ನಗರದಲ್ಲಿ ಭಾರತ್ ರೈಸ್ ಬ್ರ್ಯಾಂಡ್ ಹೆಸರಿನ ನಕಲಿ ಅಕ್ಕಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಲಾಗಿದೆ.
ಕೋಲಾರದಿಂದ ಟೆಂಪೊದಲ್ಲಿ ಬಂದು ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆ ಹೊರವಲಯದಲ್ಲಿ ಭಾರತ್ ರೈಸ್ ಎಂದು ಬೋರ್ಡ್ ಹಾಕಿಕೊಂಡು ಮೈಕ್ ನಲ್ಲಿ ಅನೌನ್ಸ್ ಮಾಡಿ ಮಾರಾಟ ಮಾಡಲಾಗುತ್ತಿತ್ತು ಎಂದು ಗ್ರಾಹಕ ಶ್ರೀನಿವಾಸ್ ಗೂರೂಜಿ ಆರೋಪಿಸಿದ್ದಾರೆ.
ಚೀಲಗಳ ಮೇಲೂ ಭಾರತ್ ರೈಸ್ ಎಂದು ನಕಲಿ ಸ್ಟಿಕ್ಕರ್ ಲೇಪಿಸಿ ಮಾರಾಟ ಮಾಡಲಾಗುತ್ತಿತ್ತು. ಈ ವೇಳೆ ನನಗೆ ಭಾರತ್ ರೈಸ್ ಬಗ್ಗೆ ಅನುಮಾನ ಬಂದು ಗೂಗಲ್ ನಲ್ಲಿ ಚೆಕ್ ಮಾಡಿದೆ. ಆಗ ನಕಲಿ ಅಕ್ಕಿ ಎಂದು ಖಚಿತಪಡಿಸಿಕೊಂಡು, ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸದ್ಯ ಅಕ್ಕಿ ಮಾರಾಟ ಮಾಡುತ್ತಿದ್ದ ವ್ಯಕ್ತಿ ಹಾಗೂ ಟೆಂಪೋವನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.
ಜನಸಾಮಾನ್ಯರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ದಿನಸಿ ವಿತರಣೆ ಉದ್ದೇಶದಿಂದ ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್ ರೈಸ್ ಅನ್ನು ಬಿಡುಗಡೆ ಮಾಡಿತ್ತು.
ಸದ್ಯ, ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಭಾರತ್ ರೈಸ್ ಮಾರಾಟ ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ.
ದೂರದ ಪ್ರದೇಶಗಳಿಗೆ ದಿನಸಿಗಳನ್ನು ತಲುಪಿಸುವ ಉದ್ದೇಶದಿಂದ ಆನ್ಲೈನ್ ಆರ್ಡರ್ ವ್ಯವಸ್ಥೆ ಕೂಡ ಮಾಡಿತ್ತು. ಆದರೀಗ 5 ಕೆಜಿ ಮತ್ತು 10 ಕೆಜಿ ಪ್ಯಾಕ್ಗಳಲ್ಲಿ ದೊರೆಯುತ್ತಿದ್ದ ಸಬ್ಸಿಡಿ ಅಕ್ಕಿ ಆನ್ಲೈನ್ನಲ್ಲಿಯೂ ಲಭ್ಯವಿಲ್ಲ. ಚರ್ಚ್
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…