ಭಾರತೀಯ ಜನತಾ ಪಾರ್ಟಿ, ಬೆಂ. ಗ್ರಾ ಜಿಲ್ಲಾ ಸಂಘಟನಾ ಚುನಾವಣೆ, ಜಿಲ್ಲಾ ಅಧ್ಯಕ್ಷರು ಹಾಗೂ ಮಂಡಲ ಅಧ್ಯಕ್ಷರ ಘೋಷಣೆ ಮಾಡಲಾಗಿದೆ.
ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಎಚ್.ರಾಮಕೃಷ್ಣಪ್ಪ ಮಾತನಾಡಿ, ಕಾರ್ಯಕರ್ತರ ಪಕ್ಷ ಭಾರತೀತ ಜನತಾ ಪಕ್ಷ. ಬಿಜೆಪಿ ಸದಸ್ಯರನ್ನ ಗುರುತಿಸುವ ಪಕ್ಷ. ಬಿಜೆಪಿ ಕಟ್ಟಕಡೆಯ ವ್ಯಕ್ತಿಯನ್ನ ಗುರುತಿಸಿ ಸ್ಥಾನಮಾನ ನೀಡುತ್ತದೆ. ಬಿಜೆಪಿ ಕೇವಲ ಒಂದು ಕುಟುಂಬಕ್ಕೆ ಸೀಮಿತವಾಗಿಲ್ಲ ಎಂದು ಹೇಳಿದರು.
ಪಕ್ಷ ಯಾರ ಪರವೂ ಇಲ್ಲ ವಿರೋಧವೂ ಇಲ್ಲ. ಪಕ್ಷ ನಿಷ್ಠರಿಗೆ ಒಳ್ಳೆ ಸ್ಥಾನಮಾನ ಸಿಗುತ್ತದೆ. ರಾಜ್ಯ ಚುನಾವಣೆಯಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಲು ಹಗಲಿರುಳು ಕೆಲಸ ಮಾಡುತ್ತೇವೆ. ಎಲ್ಲರೂ ಸೇರಿ ಒಗ್ಗಾಟ್ಟಾಗಿ ಕೆಲಸ ಮಾಡಿ ಪಕ್ಷವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡೋಣ ಎಂದು ಕಾರ್ಯಕರ್ತರಿಗೆ ತಿಳಿಸಿದರು.
ಈ ವೇಳೆ ಬೆಂ.ಗ್ರಾ ಜಿಲ್ಲಾ ಚುನಾವಣಾ ಅಧಿಕಾರಿ ಅಶ್ವತ್ಥ್ ನಾರಾಯಣ್, ಮಾಜಿ ಜಿಲ್ಲಾಧ್ಯಕ್ಷ ನಾರಾಯಣ ಗೌಡ, ರಾಜ್ಯ ವೈದ್ಯಕೀಯ ಪ್ರಕೋಷ್ಟ ಸಂಚಾಲಕ ಡಾ.ನಾರಾಯಣ್ ಪರಿಶಿಷ್ಟ ಪ್ರಕೋಷ್ಠ ಸಂಚಾಲಕ ಆರ್.ಗೋವಿಂದ್ ರಾಜು, ಮಾಜಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ವತ್ಸಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…
ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…