ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ‘ಇಂಡಿಯನ್ ಪೀನಲ್ ಕೋಡ್'(ಐಪಿಸಿ), ‘ಕೋಡ್ ಆಫ್ ಕ್ರಿಮಿನಲ್ ಪ್ರೊಸಿಜರ್'(ಸಿಆರ್ಪಿಸಿ) ಮತ್ತು ‘ಎವಿಡೆನ್ಸ್ ಆಕ್ಟ್’ಗಳ ಬದಲಿಗೆ ಇಂದಿನಿಂದ (ಜುಲೈ.1) ಹೊಸ ಮೂರು ಕ್ರಿಮಿನಲ್ ಕಾನೂನುಗಳಾದ ‘ಭಾರತೀಯ ನ್ಯಾಯ ಸಂಹಿತಾ'(ಬಿಎನ್ಎಸ್), ‘ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ'(ಬಿಎನ್ಎಸ್ಎಸ್) ಮತ್ತು ‘ಭಾರತೀಯ ಸಾಕ್ಷ್ಯ ಅಧಿನಿಯಮ'(ಬಿಎಸ್ಎ) ದೇಶಾದ್ಯಂತ ಜಾರಿಯಾಗಿವೆ.
1.ಭಾರತೀಯ ದಂಡ ಸಂಹಿತೆ (ಐಪಿಸಿ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ(ಬಿಎನ್ಎಸ್)
2.ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್)
3.ಭಾರತೀಯ ಸಾಕ್ಷ್ಯ ಕಾಯಿದೆ ಬದಲಿಗೆ ಭಾರತೀಯ ಸಾಕ್ಷಿ ಅಧಿನಿಯಮ(ಬಿಎಸ್ಎ) ಜಾರಿ
ಹಳೆಯ ಕಾನೂನುಗಳು ಬ್ರಿಟಿಷ್ ಸಾಮ್ರಾಜ್ಯದ ಹಿತಾಸಕ್ತಿಗೆ ಆದ್ಯತೆ ನೀಡುತ್ತಿದ್ದವು. ಆದರೆ, ಈ ಮೂರು ಹೊಸ ಕಾನೂನುಗಳ ಉದ್ದೇಶ ಶಿಕ್ಷೆ ನೀಡುವ ಬದಲಿಗೆ ನ್ಯಾಯ ಒದಗಿಸುವುದಾಗಿದೆ.
ಭಾರತೀಯ ದಂಡ ಸಂಹಿತೆ ಬದಲಿಗೆ ಬರಲಿರುವ ಭಾರತೀಯ ನ್ಯಾಯ ಸಂಹಿತಾ ಕಾಯಿದೆಯು ಹಿಂದಿನ 511 ಸೆಕ್ಷನ್ಗಳ ಬದಲಿಗೆ 358 ಸೆಕ್ಷನ್ಗಳನ್ನು ಹೊಂದಿದೆ. ಇಲ್ಲೂ175 ಸೆಕ್ಷನ್ಗಳನ್ನು ಬದಲಿಸಿ, 8 ಹೊಸ ಸೆಕ್ಷನ್ಗಳನ್ನು ಸೇರಿಸಿ, 22 ಸೆಕ್ಷನ್ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಈಗ 513 ಸೆಕ್ಷನ್ಗಳನ್ನು ಹೊಂದಿದ್ದು, ಹಳೆಯ ಕಾನೂನಿನ 160 ಸೆಕ್ಷನ್ಗಳನ್ನು ಬದಲಾಯಿಸಲಾಗಿದೆ. ಅದರಲ್ಲಿ 9 ಹೊಸ ಸೆಕ್ಷನ್ ಸೇರ್ಪಡೆ, 9 ಸೆಕ್ಷನ್ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ಸಾಕ್ಷಿ ಸಂಹಿತೆ ಹಿಂದಿನ 167ರ ಬದಲಿಗೆ 170 ವಿಭಾಗಗಳನ್ನು ಹೊಂದಿರುತ್ತದೆ. 23 ವಿಭಾಗಗಳನ್ನು ಬದಲಾಯಿಸಲಾಗಿದೆ. ಒಂದು ಹೊಸ ವಿಭಾಗ ಸೇರಿಸಲಾಗಿದೆ ಮತ್ತು 5 ವಿಭಾಗಗಳನ್ನು ರದ್ದುಗೊಳಿಸಲಾಗಿದೆ.
ಹೊಸ ಕಾನೂನುಗಳ ಅನುಷ್ಠಾನದ ನಂತರ, ಎಫ್ಐಆರ್ನಿಂದ ನ್ಯಾಯಾಲಯದ ತೀರ್ಪಿನವರೆಗೆ, ಸಂಪೂರ್ಣ ಪ್ರಕ್ರಿಯೆಯು ಆನ್ಲೈನ್ ಆಗಿರುತ್ತದೆ ಮತ್ತು ಭಾರತವು ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿಆಧುನಿಕ ತಂತ್ರಜ್ಞಾನವನ್ನು ಅತಿ ಹೆಚ್ಚು ಬಳಸುವ ದೇಶವಾಗಲಿದೆ. ಈ ಕಾನೂನುಗಳು ತಾರೀಖ್-ಪೆ-ತಾರೀಖ್ (ಪದೇಪದೆ ವಿಚಾರಣೆ ಮುಂದೂಡುವುದು) ಪ್ರವೃತ್ತಿಗೆ ಅಂತ್ಯ ಹಾಡುವ ಜತೆಗೆ ಮೂರು ವರ್ಷಗಳಲ್ಲಿ ನ್ಯಾಯವನ್ನು ನೀಡುವ ನ್ಯಾಯಾಂಗ ವ್ಯವಸ್ಥೆ ಖಾತ್ರಿಪಡಿಸುತ್ತದೆ ಎನ್ನಲಾಗುತ್ತಿದೆ.
ನಮ್ಮ ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಎಲ್ಲಾ 7 ವಲಯಗಳು, 6 ಕಮಿಷನರೇಟ್ ಘಟಕಗಳು ಮತ್ತು 1063 ಪೊಲೀಸ್ ಠಾಣೆಗಳಿಗೆ ತರಬೇತಿ ನೀಡಲಾಗಿದ್ದು, ಈ ವಿಷಯದ ಬಗ್ಗೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…