Categories: ಲೇಖನ

ಭಾರತದ ಸ್ವಾತಂತ್ರ್ಯೋತ್ಸವ ಆಚರಿಸುವ ಆಗಸ್ಟ್ ತಿಂಗಳ ಮೊದಲ ದಿನ ಪ್ರವೇಶಿಸುತ್ತಿರುವ ಸಮಯದಲ್ಲಿ…..

ಉಕ್ಕಿ ಹರಿಯುವ ದೇಶಪ್ರೇಮ………..

ಎಲ್ಲೆಲ್ಲೂ ರಾಷ್ಟ್ರಗೀತೆ – ರಾಷ್ಟ್ರಧ್ವಜ…….

ಜೈ ಭಾರತ್ ಘೋಷಣೆ……

ತುಂಬಾ ಸಂತೋಷ……

ಆದರೆ,
ಸೂಕ್ಷ್ಮವಾಗಿ ಗಮನಿಸಿ ಮತ್ತು ನೆನಪಿಡಿ………

ಇದೇ ಬಾಯಿಗಳೇ ದ್ವೇಷ ಕಾರುವ, ರಕ್ತ ಹೀರುವ ಘೋಷಣೆ ಕೂಗುವುದು…..

ಇದೇ ಕಣ್ಣುಗಳೇ ಸಾವುಗಳನ್ನು ಸಂಭ್ರಮಿಸಿ ಕ್ರೂರತೆ ಮೆರೆಯುವುದು….

ಇದೇ ಕೈಗಳೇ ಭ್ರಷ್ಟ ಲಂಚದ ಹಣಕ್ಕೆ ಕೈಚಾಚುವುದು…..

ಇದೇ ಕಾಲುಗಳೇ ಹಣ, ಹೆಂಡ ಪಡೆದು ಮತದಾನ ಕೇಂದ್ರಕ್ಕೆ ಸಾಗುವುದು….

ಇದೇ ತೋಳುಗಳೇ ಅತ್ಯಾಚಾರಕ್ಕೆ ಬಳಸಲ್ಪಡುವುದು….

ಇದೇ ಮನಸ್ಸುಗಳೇ ಇಂದು ದೇಶದಲ್ಲಿ ಅರಾಜಕತೆ ಅಸಹಿಷ್ಣತೆ ಉಂಟು ಮಾಡುತ್ತಿರುವುದು………..

ಜನರನ್ನು ಟೀಕಿಸಿದ್ದಕ್ಕೆ ಬೇಸರವಾಗುತ್ತಿದೆಯೇ ?

ಬನ್ನಿ ನನ್ನೊಂದಿಗೆ…..

ಇಡೀ ದೇಶದ ಸರ್ಕಾರಿ ಕಚೇರಿಗಳಲ್ಲಿ, ಆಸ್ಪತ್ರೆಯಿಂದ ವಿಧಾನಸಭೆಗಳವರೆಗೆ,
ಜಮೀನು ನೋಂದಣಿ ಕಚೇರಿಯಿಂದ ಮರಣ ನೋಂದಣಿ ಕಚೇರಿಯವರೆಗೆ ಲಂಚವಿಲ್ಲದೆ ಕೆಲಸವಾಗುವುದು ಅಪರೂಪ.

ಒಡವೆ ಧರಿಸಿದ ಒಂಟಿ ಹೆಣ್ಣು ಇಲ್ಲಿ ಸುರಕ್ಷಿತ ಎಂದು ಹೇಳುವ ಒಂದೇ ಒಂದು ಜನನಿಬಿಡ ಬಸ್ ನಿಲ್ದಾಣ ಅಥವಾ ರೈಲು ನಿಲ್ದಾಣವನ್ನು ತೋರಿಸಿ.

ಕಾನೂನು ತಜ್ಞರ ಸಲಹೆ ಪಡೆಯದೆ ಕೇವಲ ನಂಬಿಕೆಯ ಆಧಾರದ ಮೇಲೆ ಮನೆ ಅಥವಾ ಜಮೀನು ಖರೀದಿಸುವ ಧೈರ್ಯ ಎಷ್ಟು ಜನರಿಗಿದೆ.

