ಉಕ್ಕಿ ಹರಿಯುವ ದೇಶಪ್ರೇಮ………..
ಎಲ್ಲೆಲ್ಲೂ ರಾಷ್ಟ್ರಗೀತೆ – ರಾಷ್ಟ್ರಧ್ವಜ…….
ಜೈ ಭಾರತ್ ಘೋಷಣೆ……
ತುಂಬಾ ಸಂತೋಷ……
ಆದರೆ,
ಸೂಕ್ಷ್ಮವಾಗಿ ಗಮನಿಸಿ ಮತ್ತು ನೆನಪಿಡಿ………
ಇದೇ ಬಾಯಿಗಳೇ ದ್ವೇಷ ಕಾರುವ, ರಕ್ತ ಹೀರುವ ಘೋಷಣೆ ಕೂಗುವುದು…..
ಇದೇ ಕಣ್ಣುಗಳೇ ಸಾವುಗಳನ್ನು ಸಂಭ್ರಮಿಸಿ ಕ್ರೂರತೆ ಮೆರೆಯುವುದು….
ಇದೇ ಕೈಗಳೇ ಭ್ರಷ್ಟ ಲಂಚದ ಹಣಕ್ಕೆ ಕೈಚಾಚುವುದು…..
ಇದೇ ಕಾಲುಗಳೇ ಹಣ, ಹೆಂಡ ಪಡೆದು ಮತದಾನ ಕೇಂದ್ರಕ್ಕೆ ಸಾಗುವುದು….
ಇದೇ ತೋಳುಗಳೇ ಅತ್ಯಾಚಾರಕ್ಕೆ ಬಳಸಲ್ಪಡುವುದು….
ಇದೇ ಮನಸ್ಸುಗಳೇ ಇಂದು ದೇಶದಲ್ಲಿ ಅರಾಜಕತೆ ಅಸಹಿಷ್ಣತೆ ಉಂಟು ಮಾಡುತ್ತಿರುವುದು………..
ಜನರನ್ನು ಟೀಕಿಸಿದ್ದಕ್ಕೆ ಬೇಸರವಾಗುತ್ತಿದೆಯೇ ?
ಬನ್ನಿ ನನ್ನೊಂದಿಗೆ…..
ಇಡೀ ದೇಶದ ಸರ್ಕಾರಿ ಕಚೇರಿಗಳಲ್ಲಿ, ಆಸ್ಪತ್ರೆಯಿಂದ ವಿಧಾನಸಭೆಗಳವರೆಗೆ,
ಜಮೀನು ನೋಂದಣಿ ಕಚೇರಿಯಿಂದ ಮರಣ ನೋಂದಣಿ ಕಚೇರಿಯವರೆಗೆ ಲಂಚವಿಲ್ಲದೆ ಕೆಲಸವಾಗುವುದು ಅಪರೂಪ.
ಒಡವೆ ಧರಿಸಿದ ಒಂಟಿ ಹೆಣ್ಣು ಇಲ್ಲಿ ಸುರಕ್ಷಿತ ಎಂದು ಹೇಳುವ ಒಂದೇ ಒಂದು ಜನನಿಬಿಡ ಬಸ್ ನಿಲ್ದಾಣ ಅಥವಾ ರೈಲು ನಿಲ್ದಾಣವನ್ನು ತೋರಿಸಿ.
ಕಾನೂನು ತಜ್ಞರ ಸಲಹೆ ಪಡೆಯದೆ ಕೇವಲ ನಂಬಿಕೆಯ ಆಧಾರದ ಮೇಲೆ ಮನೆ ಅಥವಾ ಜಮೀನು ಖರೀದಿಸುವ ಧೈರ್ಯ ಎಷ್ಟು ಜನರಿಗಿದೆ.
ಒಂದು ಕಡೆ ಡ್ರಗ್ ಮಾಫಿಯಾ, ಇನ್ನೊಂದು ಕಡೆ ಲ್ಯಾಂಡ್ ಮಾಫಿಯಾ, ಕ್ಯಾಪಿಟೇಷನ್ ಮಾಫಿಯಾ, ಶುಗರ್ ಮಾಫಿಯಾ, ಗಣಿ ಮಾಫಿಯಾ, ವಾಟರ್ ಮಾಫಿಯಾ ಜೊತೆಗೆ ಜಾತಿ ಧರ್ಮ ಮುಂತಾದ ವಿಭಜಕ ಶಕ್ತಿಗಳು ಇಡೀ ಆಡಳಿತ ಯಂತ್ರವನ್ನು ನಿಯಂತ್ರಿಸುತ್ತಿವೆ.
