ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಹೊಸ ಮೂರು ಕ್ರಿಮಿನಲ್ ಕಾನೂನುಗಳ ಜಾರಿ: ಇದರ ಕಂಪ್ಲೀಟ್ ಮಾಹಿತಿ ಇಲ್ಲಿದೆ…

ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ‘ಇಂಡಿಯನ್‌ ಪೀನಲ್‌ ಕೋಡ್‌'(ಐಪಿಸಿ), ‘ಕೋಡ್‌ ಆಫ್‌ ಕ್ರಿಮಿನಲ್‌ ಪ್ರೊಸಿಜರ್‌'(ಸಿಆರ್‌ಪಿಸಿ) ಮತ್ತು ‘ಎವಿಡೆನ್ಸ್‌ ಆಕ್ಟ್’ಗಳ ಬದಲಿಗೆ ಇಂದಿನಿಂದ (ಜುಲೈ.1) ಹೊಸ ಮೂರು ಕ್ರಿಮಿನಲ್ ಕಾನೂನುಗಳಾದ ‘ಭಾರತೀಯ ನ್ಯಾಯ ಸಂಹಿತಾ'(ಬಿಎನ್‌ಎಸ್‌), ‘ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ'(ಬಿಎನ್‌ಎಸ್‌ಎಸ್‌) ಮತ್ತು ‘ಭಾರತೀಯ ಸಾಕ್ಷ್ಯ ಅಧಿನಿಯಮ'(ಬಿಎಸ್‌ಎ) ದೇಶಾದ್ಯಂತ ಜಾರಿಯಾಗಿವೆ.

1.ಭಾರತೀಯ ದಂಡ ಸಂಹಿತೆ (ಐಪಿಸಿ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್‌)

2.ಕ್ರಿಮಿನಲ್‌ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌)

3.ಭಾರತೀಯ ಸಾಕ್ಷ್ಯ ಕಾಯಿದೆ ಬದಲಿಗೆ ಭಾರತೀಯ ಸಾಕ್ಷಿ ಅಧಿನಿಯಮ(ಬಿಎಸ್‌ಎ) ಜಾರಿ

ಹಳೆಯ ಕಾನೂನುಗಳು ಬ್ರಿಟಿಷ್‌ ಸಾಮ್ರಾಜ್ಯದ ಹಿತಾಸಕ್ತಿಗೆ ಆದ್ಯತೆ ನೀಡುತ್ತಿದ್ದವು. ಆದರೆ, ಈ ಮೂರು ಹೊಸ ಕಾನೂನುಗಳ ಉದ್ದೇಶ ಶಿಕ್ಷೆ ನೀಡುವ ಬದಲಿಗೆ ನ್ಯಾಯ ಒದಗಿಸುವುದಾಗಿದೆ.

ಭಾರತೀಯ ದಂಡ ಸಂಹಿತೆ ಬದಲಿಗೆ ಬರಲಿರುವ ಭಾರತೀಯ ನ್ಯಾಯ ಸಂಹಿತಾ ಕಾಯಿದೆಯು ಹಿಂದಿನ 511 ಸೆಕ್ಷನ್‌ಗಳ ಬದಲಿಗೆ 358 ಸೆಕ್ಷನ್‌ಗಳನ್ನು ಹೊಂದಿದೆ. ಇಲ್ಲೂ175 ಸೆಕ್ಷನ್‌ಗಳನ್ನು ಬದಲಿಸಿ, 8 ಹೊಸ ಸೆಕ್ಷನ್‌ಗಳನ್ನು ಸೇರಿಸಿ, 22 ಸೆಕ್ಷನ್‌ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಈಗ 513 ಸೆಕ್ಷನ್‌ಗಳನ್ನು ಹೊಂದಿದ್ದು, ಹಳೆಯ ಕಾನೂನಿನ 160 ಸೆಕ್ಷನ್‌ಗಳನ್ನು ಬದಲಾಯಿಸಲಾಗಿದೆ. ಅದರಲ್ಲಿ 9 ಹೊಸ ಸೆಕ್ಷನ್‌ ಸೇರ್ಪಡೆ, 9 ಸೆಕ್ಷನ್‌ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ಸಾಕ್ಷಿ ಸಂಹಿತೆ ಹಿಂದಿನ 167ರ ಬದಲಿಗೆ 170 ವಿಭಾಗಗಳನ್ನು ಹೊಂದಿರುತ್ತದೆ. 23 ವಿಭಾಗಗಳನ್ನು ಬದಲಾಯಿಸಲಾಗಿದೆ. ಒಂದು ಹೊಸ ವಿಭಾಗ ಸೇರಿಸಲಾಗಿದೆ ಮತ್ತು 5 ವಿಭಾಗಗಳನ್ನು ರದ್ದುಗೊಳಿಸಲಾಗಿದೆ.

ಹೊಸ ಕಾನೂನುಗಳ ಅನುಷ್ಠಾನದ ನಂತರ, ಎಫ್‌ಐಆರ್‌ನಿಂದ ನ್ಯಾಯಾಲಯದ ತೀರ್ಪಿನವರೆಗೆ, ಸಂಪೂರ್ಣ ಪ್ರಕ್ರಿಯೆಯು ಆನ್‌ಲೈನ್‌ ಆಗಿರುತ್ತದೆ ಮತ್ತು ಭಾರತವು ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿಆಧುನಿಕ ತಂತ್ರಜ್ಞಾನವನ್ನು ಅತಿ ಹೆಚ್ಚು ಬಳಸುವ ದೇಶವಾಗಲಿದೆ. ಈ ಕಾನೂನುಗಳು ತಾರೀಖ್‌-ಪೆ-ತಾರೀಖ್‌ (ಪದೇಪದೆ ವಿಚಾರಣೆ ಮುಂದೂಡುವುದು) ಪ್ರವೃತ್ತಿಗೆ ಅಂತ್ಯ ಹಾಡುವ ಜತೆಗೆ ಮೂರು ವರ್ಷಗಳಲ್ಲಿ ನ್ಯಾಯವನ್ನು ನೀಡುವ ನ್ಯಾಯಾಂಗ ವ್ಯವಸ್ಥೆ ಖಾತ್ರಿಪಡಿಸುತ್ತದೆ ಎನ್ನಲಾಗುತ್ತಿದೆ.

ನಮ್ಮ ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಎಲ್ಲಾ 7 ವಲಯಗಳು, 6 ಕಮಿಷನರೇಟ್ ಘಟಕಗಳು ಮತ್ತು 1063 ಪೊಲೀಸ್ ಠಾಣೆಗಳಿಗೆ ತರಬೇತಿ ನೀಡಲಾಗಿದ್ದು, ಈ ವಿಷಯದ ಬಗ್ಗೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ತಿಳಿಸಿದ್ದಾರೆ.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

11 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

12 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

13 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

14 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

16 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

16 hours ago