ಭಾರತೀಯ ಜನತಾ ಪಾರ್ಟಿ, ಬೆಂ. ಗ್ರಾ ಜಿಲ್ಲಾ ಸಂಘಟನಾ ಚುನಾವಣೆ, ಜಿಲ್ಲಾ ಅಧ್ಯಕ್ಷರು ಹಾಗೂ ಮಂಡಲ ಅಧ್ಯಕ್ಷರ ಘೋಷಣೆ ಮಾಡಲಾಗಿದೆ.
ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಎಚ್.ರಾಮಕೃಷ್ಣಪ್ಪ ಮಾತನಾಡಿ, ಕಾರ್ಯಕರ್ತರ ಪಕ್ಷ ಭಾರತೀತ ಜನತಾ ಪಕ್ಷ. ಬಿಜೆಪಿ ಸದಸ್ಯರನ್ನ ಗುರುತಿಸುವ ಪಕ್ಷ. ಬಿಜೆಪಿ ಕಟ್ಟಕಡೆಯ ವ್ಯಕ್ತಿಯನ್ನ ಗುರುತಿಸಿ ಸ್ಥಾನಮಾನ ನೀಡುತ್ತದೆ. ಬಿಜೆಪಿ ಕೇವಲ ಒಂದು ಕುಟುಂಬಕ್ಕೆ ಸೀಮಿತವಾಗಿಲ್ಲ ಎಂದು ಹೇಳಿದರು.
ಪಕ್ಷ ಯಾರ ಪರವೂ ಇಲ್ಲ ವಿರೋಧವೂ ಇಲ್ಲ. ಪಕ್ಷ ನಿಷ್ಠರಿಗೆ ಒಳ್ಳೆ ಸ್ಥಾನಮಾನ ಸಿಗುತ್ತದೆ. ರಾಜ್ಯ ಚುನಾವಣೆಯಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಲು ಹಗಲಿರುಳು ಕೆಲಸ ಮಾಡುತ್ತೇವೆ. ಎಲ್ಲರೂ ಸೇರಿ ಒಗ್ಗಾಟ್ಟಾಗಿ ಕೆಲಸ ಮಾಡಿ ಪಕ್ಷವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡೋಣ ಎಂದು ಕಾರ್ಯಕರ್ತರಿಗೆ ತಿಳಿಸಿದರು.
ಈ ವೇಳೆ ಬೆಂ.ಗ್ರಾ ಜಿಲ್ಲಾ ಚುನಾವಣಾ ಅಧಿಕಾರಿ ಅಶ್ವತ್ಥ್ ನಾರಾಯಣ್, ಮಾಜಿ ಜಿಲ್ಲಾಧ್ಯಕ್ಷ ನಾರಾಯಣ ಗೌಡ, ರಾಜ್ಯ ವೈದ್ಯಕೀಯ ಪ್ರಕೋಷ್ಟ ಸಂಚಾಲಕ ಡಾ.ನಾರಾಯಣ್ ಪರಿಶಿಷ್ಟ ಪ್ರಕೋಷ್ಠ ಸಂಚಾಲಕ ಆರ್.ಗೋವಿಂದ್ ರಾಜು, ಮಾಜಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ವತ್ಸಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…