ಭಾರತೀಯ ಕಿಸಾನ್ ಸಂಘದ ನೂತನ ಅಧ್ಯಕ್ಷ ಹಾಗು ಕಾರ್ಯದರ್ಶಿಗಳ ಆಯ್ಕೆ

ದೊಡ್ಡಬಳ್ಳಾಪುರ ನಗರ ಭಾರತೀಯ ಕಿಸಾನ್ ಸಂಘದ ನೂತನ ಅಧ್ಯಕ್ಷ ಹಾಗು ಕಾರ್ಯದರ್ಶಿಗಳನ್ನು ಕರ್ನಾಟಕ ದಕ್ಷಿಣಾ ಪ್ರಾಂತ್ಯ ಪ್ರಮುಖ ನಾರಾಯಣ ಸ್ವಾಮಿ ರವರ ಮಾರ್ಗದರ್ಶನದಲ್ಲಿ ಅಯ್ಕೆ ಮಾಡಲಾಯಿತು.

ನಗರದ ಪ್ರವಾಸಿ ಮಂದಿರದಲ್ಲಿ ಅಯೋಜನೆ ಮಾಡಲಾಗಿದ್ದ ಈ ಕಾರ್ಯಕ್ರಮದಲ್ಲಿ ಭಾರತೀಯ ಕಿಸಾನ್ ಸಂಘದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪದಾಧಿಕಾರಿಗಳನ್ನು ಸಂಘದ ಬೈಲ ಪ್ರಕಾರ ಮೂರು ವರ್ಷಗಳಿಗೊಮ್ಮೆ ಹೂಸ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, ಚುನಾವಣೆ ಅಧಿಕಾರಿಯಾಗಿ ಭಾರತೀಯ ಕಿಸಾನ್ ಸಂಘ ಪ್ರಮುಖ್ ಅಂಜಿನಪ್ಪ ನವರು ಸಂಘದ ಸದಸ್ಯರ ಕೈ ಮೇಲೆ ಎತ್ತುವ ಮೂಲಕ ಆಯ್ಕೆ ಮಾಡಲಾಗಿದೆ.

ಚುನಾವಣಾ ಪ್ರಕ್ರಿಯೆಯಲ್ಲಿ ತಾಲ್ಲೂಕು ಅಧ್ಯಕ್ಷರಾಗಿ  ದಡಘಟ್ಟ ಮಡುಗು ಗ್ರಾಮದ ಡಿ.ಕೆ ಸಂಪತ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಗುಂಡಪ್ಪನಾಯಕನಹಳ್ಳಿಯ ರಾಜಕುಮಾರ್ ಜಿ.ಕೆ, ಪ್ರಧಾನ ಕಾರ್ಯದರ್ಶಿಯಾಗಿ ರಾಜಘಟ್ಟ ಗಣೇಶ್, ಸಹ ಕಾರ್ಯದರ್ಶಿಯಾಗಿ ಲಕ್ಷ್ಮೀದೇವಿ,  ರಾಧಮಣಿ ಮಹಿಳಾ ಪ್ರಮುಖರಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ದಕ್ಷಿಣಾ ಪ್ರಾಂತ್ಯ ಪ್ರಮುಖ್ ನಾರಾಯಾಣ ಸ್ವಾಮಿರವರು ಮಾತನಾಡಿ, ಭಾರತ ದೇಶದಲ್ಲಿ ಇಪ್ಪತೈದು ಸಾವಿರಕೂ ಹೆಚ್ಚು ಸಂಘಟನೆಗಳಿವೆ. ಆದರೆ, ಅವುಗಳೆಲ್ಲಾ ವ್ಯಕ್ತಿ ಆಧಾರಿತ ಸಂಘಗಳಾಗಿದ್ದು, ಸ್ಥಾಪನೆ ಮಾಡಿದ ವ್ತಕ್ತಿ ಇರುವವರೆಗೂ ಆ ಸಂಘ ಕಾರ್ಯ ರೂಪದಲ್ಲಿ ಇರುತ್ತೆ.‌ ಆ ವ್ಯಕ್ತಿ ಸಾವನ್ನಪ್ಪಿದ ನಂತರ ಸಂಘ ಅಸ್ಥಿತ್ವವನ್ನು ಕಳೆದು ಕೊಳ್ಳುತ್ತದೆ. ಆದರೆ, ಭಾರತೀಯ ಕಿಸಾನ್ ಸಂಘ ಯಾರೆ ಇರಲಿ ಯಾರೆ ಬರಲಿ ಇದು ಕಾರ್ಯರೂಪದಲ್ಲಿ ಇರುತ್ತದೆ.  ಈ ಸಂಘ ಸ್ಥಾಪನೆಯಾಗಿದ್ದು 1979 ಮಾರ್ಚ್ 4 ರಂದು ರಾಜಸ್ಥಾನದ ಕೋಟಾದಲ್ಲಿ. ಪ್ರಸ್ತುತ ದಿನಗಳಲ್ಲಿ ದೇಶ ಮೂಲೆ ಮೂಲೆಗಳಲ್ಲಿ ಗ್ರಾಮ ತಾಲ್ಲೂಕು ಜಿಲ್ಲೆಗಳಲ್ಲಿ  ತಂಡಗಳನ್ನು ರಚನೆ ಮಾಡಿ ರೈತ ಸಮಸ್ಯೆ ಸೂಕ್ತ ಪರಿಹಾರ ಮಾಡುವುದು ಈ ಸಂಘದ ಉದ್ದೇಶವಾಗಿದೆ ಎಂದು ಹೇಳಿದರು.

ನಂತರ ನೂತನ  ಅಧ್ಯಕ್ಷರಾಗಿ ಆಯ್ಕೆಯಾದ ಡಿ.ಕೆ ಸಂಪತ್ ಕುಮಾರ್ ಮಾತನಾಡಿ, ನನ್ನನ್ನು ಗುರುತಿಸಿ ಭಾರತೀಯ ಕಿಸಾನ್ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ರೈತರ ಸೇವೆ ಮಾಡಲು ಅನುವು ಮಾಡಿಕೊಟ್ಟಂತಹ ಭಾರತೀಯ ಕಿಸಾನ್ ಸಂಘದ ಎಲ್ಲಾ ಪ್ರಮುಖರಿಗೂ ಧನ್ವಾದಗಳು. ನನಗೆ ನೀಡಿದ ಜವಾಬ್ದಾರಿಯನ್ನು ಶ್ರದ್ಧಾಪೂರ್ವಕವಾಗಿ ನಿಭಾಯಿಸುತ್ತೇನೆ. ಸದಾ ರೈತರ ಪರವಾಗಿ ಇರುತ್ತೇನೆ ಎಂದು ಹೇಳಿದರು.

ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಜಿ.ಕೆ ರಾಜ್ ಕುಮಾರ್ ಮಾತನಾಡಿ, ನನಗೆ ತಾಲ್ಲೂಕು ಘಟಕದ ಉಪಾಧ್ಯಕ್ಷರಾಗಿ ನೇಮಕ ಮಾಡಿರುವುದಕ್ಕೆ ಎಲ್ಲಾ ಪ್ರಮುಖರಿಗೂ ಧನ್ಯವಾದಗಳು. ಭಾರತೀಯ ಕಿಸಾನ್ ಸಂಘ ಒಂದು ಹೆಮ್ಮರ. ಇಂತಹ ಸಂಘದಲ್ಲಿ ಕೆಲಸ ಮಾಡುವುದು ನನ್ನ ಅದೃಷ್ಟ. ಇನ್ನು ಮುಂದೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜೊತೆಗೂಡಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಯೊಂದು ಹಳ್ಳಿಯಲ್ಲೂ ಭಾರತೀಯ ಕಿಸಾನ್ ಸಂಘ ಮೊಳಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘ ದಕ್ಷಿಣಾ ಪ್ರಾಂತ್ಯದ ಪ್ರಮುಖ್ ಪುಟ್ಟಸ್ವಾಮಿ ಗೌಡ, ದೊಡ್ಡಬಳ್ಳಾಪುರದ ನಿಕಟ ಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್, ಕಾರ್ಯದರ್ಶಿ ಹರಿಕುಮಾರ್, ಜಿಲ್ಲಾ ಮಹಿಳ ಪ್ರಮುಖ್ ಅಂಬಿಕಾ ಹಾಗು ಜಿಲ್ಲಾ ತಾಲ್ಲೂಕು ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು.

Ramesh Babu

Journalist

Recent Posts

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

7 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

9 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

9 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

17 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

1 day ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

1 day ago