ಭಾರತದ ಬೌಲಿಂಗ್ ದಾಳಿಗೆ ಬೆದರಿದ ಕಿವೀಸ್! ರೋಹಿತ್ ಪಡೆಗೆ ಸರಣಿ ಜಯ

ರಾಯಪುರ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತೀಯ ಬೌಲಿಂಗ್ ದಾಳಿಗೆ ಬೆದರಿದ ಪ್ರವಾಸಿ ನ್ಯೂಜಿಲೆಂಡ್ ತಂಡ 34.3 ಓವರುಗಳಲ್ಲಿ 108 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಗಂಟು-ಮೂಟೆ ಕಟ್ಟುವ ಮೂಲಕ ಭಾರತಕ್ಕೆ ಸುಲಭ ಗುರಿ ನೀಡಿತು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ನಾಯಕ ರೋಹಿತ್ ಶರ್ಮಾ ಅವರ ನಿರ್ಧಾರ ಸರಿಯಾಗಿದೆ ಎಂದು ತೋರಿಸಿಕೊಟ್ಟ ಬೌಲಿಂಗ್ ವಿಭಾಗ ಪ್ರವಾಸಿ ತಂಡಕ್ಕೆ ಖಾತೆ ತೆರೆಯುವ ಮೊದಲೇ ಮೊದಲ ಓವರ್ ನಲ್ಲಿಯೇ ಆಘಾತ ನೀಡಿತು, ಹೊಸ ಬಾಲ್ ನಲ್ಲಿ ಮೊದಲ ಓವರ್ ಮಾಡಿದ ಅನುಭವಿ ಬೌಲರ್ ಮಹಮ್ಮದ್ ಶಮಿ ಇನ್ನಿಂಗ್ಸ್ ನ ಐದನೇ ಎಸೆತದಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಫಿನ್ ಅಲೆನ್ ವಿಕೆಟ್ ಪಡೆಯುವ ಮೂಲಕ ಪೆವಿಲಿಯನ್ ಗೆ ಕಳಿಸಿದರು.

ತಂಡದ ಮೊತ್ತ 8 ರನ್ ಗಳಿಸಿದ ಸಂದರ್ಭದಲ್ಲಿ ಹೆನ್ರಿ ನಿಕೋಲ್ಸ್ ಸಿರಾಜ್ ಎಸೆದ ಬಾಲ್ ಕೆಣಕಿ ಸ್ಲಿಪ್ ನಲ್ಲಿದ್ದ ಶುಭಮನ್ ಗಿಲ್ ಗೆ ಕ್ಯಾಚ್ ನೀಡಿದರು, ನಂತರ ಬಂದ ನಾಯಕ ಟಾಮ್ ಲ್ಯಾಥಮ್ ಹಾಗೂ ಮಿಚೆಲ್ ಮತ್ತು ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ಕಾನ್ವೆ ವಿಕೆಟ್ ಒಪ್ಪಿಸಿದರು.

15 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಆಸರೆಯಾದವರು ಗ್ಲೇನ್ ಫಿಲಿಪ್ಸ್ (36), ಬ್ರೆಸ್ವೆಲ್ (22) ಹಾಗೂ ಮಿಚೆಲ್ ಸ್ಯಾಂಟ್ನರ್ (27) ರನ್ ಗಳಿಸಿ ನೂರು ರನ್‌ಗಳ ಗಡಿ ದಾಟಿಸಿದರು, ಈ ಮೂವರನ್ನು ಬಿಟ್ಟು ಬೇರೆ ಯಾವುದೇ ಬ್ಯಾಟ್ಸ್‌ಮನ್ ಎರಡಂಕಿ ದಾಟಲಿಲ್ಲ.

ಭಾರತದ ಪರವಾಗಿ ಮಿಂಚಿದ ಅನುಭವಿ ಬೌಲರ್ ಮಹಮ್ಮದ್ ಶಮಿ ಮೂರು ವಿಕೆಟ್, ಹಾರ್ದಿಕ್ ಪಾಂಡ್ಯ ಹಾಗೂ ವಾಶಿಂಗ್ಟನ್ ಸುಂದರ್ ತಲಾ ಎರಡು ವಿಕೆಟ್ ಮತ್ತು ಸಿರಾಜ್, ಕುಲದೀಪ್ ಯಾದವ್ ಹಾಗೂ ಶಾದು೯ಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದುಕೊಂಡರು.

ಗುರಿ ಬೆನ್ನಟ್ಟಿದ ಭಾರತ ಆರಂಭಿಕ ಜೋಡಿ ಉತ್ತಮ ರನ್ ಪೇರಿಸಿತು, ನಾಯಕ ರೋಹಿತ್ ಶರ್ಮಾ (51) ಹಾಗೂ ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಔಟಾಗದೆ (40) ರನ್ ಗಳಿಸುವ ಮೂಲಕ ಜಯದ ಸನಿಹ ಕೊಂಡೊಯ್ದರು, ರೋಹಿತ್ ಔಟಾದ ನಂತರ ಕ್ರಿಸ್ ಗೆ ಬಂದ ಹಿರಿಯ ಆಟಗಾರ ಸ್ಪಿನ್ನರ್ ಸ್ಯಾಂಟ್ನರ್ ಗೆ ವಿರಾಟ್ ಒಪ್ಪಿಸಿದರು.

ಕೊನೆಯಲ್ಲಿ ಬಡ್ತಿ ಪಡೆದು ಕ್ರಿಸ್ ಗೆ ಬಂದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (11) ರನ್ ಗಳಿಸುವ ಮೂಲಕ ಜಯ ತಂದುಕೊಟ್ಟರು, ಇನ್ನೂ ಒಂದು ಪಂದ್ಯ ಇರುವಾಗಲೇ ಭಾರತ ತಂಡ ಸರಣಿ ವಶಪಡಿಸಿಕೊಂಡಿತು. ಉತ್ತಮ ಬೌಲಿಂಗ್ ಮಾಡಿದ ಅನುಭವಿ ಬೌಲರ್ ಮಹಮ್ಮದ್ ಶಮಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

2 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

10 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

11 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago