ಅಂಧರ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ನಲ್ಲಿ ಬಾಂಗ್ಲಾದೇಶದ ವಿರುದ್ಧ ಗೆಲುವು ಸಾಧಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿರುವ ಭಾರತೀಯ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.
2012, 2017ರಲ್ಲಿ ನಡೆದ ಆವೃತ್ತಿಯಲ್ಲಿ ಪಾಕಿಸ್ತಾನವನ್ನು ಮಣಿಸಿದ್ದ ಭಾರತ ಅಂಧರ ಕ್ರಿಕೆಟ್ ತಂಡ ಮೂರನೇ ಆವೃತ್ತಿಯಲ್ಲೂ ಗೆದ್ದು ಬೀಗಿದೆ. ಈ ಮೂಲಕ ತಮ್ಮ ಅಂಗವೈಕಲ್ಯವನ್ನು ಮೆಟ್ಟಿನಿಂತು ಅದ್ಭುತ ಸಾಧನೆ ಮಾಡಿರುವ ತಂಡಕ್ಕೆ ಸಚಿವರು ಪ್ರಶಂಸಿದ್ದಾರೆ.
ಇದೇ ವೇಳೆ ಅಂಧರ ಟಿ-20 ವಿಶ್ವಕಪ್ ಪ್ರಾಯೋಜಕತ್ವ ವಹಿಸಿರುವ ಸಮರ್ಥನಂ ಟ್ರಸ್ಟ್ಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಂಧರ ಟಿ-20 ವಿಶ್ವಕಪ್ 2012ರಲ್ಲಿ ಮೊದಲ ಸಲ ಬೆಂಗಳೂರಿನಲ್ಲಿ ಆಯೋಜನೆಗೊಂಡಿದ್ದು, ಅಂದಿನಿಂದಲೂ ಸಮರ್ಥನಂ ಟ್ರಸ್ಟ್ ಪ್ರಾಯೋಜಕತ್ವ ವಹಿಸಿಕೊಳ್ಳುತ್ತಾ ಬಂದಿದೆ. ಸಮರ್ಥನಂ ಟ್ರಸ್ಟ್ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಒಂದು ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆಗಳನ್ನು ಮಾಡಲಿ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…