ಆದರೆ ದೇಶಭಕ್ತಿ ಮಾತ್ರ ಉಕ್ಕಿ ಹರಿಯುತ್ತದೆ.
ದೇಶಭಕ್ತಿ ಕೇವಲ ಘೋಷಣೆಯಲ್ಲ. ಅದು ನಡವಳಿಕೆ.
ದುರುಳ ನಾಯಕರಿಂದ ಮಕ್ಕಳಿಗೆ ಶಾಲೆಯಲ್ಲಿ ನೀತಿ ಪಾಠ ಹೇಳಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದರೆ ಆ ಕಪಟತನದ ಮುಖವಾಡ ಮುಂದಿನ ದಿನಗಳಲ್ಲಿ ಮಕ್ಕಳಿಗೆ ತಿಳಿಯುವುದಿಲ್ಲವೇ ?
ನುಡಿದಂತೆ ನಡೆಯಿರಿ
ಇಲ್ಲವೇ
ನಡೆದಂತೆ ನುಡಿಯಿರಿ
ಅದೇ ದೇಶಪ್ರೇಮ.
ಸರಳತೆ ಸಭ್ಯತೆ ಪ್ರೀತಿ ವಿಶ್ವಾಸವಿಲ್ಲದ ಪೇಪರ್ ಟೈಗರ್ ಗಳೋ, ಟಿವಿ ಟೈಗರ್ ಗಳೋ ಆಗಿ ಒಣ ವೇದಾಂತ ಹೇಳುತ್ತಾ ಪ್ರಚಾರದ ಹಂಗಿಗೆ ಬಿದ್ದು ಬುದ್ದಿವಂತರೆಂಬ ಭ್ರಮೆಗೆ ಒಳಗಾಗಿ ವ್ಯಕ್ತಿತ್ವವೇ ಇಲ್ಲದ ಟೊಳ್ಳು ದೇಶಪ್ರೇಮ ಅಪಾಯಕಾರಿ.
ಮಾತಿನರಮನೆಯಲ್ಲಿ ಅರಳುವುದು ಮುಖವಾಡ.
ನರನಾಡಿಗಳಲ್ಲಿ ಸಮಾನತೆ ಸೌಹಾರ್ಧತೆ ಅಡಗಿರುವುದು ದೇಶಪ್ರೇಮ.
ವಂದೇ ಮಾತರಂ ಎಂದು ಕೂಗುವುದು
ದೇವಸ್ಥಾನಗಳಿಗೆ ಪ್ರವೇಶ ನಿರಾಕರಿಸುವುದು.
ವಂದೇ ಮಾತರಂ ಎನ್ನುವುದು ಮಠದಲ್ಲಿ ಪಂಕ್ತಿಬೇದ ಮಾಡುವುದು ಮತ್ತು ಅದನ್ನು ಸಮರ್ಥಿಸುವುದು.
ವಂದೇ ಮಾತರಂ ಎನ್ನುವುದು ಜಾತಿ ಸರ್ಟಿಫಿಕೇಟ್ ಹಂಚುವುದು.
ವ್ಯಕ್ತಿ ಸ್ವಾತಂತ್ರ್ಯ ಗೌರವಿಸದೆ ಇನ್ನೊಬ್ಬರನ್ನು ಹಂಗಿಸುವುದು.
ಛೆ…….
ನಮ್ಮ ನಡವಳಿಕೆ – ವರ್ತನೆ – ದಿನನಿತ್ಯದ ಒಳ್ಳೆಯ, ಮೌಲ್ಯಯುತ ಚಟುವಟಿಕೆಗಳೇ ನಮ್ಮ ದೇಶಪ್ರೇಮ.
ಕೇವಲ ಜೈ ಭಾರತ್ ಘೋಷಣೆಯಲ್ಲ……
ಒಳ್ಳೆಯವರಾಗಿ,
ಒಳ್ಳೆಯದನ್ನು ಪ್ರೋತ್ಸಾಹಿಸಿ,
ಕೆಟ್ಟದ್ದನ್ನು ತಿರಸ್ಕರಿಸಿ…….
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್.ಕೆ
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…
ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…
ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…