ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ವರ್ಷದ ಆರಂಭದಲ್ಲಿ ತವರಿನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟಿ-ಟ್ವೆಂಟಿ ಸರಣಿಯನ್ನು ಗೆದ್ದು, ಮೂರು ಏಕದಿನ ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ್ದ ಭಾರತ ತಂಡ ಬೌಲಿಂಗ್ ಹಾಗೂ ಬ್ಯಾಟಿಂಗ್ ವಿಭಾಗ ಉತ್ತಮ ಪ್ರದರ್ಶನ ನೀಡುತ್ತಿದ್ದು ಸರಣಿಯಲ್ಲಿ ಶುಭಾರಂಭ ಮಾಡುವ ನಿರೀಕ್ಷೆ ಇದೆ.
ಹಿರಿಯ ಆಟಗಾರ ಕೆ. ಎಲ್. ರಾಹುಲ್ ಹಾಗೂ ಆಲ್ ರೌಂಡರ್ ಅಕ್ಷರ್ ಪಟೇಲ್ ವೈಯಕ್ತಿಕ ಕಾರಣಗಳಿಂದ ಈ ಸರಣಿಗೆ ಲಭ್ಯರಾಗಿಲ್ಲ, ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಬೆನ್ನು ನೋವಿನಿಂದ ಬಳಲುತ್ತಿದ್ದು ಸರಣಿಯಿಂದ ಹಿಂದೆ ಸರಿದಿದ್ದು ವಿಕೆಟ್ ಕೀಪರ್ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಅಂತಿಮ ಹನ್ನೊಂದರಲ್ಲಿ ಅವಕಾಶ ಪಡೆದಿದ್ದಾರೆ.
ಇತ್ತೀಚೆಗಷ್ಟೇ ಪಾಕಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಸರಣಿ ಜಯಿಸಿರುವ ಪ್ರವಾಸಿ ನ್ಯೂಜಿಲೆಂಡ್ ತಂಡ ಮತ್ತೊಮ್ಮೆ ಮಿಂಚುವ ವಿಶ್ವಾಸದಲ್ಲಿದೆ, ಸ್ಟಾರ್ ಆಟಗಾರರಾದ ಕೇನ್ ವಿಲಿಯಮ್ ಸನ್ ಹಾಗೂ ಅನುಭವಿ ಬೌಲರ್ ಟೀಮ್ ಸೌಥಿ ಅಲಭ್ಯರಾಗಿದ್ದು ಪ್ರವಾಸಿ ತಂಡ ಹೊಸ ಸಂಯೋಜನೆಯೊಂದಿಗೆ ಕಣಕ್ಕೆ ಇಳಿಯಲಿದೆ.
ನ್ಯೂಜಿಲೆಂಡ್ (ಅಂತಿಮXI): ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (w/c), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ವೆಲ್, ಹೆನ್ರಿ ಶಿಪ್ಲಿ, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್
ಭಾರತ (ಅಂತಿಮ XI): ರೋಹಿತ್ ಶರ್ಮಾ(c), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್(w), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…