ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಹೊಸ ಮೂರು ಕ್ರಿಮಿನಲ್ ಕಾನೂನುಗಳ ಜಾರಿ: ಇದರ ಕಂಪ್ಲೀಟ್ ಮಾಹಿತಿ ಇಲ್ಲಿದೆ…

ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ‘ಇಂಡಿಯನ್‌ ಪೀನಲ್‌ ಕೋಡ್‌'(ಐಪಿಸಿ), ‘ಕೋಡ್‌ ಆಫ್‌ ಕ್ರಿಮಿನಲ್‌ ಪ್ರೊಸಿಜರ್‌'(ಸಿಆರ್‌ಪಿಸಿ) ಮತ್ತು ‘ಎವಿಡೆನ್ಸ್‌ ಆಕ್ಟ್’ಗಳ ಬದಲಿಗೆ ಇಂದಿನಿಂದ (ಜುಲೈ.1) ಹೊಸ ಮೂರು ಕ್ರಿಮಿನಲ್ ಕಾನೂನುಗಳಾದ ‘ಭಾರತೀಯ ನ್ಯಾಯ ಸಂಹಿತಾ'(ಬಿಎನ್‌ಎಸ್‌), ‘ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ'(ಬಿಎನ್‌ಎಸ್‌ಎಸ್‌) ಮತ್ತು ‘ಭಾರತೀಯ ಸಾಕ್ಷ್ಯ ಅಧಿನಿಯಮ'(ಬಿಎಸ್‌ಎ) ದೇಶಾದ್ಯಂತ ಜಾರಿಯಾಗಿವೆ.

1.ಭಾರತೀಯ ದಂಡ ಸಂಹಿತೆ (ಐಪಿಸಿ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್‌)

2.ಕ್ರಿಮಿನಲ್‌ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌)

3.ಭಾರತೀಯ ಸಾಕ್ಷ್ಯ ಕಾಯಿದೆ ಬದಲಿಗೆ ಭಾರತೀಯ ಸಾಕ್ಷಿ ಅಧಿನಿಯಮ(ಬಿಎಸ್‌ಎ) ಜಾರಿ

ಹಳೆಯ ಕಾನೂನುಗಳು ಬ್ರಿಟಿಷ್‌ ಸಾಮ್ರಾಜ್ಯದ ಹಿತಾಸಕ್ತಿಗೆ ಆದ್ಯತೆ ನೀಡುತ್ತಿದ್ದವು. ಆದರೆ, ಈ ಮೂರು ಹೊಸ ಕಾನೂನುಗಳ ಉದ್ದೇಶ ಶಿಕ್ಷೆ ನೀಡುವ ಬದಲಿಗೆ ನ್ಯಾಯ ಒದಗಿಸುವುದಾಗಿದೆ.

ಭಾರತೀಯ ದಂಡ ಸಂಹಿತೆ ಬದಲಿಗೆ ಬರಲಿರುವ ಭಾರತೀಯ ನ್ಯಾಯ ಸಂಹಿತಾ ಕಾಯಿದೆಯು ಹಿಂದಿನ 511 ಸೆಕ್ಷನ್‌ಗಳ ಬದಲಿಗೆ 358 ಸೆಕ್ಷನ್‌ಗಳನ್ನು ಹೊಂದಿದೆ. ಇಲ್ಲೂ175 ಸೆಕ್ಷನ್‌ಗಳನ್ನು ಬದಲಿಸಿ, 8 ಹೊಸ ಸೆಕ್ಷನ್‌ಗಳನ್ನು ಸೇರಿಸಿ, 22 ಸೆಕ್ಷನ್‌ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಈಗ 513 ಸೆಕ್ಷನ್‌ಗಳನ್ನು ಹೊಂದಿದ್ದು, ಹಳೆಯ ಕಾನೂನಿನ 160 ಸೆಕ್ಷನ್‌ಗಳನ್ನು ಬದಲಾಯಿಸಲಾಗಿದೆ. ಅದರಲ್ಲಿ 9 ಹೊಸ ಸೆಕ್ಷನ್‌ ಸೇರ್ಪಡೆ, 9 ಸೆಕ್ಷನ್‌ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ಸಾಕ್ಷಿ ಸಂಹಿತೆ ಹಿಂದಿನ 167ರ ಬದಲಿಗೆ 170 ವಿಭಾಗಗಳನ್ನು ಹೊಂದಿರುತ್ತದೆ. 23 ವಿಭಾಗಗಳನ್ನು ಬದಲಾಯಿಸಲಾಗಿದೆ. ಒಂದು ಹೊಸ ವಿಭಾಗ ಸೇರಿಸಲಾಗಿದೆ ಮತ್ತು 5 ವಿಭಾಗಗಳನ್ನು ರದ್ದುಗೊಳಿಸಲಾಗಿದೆ.

ಹೊಸ ಕಾನೂನುಗಳ ಅನುಷ್ಠಾನದ ನಂತರ, ಎಫ್‌ಐಆರ್‌ನಿಂದ ನ್ಯಾಯಾಲಯದ ತೀರ್ಪಿನವರೆಗೆ, ಸಂಪೂರ್ಣ ಪ್ರಕ್ರಿಯೆಯು ಆನ್‌ಲೈನ್‌ ಆಗಿರುತ್ತದೆ ಮತ್ತು ಭಾರತವು ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿಆಧುನಿಕ ತಂತ್ರಜ್ಞಾನವನ್ನು ಅತಿ ಹೆಚ್ಚು ಬಳಸುವ ದೇಶವಾಗಲಿದೆ. ಈ ಕಾನೂನುಗಳು ತಾರೀಖ್‌-ಪೆ-ತಾರೀಖ್‌ (ಪದೇಪದೆ ವಿಚಾರಣೆ ಮುಂದೂಡುವುದು) ಪ್ರವೃತ್ತಿಗೆ ಅಂತ್ಯ ಹಾಡುವ ಜತೆಗೆ ಮೂರು ವರ್ಷಗಳಲ್ಲಿ ನ್ಯಾಯವನ್ನು ನೀಡುವ ನ್ಯಾಯಾಂಗ ವ್ಯವಸ್ಥೆ ಖಾತ್ರಿಪಡಿಸುತ್ತದೆ ಎನ್ನಲಾಗುತ್ತಿದೆ.

ನಮ್ಮ ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಎಲ್ಲಾ 7 ವಲಯಗಳು, 6 ಕಮಿಷನರೇಟ್ ಘಟಕಗಳು ಮತ್ತು 1063 ಪೊಲೀಸ್ ಠಾಣೆಗಳಿಗೆ ತರಬೇತಿ ನೀಡಲಾಗಿದ್ದು, ಈ ವಿಷಯದ ಬಗ್ಗೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ತಿಳಿಸಿದ್ದಾರೆ.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

3 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

3 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

15 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

18 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

19 hours ago