ವಿದ್ಯಾರ್ಥಿಗಳು ಈಗಿನಿಂದಲೇ ತಮ್ಮ ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರ ಪ್ರೇಮ, ರಾಷ್ಟ್ರಭಕ್ತಿ, ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ತಾಲೂಕು ದಂಡಾಧಿಕಾರಿ ವಿದ್ಯಾ ವಿಭಾ ರಾಥೋಡ್ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾರತ ಸೇವದಳದ ತಾಲೂಕು ಸಮಿತಿಯಿಂದ ಭಾರತ ಸೇವಾ ಸೇವಾದಳದ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಭಾವೈಕ್ಯತೆ ಮಕ್ಕಳ ಮೇಳದಲ್ಲಿ ಮಾತನಾಡಿದ ಅವರು, ಪ್ರಸ್ತುತ ಸಂದರ್ಭದಲ್ಲಿ ವಿದ್ಯಾ.ರ್ಥಿಗಳಿಗೆ ಈಗಿನಿಂದಲೇ ರಾಷ್ಟ್ರಪ್ರೇಮ ರಾಷ್ಟ್ರಭಕ್ತಿ ಬೆಳೆಸುವ ಕೆಲಸ ಮುಖ್ಯವಾಗಿ ಆಗಬೇಕು. ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸುವಂತಹ ಕೆಲಸ ಆಗಬೇಕು. ಮಹಾತ್ಮ ಗಾಂಧೀಜಿ ಕಂಡಂತಹ ಕನಸು ನನಸಾಗಬೇಕು ಎಂದರು.
ಭಾರತ ಸೇವಾದಳದ ಜಿಲ್ಲಾ ಸಮಿತಿ ಅಧ್ಯಕ್ಷರಾದ ಲಕ್ಷ್ಮಿಪತಿ ಅವರು ಮಾತನಾಡಿ ತಾಲೂಕಿನಲ್ಲಿರುವ ಎಲ್ಲಾ ಶಾಲೆಗಳ ಶಾಖೆಗಳಿಗೆ ಸುಮಾರು 5000 ಸಮವಸ್ತ್ರಗಳನ್ನು ಉಚಿತವಾಗಿ ನೀಡಲಾಗುವುದು ಎಂದರು. ತಾಲೂಕಿನ ಶಾಖನಾಯಕರಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸುವಲ್ಲಿ ಶ್ರಮವಹಿಸುತ್ತಿರುವುದು ತುಂಬಾ ಸಂತೋಷ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷ ಆರ್.ವಿ ಮಹೇಶ್ ಕುಮಾರ್ ಮಾತನಾಡಿ, ಭಾರತ ಸೇವಾದಳ ಸ್ವಾತಂತ್ರ್ಯಕ್ಕಾಗಿ ಯುವಕರನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದು, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು ಸಾಮರಸ್ಯ ಮೂಡಿಸುವಲ್ಲಿ ಭಾರತ ಸೇವಾದಳ ಮಹತ್ವದ ಕೆಲಸ ಮಾಡುತ್ತಿದೆ ಎಂದರು.
ಟಿಎಪಿಎಂಸಿ ನಿರ್ದೇಶಕ ರಂಗಪ್ಪ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರವಿಸಿದ್ದಪ್ಪ, ಭೂ ಮಂಜೂರಾತಿ ಸಮಿತಿ ಸದಸ್ಯ ಶ್ರೀಧರ್, ಹೊಸಕೋಟೆ ತಾಲೂಕು ಕೃಷಿಕ ಸಮಾಜ ಅಧ್ಯಕ್ಷ ಹರೀಶ್, ದೊಡ್ಡಬಳ್ಳಾಪುರ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮುರುಳಿಧರ್, ನಗರಸಭೆ ಸದಸ್ಯ ಕಾಂತರಾಜ್, ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಮಾಜಿ ಸದಸ್ಯ ಸಿ. ರಾಮಕೃಷ್ಣ ಕಾರ್ಯಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ, ವಿ.ಸಿ ಜ್ಯೋತಿ ಕುಮಾರ್, ಹಾಗೂ ತಾಲೂಕ ಸಮಿತಿಯ ನಿರ್ದೇಶಕರು ಮುಂತಾದವರು ಭಾಗವಹಿಸಿದ್ದರು.
ಈ ಕಾರ್ಯಕ್ರಮಕ್ಕೆ ಶಾಸಕ ಧೀರಜ್ ಮುನಿರಾಜ್ ಹಸಿರು ಬಾವುಟ ತೋರಿಸಿ ಮೂಲಕ ಚಾಲನೆ ನೀಡಿದರು.
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…