ನಗರದಲ್ಲಿ ಭಾರತ್ ರೈಸ್ ಬ್ರ್ಯಾಂಡ್ ಹೆಸರಿನ ನಕಲಿ ಅಕ್ಕಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಲಾಗಿದೆ.
ಕೋಲಾರದಿಂದ ಟೆಂಪೊದಲ್ಲಿ ಬಂದು ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆ ಹೊರವಲಯದಲ್ಲಿ ಭಾರತ್ ರೈಸ್ ಎಂದು ಬೋರ್ಡ್ ಹಾಕಿಕೊಂಡು ಮೈಕ್ ನಲ್ಲಿ ಅನೌನ್ಸ್ ಮಾಡಿ ಮಾರಾಟ ಮಾಡಲಾಗುತ್ತಿತ್ತು ಎಂದು ಗ್ರಾಹಕ ಶ್ರೀನಿವಾಸ್ ಗೂರೂಜಿ ಆರೋಪಿಸಿದ್ದಾರೆ.
ಚೀಲಗಳ ಮೇಲೂ ಭಾರತ್ ರೈಸ್ ಎಂದು ನಕಲಿ ಸ್ಟಿಕ್ಕರ್ ಲೇಪಿಸಿ ಮಾರಾಟ ಮಾಡಲಾಗುತ್ತಿತ್ತು. ಈ ವೇಳೆ ನನಗೆ ಭಾರತ್ ರೈಸ್ ಬಗ್ಗೆ ಅನುಮಾನ ಬಂದು ಗೂಗಲ್ ನಲ್ಲಿ ಚೆಕ್ ಮಾಡಿದೆ. ಆಗ ನಕಲಿ ಅಕ್ಕಿ ಎಂದು ಖಚಿತಪಡಿಸಿಕೊಂಡು, ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸದ್ಯ ಅಕ್ಕಿ ಮಾರಾಟ ಮಾಡುತ್ತಿದ್ದ ವ್ಯಕ್ತಿ ಹಾಗೂ ಟೆಂಪೋವನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.
ಜನಸಾಮಾನ್ಯರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ದಿನಸಿ ವಿತರಣೆ ಉದ್ದೇಶದಿಂದ ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್ ರೈಸ್ ಅನ್ನು ಬಿಡುಗಡೆ ಮಾಡಿತ್ತು.
ಸದ್ಯ, ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಭಾರತ್ ರೈಸ್ ಮಾರಾಟ ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ.
ದೂರದ ಪ್ರದೇಶಗಳಿಗೆ ದಿನಸಿಗಳನ್ನು ತಲುಪಿಸುವ ಉದ್ದೇಶದಿಂದ ಆನ್ಲೈನ್ ಆರ್ಡರ್ ವ್ಯವಸ್ಥೆ ಕೂಡ ಮಾಡಿತ್ತು. ಆದರೀಗ 5 ಕೆಜಿ ಮತ್ತು 10 ಕೆಜಿ ಪ್ಯಾಕ್ಗಳಲ್ಲಿ ದೊರೆಯುತ್ತಿದ್ದ ಸಬ್ಸಿಡಿ ಅಕ್ಕಿ ಆನ್ಲೈನ್ನಲ್ಲಿಯೂ ಲಭ್ಯವಿಲ್ಲ. ಚರ್ಚ್
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…