ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಹೊಸ ಮೂರು ಕ್ರಿಮಿನಲ್ ಕಾನೂನುಗಳ ಜಾರಿ: ಇದರ ಕಂಪ್ಲೀಟ್ ಮಾಹಿತಿ ಇಲ್ಲಿದೆ…

ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ‘ಇಂಡಿಯನ್‌ ಪೀನಲ್‌ ಕೋಡ್‌'(ಐಪಿಸಿ), ‘ಕೋಡ್‌ ಆಫ್‌ ಕ್ರಿಮಿನಲ್‌ ಪ್ರೊಸಿಜರ್‌'(ಸಿಆರ್‌ಪಿಸಿ) ಮತ್ತು ‘ಎವಿಡೆನ್ಸ್‌ ಆಕ್ಟ್’ಗಳ ಬದಲಿಗೆ ಇಂದಿನಿಂದ (ಜುಲೈ.1) ಹೊಸ ಮೂರು ಕ್ರಿಮಿನಲ್ ಕಾನೂನುಗಳಾದ ‘ಭಾರತೀಯ ನ್ಯಾಯ ಸಂಹಿತಾ'(ಬಿಎನ್‌ಎಸ್‌), ‘ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ'(ಬಿಎನ್‌ಎಸ್‌ಎಸ್‌) ಮತ್ತು ‘ಭಾರತೀಯ ಸಾಕ್ಷ್ಯ ಅಧಿನಿಯಮ'(ಬಿಎಸ್‌ಎ) ದೇಶಾದ್ಯಂತ ಜಾರಿಯಾಗಿವೆ.

1.ಭಾರತೀಯ ದಂಡ ಸಂಹಿತೆ (ಐಪಿಸಿ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್‌)

2.ಕ್ರಿಮಿನಲ್‌ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌)

3.ಭಾರತೀಯ ಸಾಕ್ಷ್ಯ ಕಾಯಿದೆ ಬದಲಿಗೆ ಭಾರತೀಯ ಸಾಕ್ಷಿ ಅಧಿನಿಯಮ(ಬಿಎಸ್‌ಎ) ಜಾರಿ

ಹಳೆಯ ಕಾನೂನುಗಳು ಬ್ರಿಟಿಷ್‌ ಸಾಮ್ರಾಜ್ಯದ ಹಿತಾಸಕ್ತಿಗೆ ಆದ್ಯತೆ ನೀಡುತ್ತಿದ್ದವು. ಆದರೆ, ಈ ಮೂರು ಹೊಸ ಕಾನೂನುಗಳ ಉದ್ದೇಶ ಶಿಕ್ಷೆ ನೀಡುವ ಬದಲಿಗೆ ನ್ಯಾಯ ಒದಗಿಸುವುದಾಗಿದೆ.

ಭಾರತೀಯ ದಂಡ ಸಂಹಿತೆ ಬದಲಿಗೆ ಬರಲಿರುವ ಭಾರತೀಯ ನ್ಯಾಯ ಸಂಹಿತಾ ಕಾಯಿದೆಯು ಹಿಂದಿನ 511 ಸೆಕ್ಷನ್‌ಗಳ ಬದಲಿಗೆ 358 ಸೆಕ್ಷನ್‌ಗಳನ್ನು ಹೊಂದಿದೆ. ಇಲ್ಲೂ175 ಸೆಕ್ಷನ್‌ಗಳನ್ನು ಬದಲಿಸಿ, 8 ಹೊಸ ಸೆಕ್ಷನ್‌ಗಳನ್ನು ಸೇರಿಸಿ, 22 ಸೆಕ್ಷನ್‌ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಈಗ 513 ಸೆಕ್ಷನ್‌ಗಳನ್ನು ಹೊಂದಿದ್ದು, ಹಳೆಯ ಕಾನೂನಿನ 160 ಸೆಕ್ಷನ್‌ಗಳನ್ನು ಬದಲಾಯಿಸಲಾಗಿದೆ. ಅದರಲ್ಲಿ 9 ಹೊಸ ಸೆಕ್ಷನ್‌ ಸೇರ್ಪಡೆ, 9 ಸೆಕ್ಷನ್‌ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ಸಾಕ್ಷಿ ಸಂಹಿತೆ ಹಿಂದಿನ 167ರ ಬದಲಿಗೆ 170 ವಿಭಾಗಗಳನ್ನು ಹೊಂದಿರುತ್ತದೆ. 23 ವಿಭಾಗಗಳನ್ನು ಬದಲಾಯಿಸಲಾಗಿದೆ. ಒಂದು ಹೊಸ ವಿಭಾಗ ಸೇರಿಸಲಾಗಿದೆ ಮತ್ತು 5 ವಿಭಾಗಗಳನ್ನು ರದ್ದುಗೊಳಿಸಲಾಗಿದೆ.

ಹೊಸ ಕಾನೂನುಗಳ ಅನುಷ್ಠಾನದ ನಂತರ, ಎಫ್‌ಐಆರ್‌ನಿಂದ ನ್ಯಾಯಾಲಯದ ತೀರ್ಪಿನವರೆಗೆ, ಸಂಪೂರ್ಣ ಪ್ರಕ್ರಿಯೆಯು ಆನ್‌ಲೈನ್‌ ಆಗಿರುತ್ತದೆ ಮತ್ತು ಭಾರತವು ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿಆಧುನಿಕ ತಂತ್ರಜ್ಞಾನವನ್ನು ಅತಿ ಹೆಚ್ಚು ಬಳಸುವ ದೇಶವಾಗಲಿದೆ. ಈ ಕಾನೂನುಗಳು ತಾರೀಖ್‌-ಪೆ-ತಾರೀಖ್‌ (ಪದೇಪದೆ ವಿಚಾರಣೆ ಮುಂದೂಡುವುದು) ಪ್ರವೃತ್ತಿಗೆ ಅಂತ್ಯ ಹಾಡುವ ಜತೆಗೆ ಮೂರು ವರ್ಷಗಳಲ್ಲಿ ನ್ಯಾಯವನ್ನು ನೀಡುವ ನ್ಯಾಯಾಂಗ ವ್ಯವಸ್ಥೆ ಖಾತ್ರಿಪಡಿಸುತ್ತದೆ ಎನ್ನಲಾಗುತ್ತಿದೆ.

ನಮ್ಮ ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಎಲ್ಲಾ 7 ವಲಯಗಳು, 6 ಕಮಿಷನರೇಟ್ ಘಟಕಗಳು ಮತ್ತು 1063 ಪೊಲೀಸ್ ಠಾಣೆಗಳಿಗೆ ತರಬೇತಿ ನೀಡಲಾಗಿದ್ದು, ಈ ವಿಷಯದ ಬಗ್ಗೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ತಿಳಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago