ಭಾರತದ 100 ಲೋಕಸಭಾ ಕ್ಷೇತ್ರಗಳಲ್ಲಿ ಮತ ಚೋರಿ-ಮತಚೋರಿ ಕುರಿತು ದೇಶದ ಜನರಿಗೆ ತಿಳಿಸುವ ಅವಶ್ಯಕತೆ ಇದೆ- ಸಚಿವ ಕೆ.ಎಚ್ ಮುನಿಯಪ್ಪ

ಇಂದು ಭಾರತದ 100 ಲೋಕಸಭಾ ಕ್ಷೇತ್ರಗಳಲ್ಲಿ ಮತ ಚೋರಿಯಾಗಿರುವುದನ್ನು ಗುರುತಿಸಲಾಗಿದೆ. ಅಲ್ಲದೇ  ನಮ್ಮ ರಾಜ್ಯದ ಮಹದೇವಪುರ ಲೋಕಸಭಾ ಕ್ಷೇತ್ರದಲ್ಲಿ ಮಾತಾಚೋರಿಯಾಗಿರುವುದು ಸಾಭೀತಾಗಿದೆ. ಈ ಮತಚೋರಿ ಕುರಿತು ದೇಶದ ಜನರಿಗೆ ತಿಳಿಸುವ ಅವಶ್ಯಕತೆ ಇದೆ ಈ ನಿಟ್ಟಿನಲ್ಲಿ ಈ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ಪ್ರಾರಂಭಿಸಲಾಗಿದೆ ಎಂದು‌ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಹಾಗೂ ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು.

ಕೇಂದ್ರ ಬಿಜೆಪಿ ಸತತವಾಗಿ 3 ಬಾರಿ ಮತಗಳ್ಳತನ ಮಾಡುವ ಮೂಲಕ ದೇಶದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿದೆ. ಈ ಹಿನ್ನೆಲೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ  ಮುಂದಿನ ಪೀಳಿಗೆಯನ್ನು ಉಳಿಸುವ ನಿಟ್ಟಿನಲ್ಲಿ ಹೋರಾಟ ಮಾಡುತ್ತಿದ್ದಾರೆ. ಅನೇಕ ರಾಜ್ಯಗಳಲ್ಲಿ ಬಿಜೆಪಿ ವೋಟ್ ಚೋರಿ ಮಾಡುವ ಮೂಲಕ ಅಧಿಕಾರಕ್ಕೆ ಬಂದಿದೆ. ಇದು ದೇಶದ ಜನತೆಗೆ ಮಾಡುತ್ತಿರುವ ಮಹಾಮೋಸ ಎಂದು ಆರೋಪಿಸಿದರು.

ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲಿ ನಡೆದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮತಗಳ್ಳತನ ಕುರಿತು ಚುನಾವಣಾ ಅಧಿಕಾರಿಗಳಿಗೆ ಮನಮುಟ್ಟುವಂತೆ ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ತಿಳಿಸುವ ಪ್ರಯತ್ನ ಮಾಡಿದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ, ಕಾರಣ ಎಲ್ಲಾ ಇಲಾಖೆಗಳು ಬಿಜೆಪಿ ಪಕ್ಷದ ಅಧೀನದಲ್ಲಿ ಇರುವಂತೆ ಕಾಣುತ್ತದೆ ಹಾಗಾಗಿ ಭಾರತೀಯ ಚುನಾವಣಾ ಆಯೋಗ ಆಧಿಕಾರಿಗಳಿಗೆ ಸತ್ಯಂಶ ತಿಳಿಸುವ ನಿಟ್ಟಿನಲ್ಲಿ ಮತದಾರರಿಂದ ಸಹಿ ಸಂಗ್ರಹ ಅಭಿಯಾನ ಆಯೋಜಿಸಲಾಗಿದೆ ಎಂದರು.

ಕೆಪಿಸಿಸಿ ಉಪಾಧ್ಯಕ್ಷ ವೆಂಕಟೇಶ್ ಮಾತನಾಡಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಹಿ ಮಾಡುವ ಮೂಲಕ ಮತಗಳ್ಳತನ ನಿಲ್ಲಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.

ಒಬ್ಬನೆ ಮತದಾರ ದೇಶದ 4-5 ಕಡೆ ಮತದಾನ ಮಾಡುವುದಾಗಿದೆ. ದೇಶದ ಪ್ರಜಾತಂತ್ರ ವ್ಯವಸ್ಥೆಯನ್ನು ಬುಡಮೇಲು ಮಾಡುವ ಕಾರ್ಯಕ್ಕೆ ಬಿಜೆಪಿ ಮುಂದಾಗಿದ್ದು, ದೇಶದ ಜನತೆಗೆ ಮೋಸ ಮಾಡುತ್ತಿದ್ದಾರೆ. ಕೆಲ ಅಧಿಕಾರಿಗಳೇ ಈ ಕೃತ್ಯದಲ್ಲಿ ಪಾಲುದಾರರಾಗಿದ್ದಾರೆ ಎಂಬುದು ವಿಪರ್ಯಾಸ ಎಂದು ವಾಗ್ದಾಳಿ ನಡೆಸಿದರು.

ಈ ವೇಳೆ ಸಿ.ಆರ್ ಗೌಡ, ಜಿಲ್ಲಾ ಕಾಂಗ್ರೆಸ್ ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಜಣ್ಣ, ಶ್ರೀ ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್ ವಿ ಮಹೇಶ್, ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ,  ಮುಖಂಡರಾದ ಶಿವಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

22 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

3 days ago