ಭಾರತವು ಜಾಗತೀಕವಾಗಿ 4ನೇ ಆರ್ಥಿಕ ಶಕ್ತಿಯಾಗಿ ರೂಪುಗೊಂಡಿದೆ- ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣಪ್ಪ

ದೊಡ್ಡಬಳ್ಳಾಪುರ: ಪ್ರಧಾನಮಂತ್ರಿ ನರೇಂದ್ರಮೋದಿ ಅವರ ನೇತೃತ್ವದಲ್ಲಿನ 11 ವರ್ಷಗಳ ಆಡಳಿತ ಸಾಧನೆಯನ್ನು ವಿಶ್ವದ ಅನೇಕ ರಾಷ್ಟ್ರಗಳು ಶ್ಲಾಘೀಸಿವೆ ಎಂದು ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣಪ್ಪ ಹೇಳಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ 11 ವರ್ಷಗಳ ಆಡಳಿತ ಸಾಧನೆ ಕುರಿತು ಮಾಹಿತಿ ನೀಡಿದ ಅವರು, ಭಾರತವು ಜಾಗತೀಕವಾಗಿ 4ನೇ ಆರ್ಥಿಕ ಶಕ್ತಿಯಾಗಿ ರೂಪುಗೊಂಡಿದೆ. ಹೊರಗಿನ ಶಕ್ತಿಗಳು ನಡೆಸಿದ ಭಯೋತ್ಪಾದನ ಕೃತ್ಯಕ್ಕೆ ಸರ್ಜಿಕಲ್ ಸ್ಟ್ರೈಕ್, ಅಪರೇಷನ್ ಸಿಂಧೂರ ಮೂಲಕ ತಕ್ಕ ಉತ್ತರ ನೀಡಿ ಭಾರತದಲ್ಲಿ ಉಗ್ರವಾದಕ್ಕೆ ಅವಕಾಶ ಇಲ್ಲ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ತಿಳಿಸಿದರು.

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಬಿಜೆಪಿಯ ಅಖಂಡ ಭಾರತ ಸಂಕಲ್ಪದ ಕನಸುನನಸು ಮಾಡುವ ದಿನಗಳು ಸಮೀಸುವಂತೆ ಮಾಡಿದ್ದಾರೆ. ದೇಶದ ಗಡಿಯಲ್ಲಿ ಭಾರತ ಮಾಲ ಯೋಜನೆಯಲ್ಲಿ ರಸ್ತೆಗಳ ನಿರ್ಮಾಣ ಮಾಡಿರುವುದು ನೆರೆಯ ದೇಶಗಳ ಗಡಿ ಅತಿಕ್ರಮದಂತಹ ದುಸ್ಸಾಹಸಕ್ಕೆ ಕಡಿವಾಣ ಬಿದ್ದಿದೆ ಎಂದರು.

ಬಡವರ ಮನೆಗಳು ಸಹ ಹೊಗೆ ಮುಕ್ತವಾಗಿರಬೇಕು, ಮಹಿಳೆಯರ ಆರೋಗ್ಯ ಸುಧಾರಿಸಬೇಕು ಎನ್ನುವ ಉದ್ದೇಶದಿಂದ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ಉಜ್ವಲ ಯೋಜನೆ ಮೂಲಕ ಪ್ರತಿ ಮನೆಗು ಅಡುಗೆ ಅನಿಲ ಸಂಪರ್ಕ ದೊರೆಯುವಂತೆ ಮಾಡಿದ್ದಾರೆ. ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರು ಬ್ಯಾಂಕ್ ಗಳಲ್ಲಿ ಖಾತೆಗಳನ್ನು ಹೊಂದಿರುವಂತೆ ಮಾಡಲು ಜನ್ ಧನ್ ಜಾರಿಗೆ ತಂದಿದ್ದರಿಂದ ಆರ್ಥಿಕ ಪ್ರಗತಿಯು ವೇಗ ಪಡೆದಿದೆ ಎಂದು‌ ಹೇಳಿದರು.

