ನಗರದಲ್ಲಿ ಭಾರತ್ ರೈಸ್ ಬ್ರ್ಯಾಂಡ್ ಹೆಸರಿನ ನಕಲಿ ಅಕ್ಕಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಲಾಗಿದೆ.
ಕೋಲಾರದಿಂದ ಟೆಂಪೊದಲ್ಲಿ ಬಂದು ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆ ಹೊರವಲಯದಲ್ಲಿ ಭಾರತ್ ರೈಸ್ ಎಂದು ಬೋರ್ಡ್ ಹಾಕಿಕೊಂಡು ಮೈಕ್ ನಲ್ಲಿ ಅನೌನ್ಸ್ ಮಾಡಿ ಮಾರಾಟ ಮಾಡಲಾಗುತ್ತಿತ್ತು ಎಂದು ಗ್ರಾಹಕ ಶ್ರೀನಿವಾಸ್ ಗೂರೂಜಿ ಆರೋಪಿಸಿದ್ದಾರೆ.
ಚೀಲಗಳ ಮೇಲೂ ಭಾರತ್ ರೈಸ್ ಎಂದು ನಕಲಿ ಸ್ಟಿಕ್ಕರ್ ಲೇಪಿಸಿ ಮಾರಾಟ ಮಾಡಲಾಗುತ್ತಿತ್ತು. ಈ ವೇಳೆ ನನಗೆ ಭಾರತ್ ರೈಸ್ ಬಗ್ಗೆ ಅನುಮಾನ ಬಂದು ಗೂಗಲ್ ನಲ್ಲಿ ಚೆಕ್ ಮಾಡಿದೆ. ಆಗ ನಕಲಿ ಅಕ್ಕಿ ಎಂದು ಖಚಿತಪಡಿಸಿಕೊಂಡು, ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸದ್ಯ ಅಕ್ಕಿ ಮಾರಾಟ ಮಾಡುತ್ತಿದ್ದ ವ್ಯಕ್ತಿ ಹಾಗೂ ಟೆಂಪೋವನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.
ಜನಸಾಮಾನ್ಯರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ದಿನಸಿ ವಿತರಣೆ ಉದ್ದೇಶದಿಂದ ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್ ರೈಸ್ ಅನ್ನು ಬಿಡುಗಡೆ ಮಾಡಿತ್ತು.
ಸದ್ಯ, ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಭಾರತ್ ರೈಸ್ ಮಾರಾಟ ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ.
ದೂರದ ಪ್ರದೇಶಗಳಿಗೆ ದಿನಸಿಗಳನ್ನು ತಲುಪಿಸುವ ಉದ್ದೇಶದಿಂದ ಆನ್ಲೈನ್ ಆರ್ಡರ್ ವ್ಯವಸ್ಥೆ ಕೂಡ ಮಾಡಿತ್ತು. ಆದರೀಗ 5 ಕೆಜಿ ಮತ್ತು 10 ಕೆಜಿ ಪ್ಯಾಕ್ಗಳಲ್ಲಿ ದೊರೆಯುತ್ತಿದ್ದ ಸಬ್ಸಿಡಿ ಅಕ್ಕಿ ಆನ್ಲೈನ್ನಲ್ಲಿಯೂ ಲಭ್ಯವಿಲ್ಲ. ಚರ್ಚ್
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…