ಅಂಧರ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ನಲ್ಲಿ ಬಾಂಗ್ಲಾದೇಶದ ವಿರುದ್ಧ ಗೆಲುವು ಸಾಧಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿರುವ ಭಾರತೀಯ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.
2012, 2017ರಲ್ಲಿ ನಡೆದ ಆವೃತ್ತಿಯಲ್ಲಿ ಪಾಕಿಸ್ತಾನವನ್ನು ಮಣಿಸಿದ್ದ ಭಾರತ ಅಂಧರ ಕ್ರಿಕೆಟ್ ತಂಡ ಮೂರನೇ ಆವೃತ್ತಿಯಲ್ಲೂ ಗೆದ್ದು ಬೀಗಿದೆ. ಈ ಮೂಲಕ ತಮ್ಮ ಅಂಗವೈಕಲ್ಯವನ್ನು ಮೆಟ್ಟಿನಿಂತು ಅದ್ಭುತ ಸಾಧನೆ ಮಾಡಿರುವ ತಂಡಕ್ಕೆ ಸಚಿವರು ಪ್ರಶಂಸಿದ್ದಾರೆ.
ಇದೇ ವೇಳೆ ಅಂಧರ ಟಿ-20 ವಿಶ್ವಕಪ್ ಪ್ರಾಯೋಜಕತ್ವ ವಹಿಸಿರುವ ಸಮರ್ಥನಂ ಟ್ರಸ್ಟ್ಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಂಧರ ಟಿ-20 ವಿಶ್ವಕಪ್ 2012ರಲ್ಲಿ ಮೊದಲ ಸಲ ಬೆಂಗಳೂರಿನಲ್ಲಿ ಆಯೋಜನೆಗೊಂಡಿದ್ದು, ಅಂದಿನಿಂದಲೂ ಸಮರ್ಥನಂ ಟ್ರಸ್ಟ್ ಪ್ರಾಯೋಜಕತ್ವ ವಹಿಸಿಕೊಳ್ಳುತ್ತಾ ಬಂದಿದೆ. ಸಮರ್ಥನಂ ಟ್ರಸ್ಟ್ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಒಂದು ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆಗಳನ್ನು ಮಾಡಲಿ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…