ಒಂದು ಕಡೆ ಡ್ರಗ್ ಮಾಫಿಯಾ, ಇನ್ನೊಂದು ಕಡೆ ಲ್ಯಾಂಡ್ ಮಾಫಿಯಾ, ಕ್ಯಾಪಿಟೇಷನ್ ಮಾಫಿಯಾ, ಶುಗರ್ ಮಾಫಿಯಾ, ಗಣಿ ಮಾಫಿಯಾ, ವಾಟರ್ ಮಾಫಿಯಾ ಜೊತೆಗೆ ಜಾತಿ ಧರ್ಮ ಮುಂತಾದ ವಿಭಜಕ ಶಕ್ತಿಗಳು ಇಡೀ ಆಡಳಿತ ಯಂತ್ರವನ್ನು ನಿಯಂತ್ರಿಸುತ್ತಿವೆ.

ಆದರೆ ‌ದೇಶಭಕ್ತಿ ಮಾತ್ರ ಉಕ್ಕಿ ಹರಿಯುತ್ತದೆ.

ದೇಶಭಕ್ತಿ ಕೇವಲ ಘೋಷಣೆಯಲ್ಲ. ಅದು ನಡವಳಿಕೆ.
ದುರುಳ ನಾಯಕರಿಂದ ಮಕ್ಕಳಿಗೆ ಶಾಲೆಯಲ್ಲಿ ನೀತಿ ಪಾಠ ಹೇಳಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದರೆ ಆ ಕಪಟತನದ ಮುಖವಾಡ ಮುಂದಿನ ದಿನಗಳಲ್ಲಿ ಮಕ್ಕಳಿಗೆ ತಿಳಿಯುವುದಿಲ್ಲವೇ ?

ನುಡಿದಂತೆ ನಡೆಯಿರಿ
ಇಲ್ಲವೇ
ನಡೆದಂತೆ ನುಡಿಯಿರಿ

ಅದೇ ದೇಶಪ್ರೇಮ.

ಸರಳತೆ ಸಭ್ಯತೆ ಪ್ರೀತಿ ವಿಶ್ವಾಸವಿಲ್ಲದ ಪೇಪರ್ ಟೈಗರ್ ಗಳೋ, ಟಿವಿ ಟೈಗರ್ ಗಳೋ ಆಗಿ ಒಣ ವೇದಾಂತ ಹೇಳುತ್ತಾ ಪ್ರಚಾರದ ಹಂಗಿಗೆ ಬಿದ್ದು ಬುದ್ದಿವಂತರೆಂಬ ಭ್ರಮೆಗೆ ಒಳಗಾಗಿ ವ್ಯಕ್ತಿತ್ವವೇ ಇಲ್ಲದ ಟೊಳ್ಳು ದೇಶಪ್ರೇಮ ಅಪಾಯಕಾರಿ.

ಮಾತಿನರಮನೆಯಲ್ಲಿ ಅರಳುವುದು ಮುಖವಾಡ.
ನರನಾಡಿಗಳಲ್ಲಿ ಸಮಾನತೆ ಸೌಹಾರ್ಧತೆ ಅಡಗಿರುವುದು ದೇಶಪ್ರೇಮ.

ವಂದೇ ಮಾತರಂ ಎಂದು ಕೂಗುವುದು
ದೇವಸ್ಥಾನಗಳಿಗೆ ಪ್ರವೇಶ ನಿರಾಕರಿಸುವುದು.
ವಂದೇ ಮಾತರಂ ಎನ್ನುವುದು ಮಠದಲ್ಲಿ ಪಂಕ್ತಿಬೇದ ಮಾಡುವುದು ಮತ್ತು ಅದನ್ನು ಸಮರ್ಥಿಸುವುದು.
ವಂದೇ ಮಾತರಂ ಎನ್ನುವುದು ಜಾತಿ ಸರ್ಟಿಫಿಕೇಟ್ ಹಂಚುವುದು.
ವ್ಯಕ್ತಿ ಸ್ವಾತಂತ್ರ್ಯ ಗೌರವಿಸದೆ ಇನ್ನೊಬ್ಬರನ್ನು ಹಂಗಿಸುವುದು.

ಛೆ…….

ನಮ್ಮ ನಡವಳಿಕೆ – ವರ್ತನೆ – ದಿನನಿತ್ಯದ ಒಳ್ಳೆಯ, ಮೌಲ್ಯಯುತ ಚಟುವಟಿಕೆಗಳೇ ನಮ್ಮ ದೇಶಪ್ರೇಮ.

ಕೇವಲ ಜೈ ಭಾರತ್ ಘೋಷಣೆಯಲ್ಲ……

ಒಳ್ಳೆಯವರಾಗಿ,
ಒಳ್ಳೆಯದನ್ನು ಪ್ರೋತ್ಸಾಹಿಸಿ,
ಕೆಟ್ಟದ್ದನ್ನು ತಿರಸ್ಕರಿಸಿ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

12 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago