ಭಾರತೀಯ ಕಿಸಾನ್ ಸಂಘದ ನೂತನ ಅಧ್ಯಕ್ಷ ಹಾಗು ಕಾರ್ಯದರ್ಶಿಗಳ ಆಯ್ಕೆ

ದೊಡ್ಡಬಳ್ಳಾಪುರ ನಗರ ಭಾರತೀಯ ಕಿಸಾನ್ ಸಂಘದ ನೂತನ ಅಧ್ಯಕ್ಷ ಹಾಗು ಕಾರ್ಯದರ್ಶಿಗಳನ್ನು ಕರ್ನಾಟಕ ದಕ್ಷಿಣಾ ಪ್ರಾಂತ್ಯ ಪ್ರಮುಖ ನಾರಾಯಣ ಸ್ವಾಮಿ ರವರ ಮಾರ್ಗದರ್ಶನದಲ್ಲಿ ಅಯ್ಕೆ ಮಾಡಲಾಯಿತು.

ನಗರದ ಪ್ರವಾಸಿ ಮಂದಿರದಲ್ಲಿ ಅಯೋಜನೆ ಮಾಡಲಾಗಿದ್ದ ಈ ಕಾರ್ಯಕ್ರಮದಲ್ಲಿ ಭಾರತೀಯ ಕಿಸಾನ್ ಸಂಘದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪದಾಧಿಕಾರಿಗಳನ್ನು ಸಂಘದ ಬೈಲ ಪ್ರಕಾರ ಮೂರು ವರ್ಷಗಳಿಗೊಮ್ಮೆ ಹೂಸ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, ಚುನಾವಣೆ ಅಧಿಕಾರಿಯಾಗಿ ಭಾರತೀಯ ಕಿಸಾನ್ ಸಂಘ ಪ್ರಮುಖ್ ಅಂಜಿನಪ್ಪ ನವರು ಸಂಘದ ಸದಸ್ಯರ ಕೈ ಮೇಲೆ ಎತ್ತುವ ಮೂಲಕ ಆಯ್ಕೆ ಮಾಡಲಾಗಿದೆ.

ಚುನಾವಣಾ ಪ್ರಕ್ರಿಯೆಯಲ್ಲಿ ತಾಲ್ಲೂಕು ಅಧ್ಯಕ್ಷರಾಗಿ  ದಡಘಟ್ಟ ಮಡುಗು ಗ್ರಾಮದ ಡಿ.ಕೆ ಸಂಪತ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಗುಂಡಪ್ಪನಾಯಕನಹಳ್ಳಿಯ ರಾಜಕುಮಾರ್ ಜಿ.ಕೆ, ಪ್ರಧಾನ ಕಾರ್ಯದರ್ಶಿಯಾಗಿ ರಾಜಘಟ್ಟ ಗಣೇಶ್, ಸಹ ಕಾರ್ಯದರ್ಶಿಯಾಗಿ ಲಕ್ಷ್ಮೀದೇವಿ,  ರಾಧಮಣಿ ಮಹಿಳಾ ಪ್ರಮುಖರಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ದಕ್ಷಿಣಾ ಪ್ರಾಂತ್ಯ ಪ್ರಮುಖ್ ನಾರಾಯಾಣ ಸ್ವಾಮಿರವರು ಮಾತನಾಡಿ, ಭಾರತ ದೇಶದಲ್ಲಿ ಇಪ್ಪತೈದು ಸಾವಿರಕೂ ಹೆಚ್ಚು ಸಂಘಟನೆಗಳಿವೆ. ಆದರೆ, ಅವುಗಳೆಲ್ಲಾ ವ್ಯಕ್ತಿ ಆಧಾರಿತ ಸಂಘಗಳಾಗಿದ್ದು, ಸ್ಥಾಪನೆ ಮಾಡಿದ ವ್ತಕ್ತಿ ಇರುವವರೆಗೂ ಆ ಸಂಘ ಕಾರ್ಯ ರೂಪದಲ್ಲಿ ಇರುತ್ತೆ.‌ ಆ ವ್ಯಕ್ತಿ ಸಾವನ್ನಪ್ಪಿದ ನಂತರ ಸಂಘ ಅಸ್ಥಿತ್ವವನ್ನು ಕಳೆದು ಕೊಳ್ಳುತ್ತದೆ. ಆದರೆ, ಭಾರತೀಯ ಕಿಸಾನ್ ಸಂಘ ಯಾರೆ ಇರಲಿ ಯಾರೆ ಬರಲಿ ಇದು ಕಾರ್ಯರೂಪದಲ್ಲಿ ಇರುತ್ತದೆ.  ಈ ಸಂಘ ಸ್ಥಾಪನೆಯಾಗಿದ್ದು 1979 ಮಾರ್ಚ್ 4 ರಂದು ರಾಜಸ್ಥಾನದ ಕೋಟಾದಲ್ಲಿ. ಪ್ರಸ್ತುತ ದಿನಗಳಲ್ಲಿ ದೇಶ ಮೂಲೆ ಮೂಲೆಗಳಲ್ಲಿ ಗ್ರಾಮ ತಾಲ್ಲೂಕು ಜಿಲ್ಲೆಗಳಲ್ಲಿ  ತಂಡಗಳನ್ನು ರಚನೆ ಮಾಡಿ ರೈತ ಸಮಸ್ಯೆ ಸೂಕ್ತ ಪರಿಹಾರ ಮಾಡುವುದು ಈ ಸಂಘದ ಉದ್ದೇಶವಾಗಿದೆ ಎಂದು ಹೇಳಿದರು.

ನಂತರ ನೂತನ  ಅಧ್ಯಕ್ಷರಾಗಿ ಆಯ್ಕೆಯಾದ ಡಿ.ಕೆ ಸಂಪತ್ ಕುಮಾರ್ ಮಾತನಾಡಿ, ನನ್ನನ್ನು ಗುರುತಿಸಿ ಭಾರತೀಯ ಕಿಸಾನ್ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ರೈತರ ಸೇವೆ ಮಾಡಲು ಅನುವು ಮಾಡಿಕೊಟ್ಟಂತಹ ಭಾರತೀಯ ಕಿಸಾನ್ ಸಂಘದ ಎಲ್ಲಾ ಪ್ರಮುಖರಿಗೂ ಧನ್ವಾದಗಳು. ನನಗೆ ನೀಡಿದ ಜವಾಬ್ದಾರಿಯನ್ನು ಶ್ರದ್ಧಾಪೂರ್ವಕವಾಗಿ ನಿಭಾಯಿಸುತ್ತೇನೆ. ಸದಾ ರೈತರ ಪರವಾಗಿ ಇರುತ್ತೇನೆ ಎಂದು ಹೇಳಿದರು.

ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಜಿ.ಕೆ ರಾಜ್ ಕುಮಾರ್ ಮಾತನಾಡಿ, ನನಗೆ ತಾಲ್ಲೂಕು ಘಟಕದ ಉಪಾಧ್ಯಕ್ಷರಾಗಿ ನೇಮಕ ಮಾಡಿರುವುದಕ್ಕೆ ಎಲ್ಲಾ ಪ್ರಮುಖರಿಗೂ ಧನ್ಯವಾದಗಳು. ಭಾರತೀಯ ಕಿಸಾನ್ ಸಂಘ ಒಂದು ಹೆಮ್ಮರ. ಇಂತಹ ಸಂಘದಲ್ಲಿ ಕೆಲಸ ಮಾಡುವುದು ನನ್ನ ಅದೃಷ್ಟ. ಇನ್ನು ಮುಂದೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜೊತೆಗೂಡಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಯೊಂದು ಹಳ್ಳಿಯಲ್ಲೂ ಭಾರತೀಯ ಕಿಸಾನ್ ಸಂಘ ಮೊಳಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘ ದಕ್ಷಿಣಾ ಪ್ರಾಂತ್ಯದ ಪ್ರಮುಖ್ ಪುಟ್ಟಸ್ವಾಮಿ ಗೌಡ, ದೊಡ್ಡಬಳ್ಳಾಪುರದ ನಿಕಟ ಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್, ಕಾರ್ಯದರ್ಶಿ ಹರಿಕುಮಾರ್, ಜಿಲ್ಲಾ ಮಹಿಳ ಪ್ರಮುಖ್ ಅಂಬಿಕಾ ಹಾಗು ಜಿಲ್ಲಾ ತಾಲ್ಲೂಕು ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

20 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago