ಭಾರತದ 100 ಲೋಕಸಭಾ ಕ್ಷೇತ್ರಗಳಲ್ಲಿ ಮತ ಚೋರಿ-ಮತಚೋರಿ ಕುರಿತು ದೇಶದ ಜನರಿಗೆ ತಿಳಿಸುವ ಅವಶ್ಯಕತೆ ಇದೆ- ಸಚಿವ ಕೆ.ಎಚ್ ಮುನಿಯಪ್ಪ

ಇಂದು ಭಾರತದ 100 ಲೋಕಸಭಾ ಕ್ಷೇತ್ರಗಳಲ್ಲಿ ಮತ ಚೋರಿಯಾಗಿರುವುದನ್ನು ಗುರುತಿಸಲಾಗಿದೆ. ಅಲ್ಲದೇ  ನಮ್ಮ ರಾಜ್ಯದ ಮಹದೇವಪುರ ಲೋಕಸಭಾ ಕ್ಷೇತ್ರದಲ್ಲಿ ಮಾತಾಚೋರಿಯಾಗಿರುವುದು ಸಾಭೀತಾಗಿದೆ. ಈ ಮತಚೋರಿ ಕುರಿತು ದೇಶದ ಜನರಿಗೆ ತಿಳಿಸುವ ಅವಶ್ಯಕತೆ ಇದೆ ಈ ನಿಟ್ಟಿನಲ್ಲಿ ಈ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ಪ್ರಾರಂಭಿಸಲಾಗಿದೆ ಎಂದು‌ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಹಾಗೂ ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು.

ಕೇಂದ್ರ ಬಿಜೆಪಿ ಸತತವಾಗಿ 3 ಬಾರಿ ಮತಗಳ್ಳತನ ಮಾಡುವ ಮೂಲಕ ದೇಶದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿದೆ. ಈ ಹಿನ್ನೆಲೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ  ಮುಂದಿನ ಪೀಳಿಗೆಯನ್ನು ಉಳಿಸುವ ನಿಟ್ಟಿನಲ್ಲಿ ಹೋರಾಟ ಮಾಡುತ್ತಿದ್ದಾರೆ. ಅನೇಕ ರಾಜ್ಯಗಳಲ್ಲಿ ಬಿಜೆಪಿ ವೋಟ್ ಚೋರಿ ಮಾಡುವ ಮೂಲಕ ಅಧಿಕಾರಕ್ಕೆ ಬಂದಿದೆ. ಇದು ದೇಶದ ಜನತೆಗೆ ಮಾಡುತ್ತಿರುವ ಮಹಾಮೋಸ ಎಂದು ಆರೋಪಿಸಿದರು.

ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲಿ ನಡೆದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮತಗಳ್ಳತನ ಕುರಿತು ಚುನಾವಣಾ ಅಧಿಕಾರಿಗಳಿಗೆ ಮನಮುಟ್ಟುವಂತೆ ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ತಿಳಿಸುವ ಪ್ರಯತ್ನ ಮಾಡಿದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ, ಕಾರಣ ಎಲ್ಲಾ ಇಲಾಖೆಗಳು ಬಿಜೆಪಿ ಪಕ್ಷದ ಅಧೀನದಲ್ಲಿ ಇರುವಂತೆ ಕಾಣುತ್ತದೆ ಹಾಗಾಗಿ ಭಾರತೀಯ ಚುನಾವಣಾ ಆಯೋಗ ಆಧಿಕಾರಿಗಳಿಗೆ ಸತ್ಯಂಶ ತಿಳಿಸುವ ನಿಟ್ಟಿನಲ್ಲಿ ಮತದಾರರಿಂದ ಸಹಿ ಸಂಗ್ರಹ ಅಭಿಯಾನ ಆಯೋಜಿಸಲಾಗಿದೆ ಎಂದರು.

ಕೆಪಿಸಿಸಿ ಉಪಾಧ್ಯಕ್ಷ ವೆಂಕಟೇಶ್ ಮಾತನಾಡಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಹಿ ಮಾಡುವ ಮೂಲಕ ಮತಗಳ್ಳತನ ನಿಲ್ಲಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.

ಒಬ್ಬನೆ ಮತದಾರ ದೇಶದ 4-5 ಕಡೆ ಮತದಾನ ಮಾಡುವುದಾಗಿದೆ. ದೇಶದ ಪ್ರಜಾತಂತ್ರ ವ್ಯವಸ್ಥೆಯನ್ನು ಬುಡಮೇಲು ಮಾಡುವ ಕಾರ್ಯಕ್ಕೆ ಬಿಜೆಪಿ ಮುಂದಾಗಿದ್ದು, ದೇಶದ ಜನತೆಗೆ ಮೋಸ ಮಾಡುತ್ತಿದ್ದಾರೆ. ಕೆಲ ಅಧಿಕಾರಿಗಳೇ ಈ ಕೃತ್ಯದಲ್ಲಿ ಪಾಲುದಾರರಾಗಿದ್ದಾರೆ ಎಂಬುದು ವಿಪರ್ಯಾಸ ಎಂದು ವಾಗ್ದಾಳಿ ನಡೆಸಿದರು.

ಈ ವೇಳೆ ಸಿ.ಆರ್ ಗೌಡ, ಜಿಲ್ಲಾ ಕಾಂಗ್ರೆಸ್ ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಜಣ್ಣ, ಶ್ರೀ ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್ ವಿ ಮಹೇಶ್, ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ,  ಮುಖಂಡರಾದ ಶಿವಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.

Ramesh Babu

Journalist

Recent Posts

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

9 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

11 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

17 hours ago

ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…

17 hours ago

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

2 days ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

2 days ago