ಭಾರತ ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣವಚನ ಸ್ವೀಕಾರ

ನವದೆಹಲಿ: ಭಾರತ ದೇಶದ 15ನೇ ಉಪರಾಷ್ಟ್ರಪತಿಯಾಗಿ ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಧಾಕೃಷ್ಣನ್‌ಗೆ ಪ್ರಮಾಣವಚನ ಬೋಧಿಸಿದರು.

ಜಗದೀಪ್‌ ಧನಕರ್‌ ಅವರ ದಿಢೀರ್‌ ರಾಜೀನಾಮೆಯಿಂದ ತೆರವಾಗಿದ್ದ ಹುದ್ದೆಗೆ ಸೆ.9 (ಮಂಗಳವಾರ) ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಧಾಕೃಷ್ಣನ್‌, ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ ಅವರನ್ನು ಮಣಿಸಿದ್ದರು.

ರಾಧಾಕೃಷ್ಣನ್‌ ಪರ ಒಟ್ಟು 452 ಮತಗಳು ಚಲಾವಣೆಯಾಗಿದ್ದವು. ಬಿ.ಸುದರ್ಶನ್ ರೆಡ್ಡಿ 300 ಮತಗಳನ್ನು ಗಳಿಸಿದ್ದರು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಜಗದೀಪ್ ಧಂಖರ್ ಮತ್ತು ಅಮಿತ್ ಶಾ, ರಾಜನಾಥ್ ಸಿಂಗ್, ಜೆ.ಪಿ. ನಡ್ಡಾ, ಪಿಯೂಷ್ ಗೋಯಲ್ ಮತ್ತು ನಿತಿನ್ ಗಡ್ಕರಿ ಸೇರಿದಂತೆ ಕೇಂದ್ರ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

9 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

9 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

14 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago