ಭಾರತ – ಪಾಕ್ ಹೈಹೊಲ್ಟೇಜ್ ಪಂದ್ಯ, ವರುಣನ ಆರ್ಭಟಕ್ಕೆ ರದ್ದು

ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಅಭಿಮಾನಿಗಳ ಕುತೂಹಲ ಕೆರಳಿಸಿದ್ದ ಭಾರತ -ಪಾಕ್ ಹೈಹೊಲ್ಟೇಜ್ ಪಂದ್ಯ ಮಳೆಯಿಂದ ರದ್ದಾಗಿದ್ದು ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡಕ್ಕೆ ಆರಂಭದಿಂದಲೂ ಮಳೆಯೂ ಕಾಟ ನೀಡಿತು. ಇದರ ಜೊತೆಗೆ ತಂಡಕ್ಕೆ ಆರಂಭಿಕ ಆಘಾತ ಎದುರಿಸಿತು.

ನಾಯಕ ರೋಹಿತ್ ಶರ್ಮಾ(11), ಆರಂಭಿಕ ಆಟಗಾರ ಶುಭಮನ್ ಗಿಲ್(10), ಹಿರಿಯ ಆಟಗಾರ ವಿರಾಟ್ ಕೊಹ್ಲಿ(4), ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್(14), ಗಳಿಸಿ ಪೆವಿಲಿಯನ್ ಕಡೆ ನಡೆದರು.

ನಂತರ ಬ್ಯಾಟಿಂಗ್ ಗೆ ಬಂದ ವಿಕೆಟ್ ಕೀಪರ್ ಇಶಾನ್ ಕಿಶನ್(82) ಮತ್ತು ಹಾರ್ದಿಕ್ ಪಾಂಡ್ಯ(87)ರವರ 138 ರನ್ ಗಳ ಜೊತೆಯಾಟ ನೆರವಿನಿಂದ ಉತ್ತಮ ಟಾರ್ಗೆಟ್ ನೀಡಲು ನೆರವಾಯಿತು.

ನಂತರ ಬ್ಯಾಟಿಂಗ್ ಗೆ ಬಂದ ಯಾವ ಬ್ಯಾಟ್ಸಮನ್ ಸಹ ಹೆಚ್ಚು ಹೊತ್ತು ಕ್ರಿಸ್ ನಲ್ಲಿ ಉಲಿಯಲಿಲ್ಲ. ಭಾರತ ತಂಡವು 266 ರನ್ ಗಳಿಗೆ ಆಲ್ ಔಟ್ ಆಯಿತು.

ಪಾಕಿಸ್ತಾನ ಪರ ವೇಗಿಗಳಾದ ಶಾಹೀನ್ ಅಫ್ರಿದಿ 4 ಹ್ಯಾರಿಸ್ ರೌಫ್ ಮತ್ತು ನಸೀಮ್ ಶಾ ತಲಾ 3 ವಿಕೆಟ್ ಪಡೆದು ಮಿಂಚಿದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

2 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

14 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

14 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

15 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

18 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago