ವಿದ್ಯಾರ್ಥಿಗಳು ಈಗಿನಿಂದಲೇ ತಮ್ಮ ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರ ಪ್ರೇಮ, ರಾಷ್ಟ್ರಭಕ್ತಿ, ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ತಾಲೂಕು ದಂಡಾಧಿಕಾರಿ ವಿದ್ಯಾ ವಿಭಾ ರಾಥೋಡ್ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾರತ ಸೇವದಳದ ತಾಲೂಕು ಸಮಿತಿಯಿಂದ ಭಾರತ ಸೇವಾ ಸೇವಾದಳದ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಭಾವೈಕ್ಯತೆ ಮಕ್ಕಳ ಮೇಳದಲ್ಲಿ ಮಾತನಾಡಿದ ಅವರು, ಪ್ರಸ್ತುತ ಸಂದರ್ಭದಲ್ಲಿ ವಿದ್ಯಾ.ರ್ಥಿಗಳಿಗೆ ಈಗಿನಿಂದಲೇ ರಾಷ್ಟ್ರಪ್ರೇಮ ರಾಷ್ಟ್ರಭಕ್ತಿ ಬೆಳೆಸುವ ಕೆಲಸ ಮುಖ್ಯವಾಗಿ ಆಗಬೇಕು. ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸುವಂತಹ ಕೆಲಸ ಆಗಬೇಕು. ಮಹಾತ್ಮ ಗಾಂಧೀಜಿ ಕಂಡಂತಹ ಕನಸು ನನಸಾಗಬೇಕು ಎಂದರು.
ಭಾರತ ಸೇವಾದಳದ ಜಿಲ್ಲಾ ಸಮಿತಿ ಅಧ್ಯಕ್ಷರಾದ ಲಕ್ಷ್ಮಿಪತಿ ಅವರು ಮಾತನಾಡಿ ತಾಲೂಕಿನಲ್ಲಿರುವ ಎಲ್ಲಾ ಶಾಲೆಗಳ ಶಾಖೆಗಳಿಗೆ ಸುಮಾರು 5000 ಸಮವಸ್ತ್ರಗಳನ್ನು ಉಚಿತವಾಗಿ ನೀಡಲಾಗುವುದು ಎಂದರು. ತಾಲೂಕಿನ ಶಾಖನಾಯಕರಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸುವಲ್ಲಿ ಶ್ರಮವಹಿಸುತ್ತಿರುವುದು ತುಂಬಾ ಸಂತೋಷ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷ ಆರ್.ವಿ ಮಹೇಶ್ ಕುಮಾರ್ ಮಾತನಾಡಿ, ಭಾರತ ಸೇವಾದಳ ಸ್ವಾತಂತ್ರ್ಯಕ್ಕಾಗಿ ಯುವಕರನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದು, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು ಸಾಮರಸ್ಯ ಮೂಡಿಸುವಲ್ಲಿ ಭಾರತ ಸೇವಾದಳ ಮಹತ್ವದ ಕೆಲಸ ಮಾಡುತ್ತಿದೆ ಎಂದರು.
ಟಿಎಪಿಎಂಸಿ ನಿರ್ದೇಶಕ ರಂಗಪ್ಪ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರವಿಸಿದ್ದಪ್ಪ, ಭೂ ಮಂಜೂರಾತಿ ಸಮಿತಿ ಸದಸ್ಯ ಶ್ರೀಧರ್, ಹೊಸಕೋಟೆ ತಾಲೂಕು ಕೃಷಿಕ ಸಮಾಜ ಅಧ್ಯಕ್ಷ ಹರೀಶ್, ದೊಡ್ಡಬಳ್ಳಾಪುರ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮುರುಳಿಧರ್, ನಗರಸಭೆ ಸದಸ್ಯ ಕಾಂತರಾಜ್, ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಮಾಜಿ ಸದಸ್ಯ ಸಿ. ರಾಮಕೃಷ್ಣ ಕಾರ್ಯಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ, ವಿ.ಸಿ ಜ್ಯೋತಿ ಕುಮಾರ್, ಹಾಗೂ ತಾಲೂಕ ಸಮಿತಿಯ ನಿರ್ದೇಶಕರು ಮುಂತಾದವರು ಭಾಗವಹಿಸಿದ್ದರು.
ಈ ಕಾರ್ಯಕ್ರಮಕ್ಕೆ ಶಾಸಕ ಧೀರಜ್ ಮುನಿರಾಜ್ ಹಸಿರು ಬಾವುಟ ತೋರಿಸಿ ಮೂಲಕ ಚಾಲನೆ ನೀಡಿದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…