ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಹೊಸ ಮೂರು ಕ್ರಿಮಿನಲ್ ಕಾನೂನುಗಳ ಜಾರಿ: ಇದರ ಕಂಪ್ಲೀಟ್ ಮಾಹಿತಿ ಇಲ್ಲಿದೆ…

ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ‘ಇಂಡಿಯನ್‌ ಪೀನಲ್‌ ಕೋಡ್‌'(ಐಪಿಸಿ), ‘ಕೋಡ್‌ ಆಫ್‌ ಕ್ರಿಮಿನಲ್‌ ಪ್ರೊಸಿಜರ್‌'(ಸಿಆರ್‌ಪಿಸಿ) ಮತ್ತು ‘ಎವಿಡೆನ್ಸ್‌ ಆಕ್ಟ್’ಗಳ ಬದಲಿಗೆ ಇಂದಿನಿಂದ (ಜುಲೈ.1) ಹೊಸ ಮೂರು ಕ್ರಿಮಿನಲ್ ಕಾನೂನುಗಳಾದ ‘ಭಾರತೀಯ ನ್ಯಾಯ ಸಂಹಿತಾ'(ಬಿಎನ್‌ಎಸ್‌), ‘ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ'(ಬಿಎನ್‌ಎಸ್‌ಎಸ್‌) ಮತ್ತು ‘ಭಾರತೀಯ ಸಾಕ್ಷ್ಯ ಅಧಿನಿಯಮ'(ಬಿಎಸ್‌ಎ) ದೇಶಾದ್ಯಂತ ಜಾರಿಯಾಗಿವೆ.

1.ಭಾರತೀಯ ದಂಡ ಸಂಹಿತೆ (ಐಪಿಸಿ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್‌)

2.ಕ್ರಿಮಿನಲ್‌ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌)

3.ಭಾರತೀಯ ಸಾಕ್ಷ್ಯ ಕಾಯಿದೆ ಬದಲಿಗೆ ಭಾರತೀಯ ಸಾಕ್ಷಿ ಅಧಿನಿಯಮ(ಬಿಎಸ್‌ಎ) ಜಾರಿ

ಹಳೆಯ ಕಾನೂನುಗಳು ಬ್ರಿಟಿಷ್‌ ಸಾಮ್ರಾಜ್ಯದ ಹಿತಾಸಕ್ತಿಗೆ ಆದ್ಯತೆ ನೀಡುತ್ತಿದ್ದವು. ಆದರೆ, ಈ ಮೂರು ಹೊಸ ಕಾನೂನುಗಳ ಉದ್ದೇಶ ಶಿಕ್ಷೆ ನೀಡುವ ಬದಲಿಗೆ ನ್ಯಾಯ ಒದಗಿಸುವುದಾಗಿದೆ.

ಭಾರತೀಯ ದಂಡ ಸಂಹಿತೆ ಬದಲಿಗೆ ಬರಲಿರುವ ಭಾರತೀಯ ನ್ಯಾಯ ಸಂಹಿತಾ ಕಾಯಿದೆಯು ಹಿಂದಿನ 511 ಸೆಕ್ಷನ್‌ಗಳ ಬದಲಿಗೆ 358 ಸೆಕ್ಷನ್‌ಗಳನ್ನು ಹೊಂದಿದೆ. ಇಲ್ಲೂ175 ಸೆಕ್ಷನ್‌ಗಳನ್ನು ಬದಲಿಸಿ, 8 ಹೊಸ ಸೆಕ್ಷನ್‌ಗಳನ್ನು ಸೇರಿಸಿ, 22 ಸೆಕ್ಷನ್‌ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಈಗ 513 ಸೆಕ್ಷನ್‌ಗಳನ್ನು ಹೊಂದಿದ್ದು, ಹಳೆಯ ಕಾನೂನಿನ 160 ಸೆಕ್ಷನ್‌ಗಳನ್ನು ಬದಲಾಯಿಸಲಾಗಿದೆ. ಅದರಲ್ಲಿ 9 ಹೊಸ ಸೆಕ್ಷನ್‌ ಸೇರ್ಪಡೆ, 9 ಸೆಕ್ಷನ್‌ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ಸಾಕ್ಷಿ ಸಂಹಿತೆ ಹಿಂದಿನ 167ರ ಬದಲಿಗೆ 170 ವಿಭಾಗಗಳನ್ನು ಹೊಂದಿರುತ್ತದೆ. 23 ವಿಭಾಗಗಳನ್ನು ಬದಲಾಯಿಸಲಾಗಿದೆ. ಒಂದು ಹೊಸ ವಿಭಾಗ ಸೇರಿಸಲಾಗಿದೆ ಮತ್ತು 5 ವಿಭಾಗಗಳನ್ನು ರದ್ದುಗೊಳಿಸಲಾಗಿದೆ.

ಹೊಸ ಕಾನೂನುಗಳ ಅನುಷ್ಠಾನದ ನಂತರ, ಎಫ್‌ಐಆರ್‌ನಿಂದ ನ್ಯಾಯಾಲಯದ ತೀರ್ಪಿನವರೆಗೆ, ಸಂಪೂರ್ಣ ಪ್ರಕ್ರಿಯೆಯು ಆನ್‌ಲೈನ್‌ ಆಗಿರುತ್ತದೆ ಮತ್ತು ಭಾರತವು ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿಆಧುನಿಕ ತಂತ್ರಜ್ಞಾನವನ್ನು ಅತಿ ಹೆಚ್ಚು ಬಳಸುವ ದೇಶವಾಗಲಿದೆ. ಈ ಕಾನೂನುಗಳು ತಾರೀಖ್‌-ಪೆ-ತಾರೀಖ್‌ (ಪದೇಪದೆ ವಿಚಾರಣೆ ಮುಂದೂಡುವುದು) ಪ್ರವೃತ್ತಿಗೆ ಅಂತ್ಯ ಹಾಡುವ ಜತೆಗೆ ಮೂರು ವರ್ಷಗಳಲ್ಲಿ ನ್ಯಾಯವನ್ನು ನೀಡುವ ನ್ಯಾಯಾಂಗ ವ್ಯವಸ್ಥೆ ಖಾತ್ರಿಪಡಿಸುತ್ತದೆ ಎನ್ನಲಾಗುತ್ತಿದೆ.

ನಮ್ಮ ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಎಲ್ಲಾ 7 ವಲಯಗಳು, 6 ಕಮಿಷನರೇಟ್ ಘಟಕಗಳು ಮತ್ತು 1063 ಪೊಲೀಸ್ ಠಾಣೆಗಳಿಗೆ ತರಬೇತಿ ನೀಡಲಾಗಿದ್ದು, ಈ ವಿಷಯದ ಬಗ್ಗೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ತಿಳಿಸಿದ್ದಾರೆ.

Ramesh Babu

Journalist

Recent Posts

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

51 minutes ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

3 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

4 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

12 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

15 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

23 hours ago