ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ

ನ್ಯಾಯಮೂರ್ತಿ ಸೂರ್ಯಕಾಂತ್ ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರು ನವೆಂಬರ್ 23ರಂದು ನಿವೃತ್ತರಾಗಿದ್ದು, ಅವರ ನಂತರ ಸೂರ್ಯಕಾಂತ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ‌ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಅವರು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಮುಂದಿನ ಸುಪ್ರೀಂ ಕೋರ್ಟ್‌ನ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಅಕ್ಟೋಬರ್ 30 ರಂದು ನೇಮಕ ಮಾಡಲಾಯಿತು.

ನ್ಯಾಯಮೂರ್ತಿ ಸೂರ್ಯಕಾಂತ್  ಸುಮಾರು 15 ತಿಂಗಳು ಈ ಹುದ್ದೆಯಲ್ಲಿ ಇರುತ್ತಾರೆ. ಅವರಿಗೆ ಫೆಬ್ರುವರಿ 9, 2027ರಂದು 65 ವರ್ಷ ತುಂಬುವ ಹಿನ್ನೆಲೆಯಲ್ಲಿ ಅಧಿಕಾರದಿಂದ ನಿವೃತ್ತರಾಗುತ್ತಾರೆ.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆಯುವ 370ನೇ ವಿಧಿಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳಲ್ಲಿ ಭಾಗವಾಗಿದ್ದರು..

ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಯುವತಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

14 minutes ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

8 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

16 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

16 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago