ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಅವರು ಗುರುವಾರ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ತರಬೇತಿ ಕೇಂದ್ರವನ್ನು ಅಂತಾರಾಷ್ಟ್ರೀಯ ಮಟ್ಟದ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪುನರ್ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಖಾಸಗಿ ಅನುದಾನದ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.
ಕೇಂದ್ರದಲ್ಲಿ ಚಿಟ್ಟೆ ಪಾರ್ಕ್, ನವಿಲು ಪಾರ್ಕ್ ಹಾಗೂ ಅಡ್ವೆಂಚರ್ ಪಾರ್ಕ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ತರಬೇತಿಗೆ ಆಗಮಿಸುವ ವಿದ್ಯಾರ್ಥಿಗಳು ಪ್ರಕೃತಿ ಮತ್ತು ಪರಿಸರದ ಬಗ್ಗೆ ಅರಿವು ಪಡೆದು, ಜೀವನೋಪಯೋಗಿ ಅನುಭವಗಳೊಂದಿಗೆ ಹಿಂತಿರುಗುವಂತ ವಾತಾವರಣ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಇದೇ ವೇಳೆ ಆಧುನಿಕ ಗ್ರಂಥಾಲಯದಲ್ಲಿ ಸುಮಾರು 7 ಸಾವಿರ ಪುಸ್ತಕಗಳು ಹಾಗೂ 10 ಕಂಪ್ಯೂಟರ್ಗಳನ್ನು ಅಳವಡಿಸಲಾಗುವುದು. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು. ಕರಾವಳಿ ಪ್ರದೇಶದ ಸಾಹಸ ಚಟುವಟಿಕೆಗಳ ಮಾದರಿಯ ತರಬೇತಿಯನ್ನೂ ಇಲ್ಲಿ ಪರಿಚಯಿಸುವ ಉದ್ದೇಶವಿದೆ ಎಂದು ತಿಳಿಸಿದರು.
ಸ್ಕೌಟ್ಸ್, ಗೈಡ್ಸ್ ರಾಜ್ಯ ಕಾರ್ಯದರ್ಶಿ ಗಂಗಪ್ಪ ಗೌಡ ಮಾತನಾಡಿ, ಸುಮಾರು 2 ಕೋಟಿ ವೆಚ್ಚದಲ್ಲಿ ಆರಂಭಿಕ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಕಟ್ಟಡಗಳ ದುರಸ್ತಿ ಸೇರಿದಂತೆ 20 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಈ ಕಾರ್ಯಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ಈ ವೇಳೆ ಪದಾಧಿಕಾರಿಗಳಾದ ಎಂ. ಎಸ್. ಸತೀಶ್, ಬಿ.ಕೆ ಬಸವರಾಜ್, ತಿರುಮಲ ರಾವ್, ಸೇರಿದಂತೆ ರಾಜ್ಯ ಸಂಸ್ಥೆಯ ಪದಾಧಿಕಾರಿಗಳು, ವಿವಿಧ ಜಿಲ್ಲೆಗಳ ಪದಾಧಿಕಾರಿಗಳು, ದಳ ನಾಯಕರು ಹಾಗೂ ಸ್ಕೌಟ್ಸ್ -ಗೈಡ್ಸ್, ಕಬ್ಸ್, ಬುಲ್ – ಬುಲ್ಸ್, ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…