ಇಂದು ಭಾರತದ 100 ಲೋಕಸಭಾ ಕ್ಷೇತ್ರಗಳಲ್ಲಿ ಮತ ಚೋರಿಯಾಗಿರುವುದನ್ನು ಗುರುತಿಸಲಾಗಿದೆ. ಅಲ್ಲದೇ ನಮ್ಮ ರಾಜ್ಯದ ಮಹದೇವಪುರ ಲೋಕಸಭಾ ಕ್ಷೇತ್ರದಲ್ಲಿ ಮಾತಾಚೋರಿಯಾಗಿರುವುದು ಸಾಭೀತಾಗಿದೆ. ಈ ಮತಚೋರಿ ಕುರಿತು ದೇಶದ ಜನರಿಗೆ ತಿಳಿಸುವ ಅವಶ್ಯಕತೆ ಇದೆ ಈ ನಿಟ್ಟಿನಲ್ಲಿ ಈ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಹಾಗೂ ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು.
ಕೇಂದ್ರ ಬಿಜೆಪಿ ಸತತವಾಗಿ 3 ಬಾರಿ ಮತಗಳ್ಳತನ ಮಾಡುವ ಮೂಲಕ ದೇಶದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿದೆ. ಈ ಹಿನ್ನೆಲೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮುಂದಿನ ಪೀಳಿಗೆಯನ್ನು ಉಳಿಸುವ ನಿಟ್ಟಿನಲ್ಲಿ ಹೋರಾಟ ಮಾಡುತ್ತಿದ್ದಾರೆ. ಅನೇಕ ರಾಜ್ಯಗಳಲ್ಲಿ ಬಿಜೆಪಿ ವೋಟ್ ಚೋರಿ ಮಾಡುವ ಮೂಲಕ ಅಧಿಕಾರಕ್ಕೆ ಬಂದಿದೆ. ಇದು ದೇಶದ ಜನತೆಗೆ ಮಾಡುತ್ತಿರುವ ಮಹಾಮೋಸ ಎಂದು ಆರೋಪಿಸಿದರು.
ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲಿ ನಡೆದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮತಗಳ್ಳತನ ಕುರಿತು ಚುನಾವಣಾ ಅಧಿಕಾರಿಗಳಿಗೆ ಮನಮುಟ್ಟುವಂತೆ ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ತಿಳಿಸುವ ಪ್ರಯತ್ನ ಮಾಡಿದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ, ಕಾರಣ ಎಲ್ಲಾ ಇಲಾಖೆಗಳು ಬಿಜೆಪಿ ಪಕ್ಷದ ಅಧೀನದಲ್ಲಿ ಇರುವಂತೆ ಕಾಣುತ್ತದೆ ಹಾಗಾಗಿ ಭಾರತೀಯ ಚುನಾವಣಾ ಆಯೋಗ ಆಧಿಕಾರಿಗಳಿಗೆ ಸತ್ಯಂಶ ತಿಳಿಸುವ ನಿಟ್ಟಿನಲ್ಲಿ ಮತದಾರರಿಂದ ಸಹಿ ಸಂಗ್ರಹ ಅಭಿಯಾನ ಆಯೋಜಿಸಲಾಗಿದೆ ಎಂದರು.
ಕೆಪಿಸಿಸಿ ಉಪಾಧ್ಯಕ್ಷ ವೆಂಕಟೇಶ್ ಮಾತನಾಡಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಹಿ ಮಾಡುವ ಮೂಲಕ ಮತಗಳ್ಳತನ ನಿಲ್ಲಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.
ಒಬ್ಬನೆ ಮತದಾರ ದೇಶದ 4-5 ಕಡೆ ಮತದಾನ ಮಾಡುವುದಾಗಿದೆ. ದೇಶದ ಪ್ರಜಾತಂತ್ರ ವ್ಯವಸ್ಥೆಯನ್ನು ಬುಡಮೇಲು ಮಾಡುವ ಕಾರ್ಯಕ್ಕೆ ಬಿಜೆಪಿ ಮುಂದಾಗಿದ್ದು, ದೇಶದ ಜನತೆಗೆ ಮೋಸ ಮಾಡುತ್ತಿದ್ದಾರೆ. ಕೆಲ ಅಧಿಕಾರಿಗಳೇ ಈ ಕೃತ್ಯದಲ್ಲಿ ಪಾಲುದಾರರಾಗಿದ್ದಾರೆ ಎಂಬುದು ವಿಪರ್ಯಾಸ ಎಂದು ವಾಗ್ದಾಳಿ ನಡೆಸಿದರು.
ಈ ವೇಳೆ ಸಿ.ಆರ್ ಗೌಡ, ಜಿಲ್ಲಾ ಕಾಂಗ್ರೆಸ್ ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಜಣ್ಣ, ಶ್ರೀ ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್ ವಿ ಮಹೇಶ್, ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಮುಖಂಡರಾದ ಶಿವಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…