ಬಿಜೆಪಿ ಜಿಲ್ಲಾ ವಕ್ತಾರರಾದ ಪುಷ್ಪಾಶಿವಶಂಕರ್ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 11 ವರ್ಷಗಳ ಆಡಳಿತ ಸಾಧನೆಯನ್ನು ಬೂತ್ ಹಂತದಿಂದ ಮನೆ ಮನೆಗು ತಲುಪಿಸಲು ಅಭಿಯಾನ ನಡೆಸಲಾಗುತ್ತಿದೆ. ದೇಶದ ಬ್ಯಾಂಕುಗಳು ಸೇರಿದಂತೆ ದಿನ ನಿತ್ಯದ ಹಣಕಾಸು ವ್ಯವಸ್ಥೆಯನ್ನು ಡಿಜಿಟಲೀಕರಣ ಮಾಡಿದ್ದರಿಂದ ಮಹಿಳೆಯರು, ಬಡವರಿಗೆ ಅನುಕೂಲವಾಗಿದೆ. ಇದರಿಂದ ದೇಶದ ಆರ್ಥಿಕತೆಯಲ್ಲಿ ಯಾವುದೇ ಅಕ್ರಮ ವಹಿವಾಟುಗಳು ನಡೆಯುವುದನ್ನು ತಡೆಯಲು ಸಾಧ್ಯವಾಗಿದೆ. ಜಿಎಸ್ಟಿ ಜಾರಿಯಿಂದ ದೇಶದ ತೆರಿಗೆಯಲ್ಲಿನ ವಂಚನೆ ತಪ್ಪಿದೆ. ಇದರಿಂದ ದೇಶದ ಅಭಿವೃದ್ಧಿಗೆ ವೇಗ ದೊರೆಯಲು ಸಾಧ್ಯವಾಗಿದೆ ಎಂದು ಹೇಳಿದರು.

ಗರಿಷ್ಣ ಮುಖ ಬೆಲೆಯ ನೋಟ್ಗಳನ್ನು ರದ್ದುಗೊಳಿಸಿದ್ದರಿಂದ ನೆರೆಯ ಪಾಕಿಸ್ತಾನದಿಂದ ಬರುತ್ತಿದ್ದ ನಕಲಿ ನೋಟ್ಗಳ ಹಾವಳಿ ರದ್ದಾಗಿದೆ. ಇದರಿಂದಾಗಿಯೇ ಇಂದು ಪಾಕಿಸ್ತಾನವು ಆರ್ಥಿಕವಾಗಿ ದೀವಾಳಿ ಅಂಚಿಗೆ ಬಂದಿದೆ. ಇದಲ್ಲದೆ ದಿನ ನಿತ್ಯ ಬಳಸುವ ಗೋದಿ ಹಿಟ್ಟನ್ನು ಸಹ ಅಲ್ಲಿನ ಸಾಮಾನ್ಯ ಜನ ಖರೀದಿಸುವುದು ಕಷ್ಟದ ಸ್ಥಿತಿಗೆ ಬಂದು ನಿಂತಿದೆ. ಮಹಿಳೆಯರಿಗೆ ರಾಜಕೀಯ ಅಧಿಕಾರ ಲೋಕಸಭೆಯಿಂದ ಎಲ್ಲಾ ಹಂತದಲ್ಲೂ ದೊರೆಯುವಂತೆ ಮಾಡುವ ಉದ್ದೆಶದಿಂದಲೇ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಕೆ.ಬಿ.ಮುದ್ದಪ್ಪ,ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಬೃಂಗೇಶ್,ನೆಲಮಂಗಲ ತಾಲ್ಲೂಕು ಅಧ್ಯಕ್ಷ ಜಗದೀಶ್ ಚೌದರಿ, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ಅಂಬರೀಶ್ ಗೌಡ,  ಮಂಜುನಾಥ್ ಇದ್ದರು.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

4 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

7 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

7 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

10 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

12 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

24 hours ago