ಭಾರತದ ಬೌಲಿಂಗ್ ದಾಳಿಗೆ ಬೆದರಿದ ಕಿವೀಸ್! ರೋಹಿತ್ ಪಡೆಗೆ ಸರಣಿ ಜಯ

ರಾಯಪುರ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತೀಯ ಬೌಲಿಂಗ್ ದಾಳಿಗೆ ಬೆದರಿದ ಪ್ರವಾಸಿ ನ್ಯೂಜಿಲೆಂಡ್ ತಂಡ 34.3 ಓವರುಗಳಲ್ಲಿ 108 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಗಂಟು-ಮೂಟೆ ಕಟ್ಟುವ ಮೂಲಕ ಭಾರತಕ್ಕೆ ಸುಲಭ ಗುರಿ ನೀಡಿತು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ನಾಯಕ ರೋಹಿತ್ ಶರ್ಮಾ ಅವರ ನಿರ್ಧಾರ ಸರಿಯಾಗಿದೆ ಎಂದು ತೋರಿಸಿಕೊಟ್ಟ ಬೌಲಿಂಗ್ ವಿಭಾಗ ಪ್ರವಾಸಿ ತಂಡಕ್ಕೆ ಖಾತೆ ತೆರೆಯುವ ಮೊದಲೇ ಮೊದಲ ಓವರ್ ನಲ್ಲಿಯೇ ಆಘಾತ ನೀಡಿತು, ಹೊಸ ಬಾಲ್ ನಲ್ಲಿ ಮೊದಲ ಓವರ್ ಮಾಡಿದ ಅನುಭವಿ ಬೌಲರ್ ಮಹಮ್ಮದ್ ಶಮಿ ಇನ್ನಿಂಗ್ಸ್ ನ ಐದನೇ ಎಸೆತದಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಫಿನ್ ಅಲೆನ್ ವಿಕೆಟ್ ಪಡೆಯುವ ಮೂಲಕ ಪೆವಿಲಿಯನ್ ಗೆ ಕಳಿಸಿದರು.

ತಂಡದ ಮೊತ್ತ 8 ರನ್ ಗಳಿಸಿದ ಸಂದರ್ಭದಲ್ಲಿ ಹೆನ್ರಿ ನಿಕೋಲ್ಸ್ ಸಿರಾಜ್ ಎಸೆದ ಬಾಲ್ ಕೆಣಕಿ ಸ್ಲಿಪ್ ನಲ್ಲಿದ್ದ ಶುಭಮನ್ ಗಿಲ್ ಗೆ ಕ್ಯಾಚ್ ನೀಡಿದರು, ನಂತರ ಬಂದ ನಾಯಕ ಟಾಮ್ ಲ್ಯಾಥಮ್ ಹಾಗೂ ಮಿಚೆಲ್ ಮತ್ತು ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ಕಾನ್ವೆ ವಿಕೆಟ್ ಒಪ್ಪಿಸಿದರು.

15 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಆಸರೆಯಾದವರು ಗ್ಲೇನ್ ಫಿಲಿಪ್ಸ್ (36), ಬ್ರೆಸ್ವೆಲ್ (22) ಹಾಗೂ ಮಿಚೆಲ್ ಸ್ಯಾಂಟ್ನರ್ (27) ರನ್ ಗಳಿಸಿ ನೂರು ರನ್‌ಗಳ ಗಡಿ ದಾಟಿಸಿದರು, ಈ ಮೂವರನ್ನು ಬಿಟ್ಟು ಬೇರೆ ಯಾವುದೇ ಬ್ಯಾಟ್ಸ್‌ಮನ್ ಎರಡಂಕಿ ದಾಟಲಿಲ್ಲ.

ಭಾರತದ ಪರವಾಗಿ ಮಿಂಚಿದ ಅನುಭವಿ ಬೌಲರ್ ಮಹಮ್ಮದ್ ಶಮಿ ಮೂರು ವಿಕೆಟ್, ಹಾರ್ದಿಕ್ ಪಾಂಡ್ಯ ಹಾಗೂ ವಾಶಿಂಗ್ಟನ್ ಸುಂದರ್ ತಲಾ ಎರಡು ವಿಕೆಟ್ ಮತ್ತು ಸಿರಾಜ್, ಕುಲದೀಪ್ ಯಾದವ್ ಹಾಗೂ ಶಾದು೯ಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದುಕೊಂಡರು.

ಗುರಿ ಬೆನ್ನಟ್ಟಿದ ಭಾರತ ಆರಂಭಿಕ ಜೋಡಿ ಉತ್ತಮ ರನ್ ಪೇರಿಸಿತು, ನಾಯಕ ರೋಹಿತ್ ಶರ್ಮಾ (51) ಹಾಗೂ ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಔಟಾಗದೆ (40) ರನ್ ಗಳಿಸುವ ಮೂಲಕ ಜಯದ ಸನಿಹ ಕೊಂಡೊಯ್ದರು, ರೋಹಿತ್ ಔಟಾದ ನಂತರ ಕ್ರಿಸ್ ಗೆ ಬಂದ ಹಿರಿಯ ಆಟಗಾರ ಸ್ಪಿನ್ನರ್ ಸ್ಯಾಂಟ್ನರ್ ಗೆ ವಿರಾಟ್ ಒಪ್ಪಿಸಿದರು.

ಕೊನೆಯಲ್ಲಿ ಬಡ್ತಿ ಪಡೆದು ಕ್ರಿಸ್ ಗೆ ಬಂದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (11) ರನ್ ಗಳಿಸುವ ಮೂಲಕ ಜಯ ತಂದುಕೊಟ್ಟರು, ಇನ್ನೂ ಒಂದು ಪಂದ್ಯ ಇರುವಾಗಲೇ ಭಾರತ ತಂಡ ಸರಣಿ ವಶಪಡಿಸಿಕೊಂಡಿತು. ಉತ್ತಮ ಬೌಲಿಂಗ್ ಮಾಡಿದ ಅನುಭವಿ ಬೌಲರ್ ಮಹಮ್ಮದ್ ಶಮಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

8 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

11 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

23 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago