ಭಾರತೀಯ ಕಿಸಾನ್ ಸಂಘದ ನೂತನ ಅಧ್ಯಕ್ಷ ಹಾಗು ಕಾರ್ಯದರ್ಶಿಗಳ ಆಯ್ಕೆ

ದೊಡ್ಡಬಳ್ಳಾಪುರ ನಗರ ಭಾರತೀಯ ಕಿಸಾನ್ ಸಂಘದ ನೂತನ ಅಧ್ಯಕ್ಷ ಹಾಗು ಕಾರ್ಯದರ್ಶಿಗಳನ್ನು ಕರ್ನಾಟಕ ದಕ್ಷಿಣಾ ಪ್ರಾಂತ್ಯ ಪ್ರಮುಖ ನಾರಾಯಣ ಸ್ವಾಮಿ ರವರ ಮಾರ್ಗದರ್ಶನದಲ್ಲಿ ಅಯ್ಕೆ ಮಾಡಲಾಯಿತು.

ನಗರದ ಪ್ರವಾಸಿ ಮಂದಿರದಲ್ಲಿ ಅಯೋಜನೆ ಮಾಡಲಾಗಿದ್ದ ಈ ಕಾರ್ಯಕ್ರಮದಲ್ಲಿ ಭಾರತೀಯ ಕಿಸಾನ್ ಸಂಘದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪದಾಧಿಕಾರಿಗಳನ್ನು ಸಂಘದ ಬೈಲ ಪ್ರಕಾರ ಮೂರು ವರ್ಷಗಳಿಗೊಮ್ಮೆ ಹೂಸ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, ಚುನಾವಣೆ ಅಧಿಕಾರಿಯಾಗಿ ಭಾರತೀಯ ಕಿಸಾನ್ ಸಂಘ ಪ್ರಮುಖ್ ಅಂಜಿನಪ್ಪ ನವರು ಸಂಘದ ಸದಸ್ಯರ ಕೈ ಮೇಲೆ ಎತ್ತುವ ಮೂಲಕ ಆಯ್ಕೆ ಮಾಡಲಾಗಿದೆ.

ಚುನಾವಣಾ ಪ್ರಕ್ರಿಯೆಯಲ್ಲಿ ತಾಲ್ಲೂಕು ಅಧ್ಯಕ್ಷರಾಗಿ  ದಡಘಟ್ಟ ಮಡುಗು ಗ್ರಾಮದ ಡಿ.ಕೆ ಸಂಪತ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಗುಂಡಪ್ಪನಾಯಕನಹಳ್ಳಿಯ ರಾಜಕುಮಾರ್ ಜಿ.ಕೆ, ಪ್ರಧಾನ ಕಾರ್ಯದರ್ಶಿಯಾಗಿ ರಾಜಘಟ್ಟ ಗಣೇಶ್, ಸಹ ಕಾರ್ಯದರ್ಶಿಯಾಗಿ ಲಕ್ಷ್ಮೀದೇವಿ,  ರಾಧಮಣಿ ಮಹಿಳಾ ಪ್ರಮುಖರಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ದಕ್ಷಿಣಾ ಪ್ರಾಂತ್ಯ ಪ್ರಮುಖ್ ನಾರಾಯಾಣ ಸ್ವಾಮಿರವರು ಮಾತನಾಡಿ, ಭಾರತ ದೇಶದಲ್ಲಿ ಇಪ್ಪತೈದು ಸಾವಿರಕೂ ಹೆಚ್ಚು ಸಂಘಟನೆಗಳಿವೆ. ಆದರೆ, ಅವುಗಳೆಲ್ಲಾ ವ್ಯಕ್ತಿ ಆಧಾರಿತ ಸಂಘಗಳಾಗಿದ್ದು, ಸ್ಥಾಪನೆ ಮಾಡಿದ ವ್ತಕ್ತಿ ಇರುವವರೆಗೂ ಆ ಸಂಘ ಕಾರ್ಯ ರೂಪದಲ್ಲಿ ಇರುತ್ತೆ.‌ ಆ ವ್ಯಕ್ತಿ ಸಾವನ್ನಪ್ಪಿದ ನಂತರ ಸಂಘ ಅಸ್ಥಿತ್ವವನ್ನು ಕಳೆದು ಕೊಳ್ಳುತ್ತದೆ. ಆದರೆ, ಭಾರತೀಯ ಕಿಸಾನ್ ಸಂಘ ಯಾರೆ ಇರಲಿ ಯಾರೆ ಬರಲಿ ಇದು ಕಾರ್ಯರೂಪದಲ್ಲಿ ಇರುತ್ತದೆ.  ಈ ಸಂಘ ಸ್ಥಾಪನೆಯಾಗಿದ್ದು 1979 ಮಾರ್ಚ್ 4 ರಂದು ರಾಜಸ್ಥಾನದ ಕೋಟಾದಲ್ಲಿ. ಪ್ರಸ್ತುತ ದಿನಗಳಲ್ಲಿ ದೇಶ ಮೂಲೆ ಮೂಲೆಗಳಲ್ಲಿ ಗ್ರಾಮ ತಾಲ್ಲೂಕು ಜಿಲ್ಲೆಗಳಲ್ಲಿ  ತಂಡಗಳನ್ನು ರಚನೆ ಮಾಡಿ ರೈತ ಸಮಸ್ಯೆ ಸೂಕ್ತ ಪರಿಹಾರ ಮಾಡುವುದು ಈ ಸಂಘದ ಉದ್ದೇಶವಾಗಿದೆ ಎಂದು ಹೇಳಿದರು.

ನಂತರ ನೂತನ  ಅಧ್ಯಕ್ಷರಾಗಿ ಆಯ್ಕೆಯಾದ ಡಿ.ಕೆ ಸಂಪತ್ ಕುಮಾರ್ ಮಾತನಾಡಿ, ನನ್ನನ್ನು ಗುರುತಿಸಿ ಭಾರತೀಯ ಕಿಸಾನ್ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ರೈತರ ಸೇವೆ ಮಾಡಲು ಅನುವು ಮಾಡಿಕೊಟ್ಟಂತಹ ಭಾರತೀಯ ಕಿಸಾನ್ ಸಂಘದ ಎಲ್ಲಾ ಪ್ರಮುಖರಿಗೂ ಧನ್ವಾದಗಳು. ನನಗೆ ನೀಡಿದ ಜವಾಬ್ದಾರಿಯನ್ನು ಶ್ರದ್ಧಾಪೂರ್ವಕವಾಗಿ ನಿಭಾಯಿಸುತ್ತೇನೆ. ಸದಾ ರೈತರ ಪರವಾಗಿ ಇರುತ್ತೇನೆ ಎಂದು ಹೇಳಿದರು.

ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಜಿ.ಕೆ ರಾಜ್ ಕುಮಾರ್ ಮಾತನಾಡಿ, ನನಗೆ ತಾಲ್ಲೂಕು ಘಟಕದ ಉಪಾಧ್ಯಕ್ಷರಾಗಿ ನೇಮಕ ಮಾಡಿರುವುದಕ್ಕೆ ಎಲ್ಲಾ ಪ್ರಮುಖರಿಗೂ ಧನ್ಯವಾದಗಳು. ಭಾರತೀಯ ಕಿಸಾನ್ ಸಂಘ ಒಂದು ಹೆಮ್ಮರ. ಇಂತಹ ಸಂಘದಲ್ಲಿ ಕೆಲಸ ಮಾಡುವುದು ನನ್ನ ಅದೃಷ್ಟ. ಇನ್ನು ಮುಂದೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜೊತೆಗೂಡಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಯೊಂದು ಹಳ್ಳಿಯಲ್ಲೂ ಭಾರತೀಯ ಕಿಸಾನ್ ಸಂಘ ಮೊಳಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘ ದಕ್ಷಿಣಾ ಪ್ರಾಂತ್ಯದ ಪ್ರಮುಖ್ ಪುಟ್ಟಸ್ವಾಮಿ ಗೌಡ, ದೊಡ್ಡಬಳ್ಳಾಪುರದ ನಿಕಟ ಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್, ಕಾರ್ಯದರ್ಶಿ ಹರಿಕುಮಾರ್, ಜಿಲ್ಲಾ ಮಹಿಳ ಪ್ರಮುಖ್ ಅಂಬಿಕಾ ಹಾಗು ಜಿಲ್ಲಾ ತಾಲ್ಲೂಕು ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

6 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

7 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

8 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

12 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

19 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago