ಭಾರತೀಯ ಜನತಾ ಪಾರ್ಟಿ, ಬೆಂ. ಗ್ರಾ ಜಿಲ್ಲಾ ಅಧ್ಯಕ್ಷರು ಹಾಗೂ ಮಂಡಲ ಅಧ್ಯಕ್ಷರ ಘೋಷಣೆ: ಯಾರ್ಯಾರು ಆಯ್ಕೆಯಾಗಿದ್ದಾರೆ‌..? ಇಲ್ಲಿದೆ ಮಾಹಿತಿ ಓದಿ

ಭಾರತೀಯ ಜನತಾ ಪಾರ್ಟಿ, ಬೆಂ. ಗ್ರಾ ಜಿಲ್ಲಾ ಸಂಘಟನಾ ಚುನಾವಣೆ, ಜಿಲ್ಲಾ ಅಧ್ಯಕ್ಷರು ಹಾಗೂ ಮಂಡಲ ಅಧ್ಯಕ್ಷರ ಘೋಷಣೆ ಮಾಡಲಾಗಿದೆ.

  • ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ- ಎಚ್.ರಾಮಕೃಷ್ಣಪ್ಪ
  • ದೊಡ್ಡಬಳ್ಳಾಪುರ ನಗರ ಮಂಡಲ ಅಧ್ಯಕ್ಷ- ಬಿ.ಮುದ್ದಪ್ಪ
  • ದೊಡ್ಡಬಳ್ಳಾಪುರ ಗ್ರಾಮಾಂತರ ಅಧ್ಯಕ್ಷ- ಕೆ. ನಾಗೇಶ್
  • ನೆಲಮಂಗಲ ಮಂಡಲ ಅಧ್ಯಕ್ಷ- ಜಗದೀಶ್ ಚೌದರಿ
  • ದೇವನಹಳ್ಳಿ ಮಂಡಲ ಅಧ್ಯಕ್ಷ- ಎನ್.ಎಲ್. ಅಂಬರೀಷ್‌ ಗೌಡ
  • ಹೊಸಕೋಟೆ ಮಂಡಲ ನಗರ ಅಧ್ಯಕ್ಷ- ಬಾಲಚಂದ್ರನ್ ಎನ್  ಆಯ್ಕೆ

ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಎಚ್.ರಾಮಕೃಷ್ಣಪ್ಪ ಮಾತನಾಡಿ, ಕಾರ್ಯಕರ್ತರ ಪಕ್ಷ ಭಾರತೀತ ಜನತಾ ಪಕ್ಷ. ಬಿಜೆಪಿ ಸದಸ್ಯರನ್ನ ಗುರುತಿಸುವ ಪಕ್ಷ. ಬಿಜೆಪಿ ಕಟ್ಟಕಡೆಯ ವ್ಯಕ್ತಿಯನ್ನ ಗುರುತಿಸಿ ಸ್ಥಾನಮಾನ ನೀಡುತ್ತದೆ. ಬಿಜೆಪಿ ಕೇವಲ ಒಂದು ಕುಟುಂಬಕ್ಕೆ ಸೀಮಿತವಾಗಿಲ್ಲ ಎಂದು ಹೇಳಿದರು.

ಪಕ್ಷ ಯಾರ ಪರವೂ ಇಲ್ಲ ವಿರೋಧವೂ ಇಲ್ಲ. ಪಕ್ಷ ನಿಷ್ಠರಿಗೆ ಒಳ್ಳೆ ಸ್ಥಾನಮಾನ ಸಿಗುತ್ತದೆ. ರಾಜ್ಯ ಚುನಾವಣೆಯಲ್ಲಿ ಸುಳ್ಳು‌ ಭರವಸೆಗಳನ್ನು‌ ನೀಡಿ‌ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಲು ಹಗಲಿರುಳು ಕೆಲಸ ಮಾಡುತ್ತೇವೆ. ಎಲ್ಲರೂ ಸೇರಿ ಒಗ್ಗಾಟ್ಟಾಗಿ ಕೆಲಸ ಮಾಡಿ ಪಕ್ಷವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡೋಣ ಎಂದು ಕಾರ್ಯಕರ್ತರಿಗೆ ತಿಳಿಸಿದರು.

ಈ ವೇಳೆ ಬೆಂ.ಗ್ರಾ ಜಿಲ್ಲಾ ಚುನಾವಣಾ ಅಧಿಕಾರಿ ಅಶ್ವತ್ಥ್ ನಾರಾಯಣ್, ಮಾಜಿ ಜಿಲ್ಲಾಧ್ಯಕ್ಷ ನಾರಾಯಣ ಗೌಡ, ರಾಜ್ಯ ವೈದ್ಯಕೀಯ ಪ್ರಕೋಷ್ಟ ಸಂಚಾಲಕ ಡಾ.ನಾರಾಯಣ್  ಪರಿಶಿಷ್ಟ ಪ್ರಕೋಷ್ಠ ಸಂಚಾಲಕ ಆರ್.ಗೋವಿಂದ್ ರಾಜು, ಮಾಜಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ವತ್ಸಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೊಸ ವರ್ಷಾಚರಣೆಗೆ ಕ್ಷಣಗಣನೆ- ನ್ಯೂ ಇಯರ್ ಸೆಲೆಬ್ರೇಷನ್ ಗೆ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ನಿರ್ಬಂಧ

ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ,…

2 hours ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಕ್‌ ಟನ್ ಮೆಕ್ಕೆಜೋಳ ಖರೀದಿ- ಇನ್ನೂ 76,430 ಮೆಟ್ರಿಕ್‌ ಟನ್‌ ಖರೀದಿಸಲು ಬಾಕಿಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಸ್ಲೋಚ್ ಕ್ಯಾಪ್ ಗೆ ವಿದಾಯ: ನೀಲಿ ಬಣ್ಣದ ಪೀಕ್ ಕ್ಯಾಪ್ ಧರಿಸಿ ಮಿಂಚಿದ ಬೆಂ ಗ್ರಾ ಜಿಲ್ಲಾ ಪೊಲೀಸ್ ಸಿಬ್ಬಂದಿ

1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…

16 hours ago

ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ಪೊಲೀಸ್ ಇಲಾಖೆ ಕೈಗೊಳ್ಳಬೇಕು- ಸಿಎಂ ಸಿದ್ದರಾಮಯ್ಯ

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…

17 hours ago

ಜ.1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲೈಟ್ ಕಡ್ಡಾಯ – ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ- ಡಿವೈಎಸ್ಪಿ ಪಾಂಡುರಂಗ

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…

19 hours ago

ಹಿಟ್ & ರನ್: ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು: ಸಿಮೆಂಟ್ ಬಲ್ಕರ್ ಪರಾರಿ

ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…

23 hours ago