ದೊಡ್ಡಬಳ್ಳಾಪುರ ನಗರ ಭಾರತೀಯ ಕಿಸಾನ್ ಸಂಘದ ನೂತನ ಅಧ್ಯಕ್ಷ ಹಾಗು ಕಾರ್ಯದರ್ಶಿಗಳನ್ನು ಕರ್ನಾಟಕ ದಕ್ಷಿಣಾ ಪ್ರಾಂತ್ಯ ಪ್ರಮುಖ ನಾರಾಯಣ ಸ್ವಾಮಿ ರವರ ಮಾರ್ಗದರ್ಶನದಲ್ಲಿ ಅಯ್ಕೆ ಮಾಡಲಾಯಿತು.
ನಗರದ ಪ್ರವಾಸಿ ಮಂದಿರದಲ್ಲಿ ಅಯೋಜನೆ ಮಾಡಲಾಗಿದ್ದ ಈ ಕಾರ್ಯಕ್ರಮದಲ್ಲಿ ಭಾರತೀಯ ಕಿಸಾನ್ ಸಂಘದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪದಾಧಿಕಾರಿಗಳನ್ನು ಸಂಘದ ಬೈಲ ಪ್ರಕಾರ ಮೂರು ವರ್ಷಗಳಿಗೊಮ್ಮೆ ಹೂಸ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, ಚುನಾವಣೆ ಅಧಿಕಾರಿಯಾಗಿ ಭಾರತೀಯ ಕಿಸಾನ್ ಸಂಘ ಪ್ರಮುಖ್ ಅಂಜಿನಪ್ಪ ನವರು ಸಂಘದ ಸದಸ್ಯರ ಕೈ ಮೇಲೆ ಎತ್ತುವ ಮೂಲಕ ಆಯ್ಕೆ ಮಾಡಲಾಗಿದೆ.
ಚುನಾವಣಾ ಪ್ರಕ್ರಿಯೆಯಲ್ಲಿ ತಾಲ್ಲೂಕು ಅಧ್ಯಕ್ಷರಾಗಿ ದಡಘಟ್ಟ ಮಡುಗು ಗ್ರಾಮದ ಡಿ.ಕೆ ಸಂಪತ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಗುಂಡಪ್ಪನಾಯಕನಹಳ್ಳಿಯ ರಾಜಕುಮಾರ್ ಜಿ.ಕೆ, ಪ್ರಧಾನ ಕಾರ್ಯದರ್ಶಿಯಾಗಿ ರಾಜಘಟ್ಟ ಗಣೇಶ್, ಸಹ ಕಾರ್ಯದರ್ಶಿಯಾಗಿ ಲಕ್ಷ್ಮೀದೇವಿ, ರಾಧಮಣಿ ಮಹಿಳಾ ಪ್ರಮುಖರಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ದಕ್ಷಿಣಾ ಪ್ರಾಂತ್ಯ ಪ್ರಮುಖ್ ನಾರಾಯಾಣ ಸ್ವಾಮಿರವರು ಮಾತನಾಡಿ, ಭಾರತ ದೇಶದಲ್ಲಿ ಇಪ್ಪತೈದು ಸಾವಿರಕೂ ಹೆಚ್ಚು ಸಂಘಟನೆಗಳಿವೆ. ಆದರೆ, ಅವುಗಳೆಲ್ಲಾ ವ್ಯಕ್ತಿ ಆಧಾರಿತ ಸಂಘಗಳಾಗಿದ್ದು, ಸ್ಥಾಪನೆ ಮಾಡಿದ ವ್ತಕ್ತಿ ಇರುವವರೆಗೂ ಆ ಸಂಘ ಕಾರ್ಯ ರೂಪದಲ್ಲಿ ಇರುತ್ತೆ. ಆ ವ್ಯಕ್ತಿ ಸಾವನ್ನಪ್ಪಿದ ನಂತರ ಸಂಘ ಅಸ್ಥಿತ್ವವನ್ನು ಕಳೆದು ಕೊಳ್ಳುತ್ತದೆ. ಆದರೆ, ಭಾರತೀಯ ಕಿಸಾನ್ ಸಂಘ ಯಾರೆ ಇರಲಿ ಯಾರೆ ಬರಲಿ ಇದು ಕಾರ್ಯರೂಪದಲ್ಲಿ ಇರುತ್ತದೆ. ಈ ಸಂಘ ಸ್ಥಾಪನೆಯಾಗಿದ್ದು 1979 ಮಾರ್ಚ್ 4 ರಂದು ರಾಜಸ್ಥಾನದ ಕೋಟಾದಲ್ಲಿ. ಪ್ರಸ್ತುತ ದಿನಗಳಲ್ಲಿ ದೇಶ ಮೂಲೆ ಮೂಲೆಗಳಲ್ಲಿ ಗ್ರಾಮ ತಾಲ್ಲೂಕು ಜಿಲ್ಲೆಗಳಲ್ಲಿ ತಂಡಗಳನ್ನು ರಚನೆ ಮಾಡಿ ರೈತ ಸಮಸ್ಯೆ ಸೂಕ್ತ ಪರಿಹಾರ ಮಾಡುವುದು ಈ ಸಂಘದ ಉದ್ದೇಶವಾಗಿದೆ ಎಂದು ಹೇಳಿದರು.
ನಂತರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಿ.ಕೆ ಸಂಪತ್ ಕುಮಾರ್ ಮಾತನಾಡಿ, ನನ್ನನ್ನು ಗುರುತಿಸಿ ಭಾರತೀಯ ಕಿಸಾನ್ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ರೈತರ ಸೇವೆ ಮಾಡಲು ಅನುವು ಮಾಡಿಕೊಟ್ಟಂತಹ ಭಾರತೀಯ ಕಿಸಾನ್ ಸಂಘದ ಎಲ್ಲಾ ಪ್ರಮುಖರಿಗೂ ಧನ್ವಾದಗಳು. ನನಗೆ ನೀಡಿದ ಜವಾಬ್ದಾರಿಯನ್ನು ಶ್ರದ್ಧಾಪೂರ್ವಕವಾಗಿ ನಿಭಾಯಿಸುತ್ತೇನೆ. ಸದಾ ರೈತರ ಪರವಾಗಿ ಇರುತ್ತೇನೆ ಎಂದು ಹೇಳಿದರು.
ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಜಿ.ಕೆ ರಾಜ್ ಕುಮಾರ್ ಮಾತನಾಡಿ, ನನಗೆ ತಾಲ್ಲೂಕು ಘಟಕದ ಉಪಾಧ್ಯಕ್ಷರಾಗಿ ನೇಮಕ ಮಾಡಿರುವುದಕ್ಕೆ ಎಲ್ಲಾ ಪ್ರಮುಖರಿಗೂ ಧನ್ಯವಾದಗಳು. ಭಾರತೀಯ ಕಿಸಾನ್ ಸಂಘ ಒಂದು ಹೆಮ್ಮರ. ಇಂತಹ ಸಂಘದಲ್ಲಿ ಕೆಲಸ ಮಾಡುವುದು ನನ್ನ ಅದೃಷ್ಟ. ಇನ್ನು ಮುಂದೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜೊತೆಗೂಡಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಯೊಂದು ಹಳ್ಳಿಯಲ್ಲೂ ಭಾರತೀಯ ಕಿಸಾನ್ ಸಂಘ ಮೊಳಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘ ದಕ್ಷಿಣಾ ಪ್ರಾಂತ್ಯದ ಪ್ರಮುಖ್ ಪುಟ್ಟಸ್ವಾಮಿ ಗೌಡ, ದೊಡ್ಡಬಳ್ಳಾಪುರದ ನಿಕಟ ಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್, ಕಾರ್ಯದರ್ಶಿ ಹರಿಕುಮಾರ್, ಜಿಲ್ಲಾ ಮಹಿಳ ಪ್ರಮುಖ್ ಅಂಬಿಕಾ ಹಾಗು ಜಿಲ್ಲಾ ತಾಲ್ಲೂಕು ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…