“ಭಾರತದ ಅಸ್ಮಿತೆ ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ”

ಭಾರತದ ಅಸ್ಮಿತೆಯಾಗಿರುವ ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬದುಕು ಮತ್ತು ಆದರ್ಶಗಳು ಜಗತ್ತಿನ ಮನ್ನಣೆ ಪಡೆದಿವೆ ಎಂದು ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು  ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಹಾತ್ಮಗಾಂಧಿ ಅವರ  ಶಾಂತಿ ಮತ್ತು ಅಹಿಂಸಾ ಅಸ್ತ್ರಗಳ ಎದುರು ಸುಸಜ್ಜಿತ ಸೇನೆ ಹೊಂದಿದ್ದ ಬ್ರಿಟನ್‌ ಸರ್ಕಾರ ತಲೆಬಾಗಿತ್ತು. ಜಾಗತಿಕ ಮಟ್ಟದಲ್ಲಿ ಮಹಾತ್ಮಗಾಂಧಿ ಅವರ  ಹೋರಾಟದ ಹಾದಿಯನ್ನು ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಮೊದಲಾದವರು ಅನುಸರಿಸಿದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರಾಮಾಣಿಕತೆ, ಸರಳತೆ, ದೇಶಭಕ್ತಿ, ನಿಸ್ವಾರ್ಥ ಸೇವೆ ಸದಾ ಸ್ಮರಣೀಯವಾಗಿದೆ. ಜೈ ಜವಾನ್, ಜೈ ಕಿಸಾನ್” ಘೋಷವಾಕ್ಯದ ಮೂಲಕ ಭಾರತ  ದೇಶದ ಶ್ರಮಜೀವಿಗಳನ್ನು ಪ್ರೋತ್ಸಾಹಿಸಿದರು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ  ಕನ್ನಡ ಸಾಹಿತ್ಯ ಪರಿಷತ್ತು ಜ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಮಹಾತ್ಮಗಾಂಧಿ ಅವರ ತತ್ತ್ವ ಚಿಂತನೆ ಮತ್ತು ಆದರ್ಶಗಳನ್ನು ದಮನ ಮಾಡುವ ಹುನ್ನಾರಗಳು ಖಂಡನೀಯವಾಗಿದೆ. ಇಂದಿನ ಯುವಜನತೆ ಮಹಾತ್ಮಗಾಂಧಿ ಅವರ ವಿಚಾರಧಾರೆಗಳನ್ನು ಸಮಗ್ರವಾಗಿ ಅರ್ಥ ಮಾಡಿಕೊಳ್ಳಬೇಕು. ಮಹಾತ್ಮಗಾಂಧಿ ಅವರ ಆದರ್ಶಗಳು ಯುವಜನತೆಗೆ  ಮಾರ್ಗದರ್ಶಕ ಆಗಬೇಕು. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನವು ಸರಳತೆ ಮತ್ತು ನೈತಿಕ ನಡವಳಿಕೆಗೆ ಸಾಕ್ಷಿಯಾಗಿದೆ. ಭಾರತ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಬದ್ಧತೆ  ಎಲ್ಲಾ ಕಾಲಕ್ಕೂ  ಪ್ರೇರಣೆಯಾಗಿದೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ,  ದೊಡ್ಡಬಳ್ಳಾಪುರ ತಾಲ್ಲೂಕಿನ ಹಲವಾರು ಸ್ವಾತಂತ್ರ್ಯ ಹೋರಾಟಗಾರರಿಗೆ  ಮಹಾತ್ಮಗಾಂಧಿ ಅವರ ಪ್ರೇರಣಾಶಕ್ತಿಯಾಗಿದ್ದರು. ಜವಳಿ ಕ್ಷೇತ್ರದಲ್ಲಿ ಸುಸ್ಥಿರತೆ, ಪರಿಸರ ಸ್ನೇಹಪರತೆಯನ್ನು ಭಾರತೀಯ ಪ್ರಜೆಗಳಿಗೆ ಮಹಾತ್ಮಗಾಂಧಿ ಅರಿವು ಮೂಡಿಸಿದ್ದರು. ಭಾರತ ಕಂಡ ಅತ್ಯಂತ ಪ್ರಾಮಾಣಿಕ, ದಕ್ಷ ಪ್ರಧಾನಿ ಎಂದರೆ ಲಾಲ್ ಬಹಾದ್ದೂರ್ ಶಾಸ್ತ್ರಿ ಆಗಿದ್ದಾರೆ. ಅವರ ಸ್ವಾಭಿಮಾನ ಮತ್ತು ದೇಶಾಭಿಮಾನ ಭಾರತೀಯ ನಾಗರೀಕರಿಗೆ ಎಂದಿಗೂ ಮಾದರಿ ಎಂದರು.

ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ  ನಾಗರತ್ನಮ್ಮ, ಸಫೀರ್, , ಇಸ್ತೂರು ಕೋದಂಡರಾಮ ಭಜನಾ ಮಂಡಲಿ ಕಾರ್ಯದರ್ಶಿ ರಂಗಸ್ವಾಮಯ್ಯ, ರಂಗಭೂಮಿ ಕಲಾವಿದ ಸಂಘದ ಜಿಲ್ಲಾ ಕಾರ್ಯದರ್ಶಿ  ಪುಟ್ಟಸಿದ್ದಯ್ಯ, ಗೆಜ್ಜಗದಹಳ್ಳಿ ಮುನಿರಾಜು,   ಲಾವಣ್ಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್, ಕವಿಗಳಾದ ಮಹಾದೇವಪ್ಪ, ಅಂಜನಗೌಡ, ಶ್ರೀನಿವಾಸ್,   ನಾಗದಳ ನಟರಾಜ್, ಕನ್ನಡ ಜಾಗೃತ ವೇದಿಕೆಯ ಜಿಲ್ಲಾಧ್ಯಕ್ಷ ನಾಗರಾಜ್, ತಾಲ್ಲೂಕು ಅಧ್ಯಕ್ಷ ಶಶಿಧರ್, ಮಂಜುನಾಥ್  ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

15 hours ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

22 hours ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

3 days ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

3 days ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

3 days ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

5 days ago