು, 6 ಕಮಿಷನರೇಟ್ ಘಟಕಗಳು ಮತ್ತು 1063 ಪೊಲೀಸ್ ಠಾಣೆಗಳಿಗೆ ತರಬೇತಿ ನೀಡಲಾಗಿದ್ದು, ಈ ವಿಷಯದ ಬಗ್ಗೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ತಿಳಿಸಿದ್ದಾರೆ.

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

2 hours ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

3 hours ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

3 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

6 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

9 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

11 hours ago