ವಿದ್ಯಾರ್ಥಿಗಳು ಈಗಿನಿಂದಲೇ ತಮ್ಮ ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರ ಪ್ರೇಮ, ರಾಷ್ಟ್ರಭಕ್ತಿ, ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ತಾಲೂಕು ದಂಡಾಧಿಕಾರಿ ವಿದ್ಯಾ ವಿಭಾ ರಾಥೋಡ್ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾರತ ಸೇವದಳದ ತಾಲೂಕು ಸಮಿತಿಯಿಂದ ಭಾರತ ಸೇವಾ ಸೇವಾದಳದ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಭಾವೈಕ್ಯತೆ ಮಕ್ಕಳ ಮೇಳದಲ್ಲಿ ಮಾತನಾಡಿದ ಅವರು, ಪ್ರಸ್ತುತ ಸಂದರ್ಭದಲ್ಲಿ ವಿದ್ಯಾ.ರ್ಥಿಗಳಿಗೆ ಈಗಿನಿಂದಲೇ ರಾಷ್ಟ್ರಪ್ರೇಮ ರಾಷ್ಟ್ರಭಕ್ತಿ ಬೆಳೆಸುವ ಕೆಲಸ ಮುಖ್ಯವಾಗಿ ಆಗಬೇಕು. ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸುವಂತಹ ಕೆಲಸ ಆಗಬೇಕು. ಮಹಾತ್ಮ ಗಾಂಧೀಜಿ ಕಂಡಂತಹ ಕನಸು ನನಸಾಗಬೇಕು ಎಂದರು.
ಭಾರತ ಸೇವಾದಳದ ಜಿಲ್ಲಾ ಸಮಿತಿ ಅಧ್ಯಕ್ಷರಾದ ಲಕ್ಷ್ಮಿಪತಿ ಅವರು ಮಾತನಾಡಿ ತಾಲೂಕಿನಲ್ಲಿರುವ ಎಲ್ಲಾ ಶಾಲೆಗಳ ಶಾಖೆಗಳಿಗೆ ಸುಮಾರು 5000 ಸಮವಸ್ತ್ರಗಳನ್ನು ಉಚಿತವಾಗಿ ನೀಡಲಾಗುವುದು ಎಂದರು. ತಾಲೂಕಿನ ಶಾಖನಾಯಕರಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸುವಲ್ಲಿ ಶ್ರಮವಹಿಸುತ್ತಿರುವುದು ತುಂಬಾ ಸಂತೋಷ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷ ಆರ್.ವಿ ಮಹೇಶ್ ಕುಮಾರ್ ಮಾತನಾಡಿ, ಭಾರತ ಸೇವಾದಳ ಸ್ವಾತಂತ್ರ್ಯಕ್ಕಾಗಿ ಯುವಕರನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದು, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು ಸಾಮರಸ್ಯ ಮೂಡಿಸುವಲ್ಲಿ ಭಾರತ ಸೇವಾದಳ ಮಹತ್ವದ ಕೆಲಸ ಮಾಡುತ್ತಿದೆ ಎಂದರು.
ಟಿಎಪಿಎಂಸಿ ನಿರ್ದೇಶಕ ರಂಗಪ್ಪ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರವಿಸಿದ್ದಪ್ಪ, ಭೂ ಮಂಜೂರಾತಿ ಸಮಿತಿ ಸದಸ್ಯ ಶ್ರೀಧರ್, ಹೊಸಕೋಟೆ ತಾಲೂಕು ಕೃಷಿಕ ಸಮಾಜ ಅಧ್ಯಕ್ಷ ಹರೀಶ್, ದೊಡ್ಡಬಳ್ಳಾಪುರ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮುರುಳಿಧರ್, ನಗರಸಭೆ ಸದಸ್ಯ ಕಾಂತರಾಜ್, ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಮಾಜಿ ಸದಸ್ಯ ಸಿ. ರಾಮಕೃಷ್ಣ ಕಾರ್ಯಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ, ವಿ.ಸಿ ಜ್ಯೋತಿ ಕುಮಾರ್, ಹಾಗೂ ತಾಲೂಕ ಸಮಿತಿಯ ನಿರ್ದೇಶಕರು ಮುಂತಾದವರು ಭಾಗವಹಿಸಿದ್ದರು.
ಈ ಕಾರ್ಯಕ್ರಮಕ್ಕೆ ಶಾಸಕ ಧೀರಜ್ ಮುನಿರಾಜ್ ಹಸಿರು ಬಾವುಟ ತೋರಿಸಿ ಮೂಲಕ ಚಾಲನೆ ನೀಡಿದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…