ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಹೊಸ ಮೂರು ಕ್ರಿಮಿನಲ್ ಕಾನೂನುಗಳ ಜಾರಿ: ಇದರ ಕಂಪ್ಲೀಟ್ ಮಾಹಿತಿ ಇಲ್ಲಿದೆ…

ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ‘ಇಂಡಿಯನ್‌ ಪೀನಲ್‌ ಕೋಡ್‌'(ಐಪಿಸಿ), ‘ಕೋಡ್‌ ಆಫ್‌ ಕ್ರಿಮಿನಲ್‌ ಪ್ರೊಸಿಜರ್‌'(ಸಿಆರ್‌ಪಿಸಿ) ಮತ್ತು ‘ಎವಿಡೆನ್ಸ್‌ ಆಕ್ಟ್’ಗಳ ಬದಲಿಗೆ ಇಂದಿನಿಂದ (ಜುಲೈ.1) ಹೊಸ ಮೂರು ಕ್ರಿಮಿನಲ್ ಕಾನೂನುಗಳಾದ ‘ಭಾರತೀಯ ನ್ಯಾಯ ಸಂಹಿತಾ'(ಬಿಎನ್‌ಎಸ್‌), ‘ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ'(ಬಿಎನ್‌ಎಸ್‌ಎಸ್‌) ಮತ್ತು ‘ಭಾರತೀಯ ಸಾಕ್ಷ್ಯ ಅಧಿನಿಯಮ'(ಬಿಎಸ್‌ಎ) ದೇಶಾದ್ಯಂತ ಜಾರಿಯಾಗಿವೆ.

1.ಭಾರತೀಯ ದಂಡ ಸಂಹಿತೆ (ಐಪಿಸಿ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್‌)

2.ಕ್ರಿಮಿನಲ್‌ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌)

3.ಭಾರತೀಯ ಸಾಕ್ಷ್ಯ ಕಾಯಿದೆ ಬದಲಿಗೆ ಭಾರತೀಯ ಸಾಕ್ಷಿ ಅಧಿನಿಯಮ(ಬಿಎಸ್‌ಎ) ಜಾರಿ

ಹಳೆಯ ಕಾನೂನುಗಳು ಬ್ರಿಟಿಷ್‌ ಸಾಮ್ರಾಜ್ಯದ ಹಿತಾಸಕ್ತಿಗೆ ಆದ್ಯತೆ ನೀಡುತ್ತಿದ್ದವು. ಆದರೆ, ಈ ಮೂರು ಹೊಸ ಕಾನೂನುಗಳ ಉದ್ದೇಶ ಶಿಕ್ಷೆ ನೀಡುವ ಬದಲಿಗೆ ನ್ಯಾಯ ಒದಗಿಸುವುದಾಗಿದೆ.

ಭಾರತೀಯ ದಂಡ ಸಂಹಿತೆ ಬದಲಿಗೆ ಬರಲಿರುವ ಭಾರತೀಯ ನ್ಯಾಯ ಸಂಹಿತಾ ಕಾಯಿದೆಯು ಹಿಂದಿನ 511 ಸೆಕ್ಷನ್‌ಗಳ ಬದಲಿಗೆ 358 ಸೆಕ್ಷನ್‌ಗಳನ್ನು ಹೊಂದಿದೆ. ಇಲ್ಲೂ175 ಸೆಕ್ಷನ್‌ಗಳನ್ನು ಬದಲಿಸಿ, 8 ಹೊಸ ಸೆಕ್ಷನ್‌ಗಳನ್ನು ಸೇರಿಸಿ, 22 ಸೆಕ್ಷನ್‌ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಈಗ 513 ಸೆಕ್ಷನ್‌ಗಳನ್ನು ಹೊಂದಿದ್ದು, ಹಳೆಯ ಕಾನೂನಿನ 160 ಸೆಕ್ಷನ್‌ಗಳನ್ನು ಬದಲಾಯಿಸಲಾಗಿದೆ. ಅದರಲ್ಲಿ 9 ಹೊಸ ಸೆಕ್ಷನ್‌ ಸೇರ್ಪಡೆ, 9 ಸೆಕ್ಷನ್‌ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ಸಾಕ್ಷಿ ಸಂಹಿತೆ ಹಿಂದಿನ 167ರ ಬದಲಿಗೆ 170 ವಿಭಾಗಗಳನ್ನು ಹೊಂದಿರುತ್ತದೆ. 23 ವಿಭಾಗಗಳನ್ನು ಬದಲಾಯಿಸಲಾಗಿದೆ. ಒಂದು ಹೊಸ ವಿಭಾಗ ಸೇರಿಸಲಾಗಿದೆ ಮತ್ತು 5 ವಿಭಾಗಗಳನ್ನು ರದ್ದುಗೊಳಿಸಲಾಗಿದೆ.

ಹೊಸ ಕಾನೂನುಗಳ ಅನುಷ್ಠಾನದ ನಂತರ, ಎಫ್‌ಐಆರ್‌ನಿಂದ ನ್ಯಾಯಾಲಯದ ತೀರ್ಪಿನವರೆಗೆ, ಸಂಪೂರ್ಣ ಪ್ರಕ್ರಿಯೆಯು ಆನ್‌ಲೈನ್‌ ಆಗಿರುತ್ತದೆ ಮತ್ತು ಭಾರತವು ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿಆಧುನಿಕ ತಂತ್ರಜ್ಞಾನವನ್ನು ಅತಿ ಹೆಚ್ಚು ಬಳಸುವ ದೇಶವಾಗಲಿದೆ. ಈ ಕಾನೂನುಗಳು ತಾರೀಖ್‌-ಪೆ-ತಾರೀಖ್‌ (ಪದೇಪದೆ ವಿಚಾರಣೆ ಮುಂದೂಡುವುದು) ಪ್ರವೃತ್ತಿಗೆ ಅಂತ್ಯ ಹಾಡುವ ಜತೆಗೆ ಮೂರು ವರ್ಷಗಳಲ್ಲಿ ನ್ಯಾಯವನ್ನು ನೀಡುವ ನ್ಯಾಯಾಂಗ ವ್ಯವಸ್ಥೆ ಖಾತ್ರಿಪಡಿಸುತ್ತದೆ ಎನ್ನಲಾಗುತ್ತಿದೆ.

ನಮ್ಮ ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಎಲ್ಲಾ 7 ವಲಯಗಳು, 6 ಕಮಿಷನರೇಟ್ ಘಟಕಗಳು ಮತ್ತು 1063 ಪೊಲೀಸ್ ಠಾಣೆಗಳಿಗೆ ತರಬೇತಿ ನೀಡಲಾಗಿದ್ದು, ಈ ವಿಷಯದ ಬಗ್ಗೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ತಿಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

12 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

16 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

16 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago