ಭಾರತೀಯ ಕಿಸಾನ್ ಸಂಘದ ನೂತನ ಅಧ್ಯಕ್ಷ ಹಾಗು ಕಾರ್ಯದರ್ಶಿಗಳ ಆಯ್ಕೆ

ದೊಡ್ಡಬಳ್ಳಾಪುರ ನಗರ ಭಾರತೀಯ ಕಿಸಾನ್ ಸಂಘದ ನೂತನ ಅಧ್ಯಕ್ಷ ಹಾಗು ಕಾರ್ಯದರ್ಶಿಗಳನ್ನು ಕರ್ನಾಟಕ ದಕ್ಷಿಣಾ ಪ್ರಾಂತ್ಯ ಪ್ರಮುಖ ನಾರಾಯಣ ಸ್ವಾಮಿ ರವರ ಮಾರ್ಗದರ್ಶನದಲ್ಲಿ ಅಯ್ಕೆ ಮಾಡಲಾಯಿತು.

ನಗರದ ಪ್ರವಾಸಿ ಮಂದಿರದಲ್ಲಿ ಅಯೋಜನೆ ಮಾಡಲಾಗಿದ್ದ ಈ ಕಾರ್ಯಕ್ರಮದಲ್ಲಿ ಭಾರತೀಯ ಕಿಸಾನ್ ಸಂಘದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪದಾಧಿಕಾರಿಗಳನ್ನು ಸಂಘದ ಬೈಲ ಪ್ರಕಾರ ಮೂರು ವರ್ಷಗಳಿಗೊಮ್ಮೆ ಹೂಸ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, ಚುನಾವಣೆ ಅಧಿಕಾರಿಯಾಗಿ ಭಾರತೀಯ ಕಿಸಾನ್ ಸಂಘ ಪ್ರಮುಖ್ ಅಂಜಿನಪ್ಪ ನವರು ಸಂಘದ ಸದಸ್ಯರ ಕೈ ಮೇಲೆ ಎತ್ತುವ ಮೂಲಕ ಆಯ್ಕೆ ಮಾಡಲಾಗಿದೆ.

ಚುನಾವಣಾ ಪ್ರಕ್ರಿಯೆಯಲ್ಲಿ ತಾಲ್ಲೂಕು ಅಧ್ಯಕ್ಷರಾಗಿ  ದಡಘಟ್ಟ ಮಡುಗು ಗ್ರಾಮದ ಡಿ.ಕೆ ಸಂಪತ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಗುಂಡಪ್ಪನಾಯಕನಹಳ್ಳಿಯ ರಾಜಕುಮಾರ್ ಜಿ.ಕೆ, ಪ್ರಧಾನ ಕಾರ್ಯದರ್ಶಿಯಾಗಿ ರಾಜಘಟ್ಟ ಗಣೇಶ್, ಸಹ ಕಾರ್ಯದರ್ಶಿಯಾಗಿ ಲಕ್ಷ್ಮೀದೇವಿ,  ರಾಧಮಣಿ ಮಹಿಳಾ ಪ್ರಮುಖರಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ದಕ್ಷಿಣಾ ಪ್ರಾಂತ್ಯ ಪ್ರಮುಖ್ ನಾರಾಯಾಣ ಸ್ವಾಮಿರವರು ಮಾತನಾಡಿ, ಭಾರತ ದೇಶದಲ್ಲಿ ಇಪ್ಪತೈದು ಸಾವಿರಕೂ ಹೆಚ್ಚು ಸಂಘಟನೆಗಳಿವೆ. ಆದರೆ, ಅವುಗಳೆಲ್ಲಾ ವ್ಯಕ್ತಿ ಆಧಾರಿತ ಸಂಘಗಳಾಗಿದ್ದು, ಸ್ಥಾಪನೆ ಮಾಡಿದ ವ್ತಕ್ತಿ ಇರುವವರೆಗೂ ಆ ಸಂಘ ಕಾರ್ಯ ರೂಪದಲ್ಲಿ ಇರುತ್ತೆ.‌ ಆ ವ್ಯಕ್ತಿ ಸಾವನ್ನಪ್ಪಿದ ನಂತರ ಸಂಘ ಅಸ್ಥಿತ್ವವನ್ನು ಕಳೆದು ಕೊಳ್ಳುತ್ತದೆ. ಆದರೆ, ಭಾರತೀಯ ಕಿಸಾನ್ ಸಂಘ ಯಾರೆ ಇರಲಿ ಯಾರೆ ಬರಲಿ ಇದು ಕಾರ್ಯರೂಪದಲ್ಲಿ ಇರುತ್ತದೆ.  ಈ ಸಂಘ ಸ್ಥಾಪನೆಯಾಗಿದ್ದು 1979 ಮಾರ್ಚ್ 4 ರಂದು ರಾಜಸ್ಥಾನದ ಕೋಟಾದಲ್ಲಿ. ಪ್ರಸ್ತುತ ದಿನಗಳಲ್ಲಿ ದೇಶ ಮೂಲೆ ಮೂಲೆಗಳಲ್ಲಿ ಗ್ರಾಮ ತಾಲ್ಲೂಕು ಜಿಲ್ಲೆಗಳಲ್ಲಿ  ತಂಡಗಳನ್ನು ರಚನೆ ಮಾಡಿ ರೈತ ಸಮಸ್ಯೆ ಸೂಕ್ತ ಪರಿಹಾರ ಮಾಡುವುದು ಈ ಸಂಘದ ಉದ್ದೇಶವಾಗಿದೆ ಎಂದು ಹೇಳಿದರು.

ನಂತರ ನೂತನ  ಅಧ್ಯಕ್ಷರಾಗಿ ಆಯ್ಕೆಯಾದ ಡಿ.ಕೆ ಸಂಪತ್ ಕುಮಾರ್ ಮಾತನಾಡಿ, ನನ್ನನ್ನು ಗುರುತಿಸಿ ಭಾರತೀಯ ಕಿಸಾನ್ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ರೈತರ ಸೇವೆ ಮಾಡಲು ಅನುವು ಮಾಡಿಕೊಟ್ಟಂತಹ ಭಾರತೀಯ ಕಿಸಾನ್ ಸಂಘದ ಎಲ್ಲಾ ಪ್ರಮುಖರಿಗೂ ಧನ್ವಾದಗಳು. ನನಗೆ ನೀಡಿದ ಜವಾಬ್ದಾರಿಯನ್ನು ಶ್ರದ್ಧಾಪೂರ್ವಕವಾಗಿ ನಿಭಾಯಿಸುತ್ತೇನೆ. ಸದಾ ರೈತರ ಪರವಾಗಿ ಇರುತ್ತೇನೆ ಎಂದು ಹೇಳಿದರು.

ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಜಿ.ಕೆ ರಾಜ್ ಕುಮಾರ್ ಮಾತನಾಡಿ, ನನಗೆ ತಾಲ್ಲೂಕು ಘಟಕದ ಉಪಾಧ್ಯಕ್ಷರಾಗಿ ನೇಮಕ ಮಾಡಿರುವುದಕ್ಕೆ ಎಲ್ಲಾ ಪ್ರಮುಖರಿಗೂ ಧನ್ಯವಾದಗಳು. ಭಾರತೀಯ ಕಿಸಾನ್ ಸಂಘ ಒಂದು ಹೆಮ್ಮರ. ಇಂತಹ ಸಂಘದಲ್ಲಿ ಕೆಲಸ ಮಾಡುವುದು ನನ್ನ ಅದೃಷ್ಟ. ಇನ್ನು ಮುಂದೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜೊತೆಗೂಡಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಯೊಂದು ಹಳ್ಳಿಯಲ್ಲೂ ಭಾರತೀಯ ಕಿಸಾನ್ ಸಂಘ ಮೊಳಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘ ದಕ್ಷಿಣಾ ಪ್ರಾಂತ್ಯದ ಪ್ರಮುಖ್ ಪುಟ್ಟಸ್ವಾಮಿ ಗೌಡ, ದೊಡ್ಡಬಳ್ಳಾಪುರದ ನಿಕಟ ಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್, ಕಾರ್ಯದರ್ಶಿ ಹರಿಕುಮಾರ್, ಜಿಲ್ಲಾ ಮಹಿಳ ಪ್ರಮುಖ್ ಅಂಬಿಕಾ ಹಾಗು ಜಿಲ್ಲಾ ತಾಲ್ಲೂಕು ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು.

Ramesh Babu

Journalist

Recent Posts

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

6 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

6 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

9 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

20 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

22 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

1 day ago