ಭಾರತದ ಬೌಲಿಂಗ್ ದಾಳಿಗೆ ಬೆದರಿದ ಕಿವೀಸ್! ರೋಹಿತ್ ಪಡೆಗೆ ಸರಣಿ ಜಯ

ರಾಯಪುರ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತೀಯ ಬೌಲಿಂಗ್ ದಾಳಿಗೆ ಬೆದರಿದ ಪ್ರವಾಸಿ ನ್ಯೂಜಿಲೆಂಡ್ ತಂಡ 34.3 ಓವರುಗಳಲ್ಲಿ 108 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಗಂಟು-ಮೂಟೆ ಕಟ್ಟುವ ಮೂಲಕ ಭಾರತಕ್ಕೆ ಸುಲಭ ಗುರಿ ನೀಡಿತು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ನಾಯಕ ರೋಹಿತ್ ಶರ್ಮಾ ಅವರ ನಿರ್ಧಾರ ಸರಿಯಾಗಿದೆ ಎಂದು ತೋರಿಸಿಕೊಟ್ಟ ಬೌಲಿಂಗ್ ವಿಭಾಗ ಪ್ರವಾಸಿ ತಂಡಕ್ಕೆ ಖಾತೆ ತೆರೆಯುವ ಮೊದಲೇ ಮೊದಲ ಓವರ್ ನಲ್ಲಿಯೇ ಆಘಾತ ನೀಡಿತು, ಹೊಸ ಬಾಲ್ ನಲ್ಲಿ ಮೊದಲ ಓವರ್ ಮಾಡಿದ ಅನುಭವಿ ಬೌಲರ್ ಮಹಮ್ಮದ್ ಶಮಿ ಇನ್ನಿಂಗ್ಸ್ ನ ಐದನೇ ಎಸೆತದಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಫಿನ್ ಅಲೆನ್ ವಿಕೆಟ್ ಪಡೆಯುವ ಮೂಲಕ ಪೆವಿಲಿಯನ್ ಗೆ ಕಳಿಸಿದರು.

ತಂಡದ ಮೊತ್ತ 8 ರನ್ ಗಳಿಸಿದ ಸಂದರ್ಭದಲ್ಲಿ ಹೆನ್ರಿ ನಿಕೋಲ್ಸ್ ಸಿರಾಜ್ ಎಸೆದ ಬಾಲ್ ಕೆಣಕಿ ಸ್ಲಿಪ್ ನಲ್ಲಿದ್ದ ಶುಭಮನ್ ಗಿಲ್ ಗೆ ಕ್ಯಾಚ್ ನೀಡಿದರು, ನಂತರ ಬಂದ ನಾಯಕ ಟಾಮ್ ಲ್ಯಾಥಮ್ ಹಾಗೂ ಮಿಚೆಲ್ ಮತ್ತು ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ಕಾನ್ವೆ ವಿಕೆಟ್ ಒಪ್ಪಿಸಿದರು.

15 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಆಸರೆಯಾದವರು ಗ್ಲೇನ್ ಫಿಲಿಪ್ಸ್ (36), ಬ್ರೆಸ್ವೆಲ್ (22) ಹಾಗೂ ಮಿಚೆಲ್ ಸ್ಯಾಂಟ್ನರ್ (27) ರನ್ ಗಳಿಸಿ ನೂರು ರನ್‌ಗಳ ಗಡಿ ದಾಟಿಸಿದರು, ಈ ಮೂವರನ್ನು ಬಿಟ್ಟು ಬೇರೆ ಯಾವುದೇ ಬ್ಯಾಟ್ಸ್‌ಮನ್ ಎರಡಂಕಿ ದಾಟಲಿಲ್ಲ.

ಭಾರತದ ಪರವಾಗಿ ಮಿಂಚಿದ ಅನುಭವಿ ಬೌಲರ್ ಮಹಮ್ಮದ್ ಶಮಿ ಮೂರು ವಿಕೆಟ್, ಹಾರ್ದಿಕ್ ಪಾಂಡ್ಯ ಹಾಗೂ ವಾಶಿಂಗ್ಟನ್ ಸುಂದರ್ ತಲಾ ಎರಡು ವಿಕೆಟ್ ಮತ್ತು ಸಿರಾಜ್, ಕುಲದೀಪ್ ಯಾದವ್ ಹಾಗೂ ಶಾದು೯ಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದುಕೊಂಡರು.

ಗುರಿ ಬೆನ್ನಟ್ಟಿದ ಭಾರತ ಆರಂಭಿಕ ಜೋಡಿ ಉತ್ತಮ ರನ್ ಪೇರಿಸಿತು, ನಾಯಕ ರೋಹಿತ್ ಶರ್ಮಾ (51) ಹಾಗೂ ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಔಟಾಗದೆ (40) ರನ್ ಗಳಿಸುವ ಮೂಲಕ ಜಯದ ಸನಿಹ ಕೊಂಡೊಯ್ದರು, ರೋಹಿತ್ ಔಟಾದ ನಂತರ ಕ್ರಿಸ್ ಗೆ ಬಂದ ಹಿರಿಯ ಆಟಗಾರ ಸ್ಪಿನ್ನರ್ ಸ್ಯಾಂಟ್ನರ್ ಗೆ ವಿರಾಟ್ ಒಪ್ಪಿಸಿದರು.

ಕೊನೆಯಲ್ಲಿ ಬಡ್ತಿ ಪಡೆದು ಕ್ರಿಸ್ ಗೆ ಬಂದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (11) ರನ್ ಗಳಿಸುವ ಮೂಲಕ ಜಯ ತಂದುಕೊಟ್ಟರು, ಇನ್ನೂ ಒಂದು ಪಂದ್ಯ ಇರುವಾಗಲೇ ಭಾರತ ತಂಡ ಸರಣಿ ವಶಪಡಿಸಿಕೊಂಡಿತು. ಉತ್ತಮ ಬೌಲಿಂಗ್ ಮಾಡಿದ ಅನುಭವಿ ಬೌಲರ್ ಮಹಮ್ಮದ್ ಶಮಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

20 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago