ವಿದ್ಯಾರ್ಥಿಗಳು ಈಗಿನಿಂದಲೇ ತಮ್ಮ ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರ ಪ್ರೇಮ, ರಾಷ್ಟ್ರಭಕ್ತಿ, ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ತಾಲೂಕು ದಂಡಾಧಿಕಾರಿ ವಿದ್ಯಾ ವಿಭಾ ರಾಥೋಡ್ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾರತ ಸೇವದಳದ ತಾಲೂಕು ಸಮಿತಿಯಿಂದ ಭಾರತ ಸೇವಾ ಸೇವಾದಳದ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಭಾವೈಕ್ಯತೆ ಮಕ್ಕಳ ಮೇಳದಲ್ಲಿ ಮಾತನಾಡಿದ ಅವರು, ಪ್ರಸ್ತುತ ಸಂದರ್ಭದಲ್ಲಿ ವಿದ್ಯಾ.ರ್ಥಿಗಳಿಗೆ ಈಗಿನಿಂದಲೇ ರಾಷ್ಟ್ರಪ್ರೇಮ ರಾಷ್ಟ್ರಭಕ್ತಿ ಬೆಳೆಸುವ ಕೆಲಸ ಮುಖ್ಯವಾಗಿ ಆಗಬೇಕು. ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸುವಂತಹ ಕೆಲಸ ಆಗಬೇಕು. ಮಹಾತ್ಮ ಗಾಂಧೀಜಿ ಕಂಡಂತಹ ಕನಸು ನನಸಾಗಬೇಕು ಎಂದರು.
ಭಾರತ ಸೇವಾದಳದ ಜಿಲ್ಲಾ ಸಮಿತಿ ಅಧ್ಯಕ್ಷರಾದ ಲಕ್ಷ್ಮಿಪತಿ ಅವರು ಮಾತನಾಡಿ ತಾಲೂಕಿನಲ್ಲಿರುವ ಎಲ್ಲಾ ಶಾಲೆಗಳ ಶಾಖೆಗಳಿಗೆ ಸುಮಾರು 5000 ಸಮವಸ್ತ್ರಗಳನ್ನು ಉಚಿತವಾಗಿ ನೀಡಲಾಗುವುದು ಎಂದರು. ತಾಲೂಕಿನ ಶಾಖನಾಯಕರಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸುವಲ್ಲಿ ಶ್ರಮವಹಿಸುತ್ತಿರುವುದು ತುಂಬಾ ಸಂತೋಷ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷ ಆರ್.ವಿ ಮಹೇಶ್ ಕುಮಾರ್ ಮಾತನಾಡಿ, ಭಾರತ ಸೇವಾದಳ ಸ್ವಾತಂತ್ರ್ಯಕ್ಕಾಗಿ ಯುವಕರನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದು, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು ಸಾಮರಸ್ಯ ಮೂಡಿಸುವಲ್ಲಿ ಭಾರತ ಸೇವಾದಳ ಮಹತ್ವದ ಕೆಲಸ ಮಾಡುತ್ತಿದೆ ಎಂದರು.
ಟಿಎಪಿಎಂಸಿ ನಿರ್ದೇಶಕ ರಂಗಪ್ಪ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರವಿಸಿದ್ದಪ್ಪ, ಭೂ ಮಂಜೂರಾತಿ ಸಮಿತಿ ಸದಸ್ಯ ಶ್ರೀಧರ್, ಹೊಸಕೋಟೆ ತಾಲೂಕು ಕೃಷಿಕ ಸಮಾಜ ಅಧ್ಯಕ್ಷ ಹರೀಶ್, ದೊಡ್ಡಬಳ್ಳಾಪುರ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮುರುಳಿಧರ್, ನಗರಸಭೆ ಸದಸ್ಯ ಕಾಂತರಾಜ್, ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಮಾಜಿ ಸದಸ್ಯ ಸಿ. ರಾಮಕೃಷ್ಣ ಕಾರ್ಯಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ, ವಿ.ಸಿ ಜ್ಯೋತಿ ಕುಮಾರ್, ಹಾಗೂ ತಾಲೂಕ ಸಮಿತಿಯ ನಿರ್ದೇಶಕರು ಮುಂತಾದವರು ಭಾಗವಹಿಸಿದ್ದರು.
ಈ ಕಾರ್ಯಕ್ರಮಕ್ಕೆ ಶಾಸಕ ಧೀರಜ್ ಮುನಿರಾಜ್ ಹಸಿರು ಬಾವುಟ ತೋರಿಸಿ ಮೂಲಕ ಚಾಲನೆ ನೀಡಿದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…