ಭಾರತ ಮಾಧ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ನಿಧನ

ಭಾರತ ಮಾಧ್ಯಮ ಲೋಕದ ದಿಗ್ಗಜ ಎಂದೇ ಖ್ಯಾತಿ ಪಡೆದ ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕ ರಾಮೋಜಿ ರಾವ್ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ ನ ಸ್ಟಾರ್ ಆಸ್ಪತ್ರೆಯಲ್ಲಿ ಇಂದು ಮುಸುಕಿನ ಜಾವ 3:45ಕ್ಕೆ ಅಗಲಿದ್ದಾರೆ ಎಂದು ತಿಳಿದು ಬಂದಿದೆ.

ಜೂನ್ 5ರಂದು ಹೃದಯ ಸಂಬಂಧಿ ಸಮಸ್ಯೆಯಿಂದ ಉಸಿರಾಟಕ್ಕೆ ತೀವ್ರ ತೊಂದರೆಯಾಗಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯ ನಂತರ ಹೃದಯ ಸ್ಟೆಂಟ್ ಹಾಕಲಾಯಿತು. ಬಳಿಕ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದಾರೂ ಚಿಕಿತ್ಸೆ ಫಲಿಸದೇ ನಿಧನಾರಾಗಿದ್ದಾರೆ ಎನ್ನಲಾಗಿದೆ.

ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇರುವ ಅವರ ಮನೆಗೆ ರವಾನಿಸಿ, ನಿವಾಸದಲ್ಲೇ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿ ಗ್ರಾಮದಲ್ಲಿ 1936ರ ನವೆಂಬರ್ 16 ರಂದು ಕೃಷಿಕ ಕುಟುಂಬದಲ್ಲಿ ಜನಿಸಿದರು. ಭವ್ಯವಾದ ರಾಮೋಜಿ ಫಿಲ್ಮ್‌ ಸಿಟಿಯ ನಿರ್ಮಾತೃಗಳು. ವಿಶ್ವದ ಅತಿ ದೊಡ್ಡ ಥೀಮ್ ಪಾರ್ಕ್‌ ಹಾಗೂ ಸಿನಿಮಾ ಸ್ಟುಡಿಯೋ ಅನ್ನೋ ಹೆಗ್ಗಳಿಕೆ ರಾಮೋಜಿ ಫಿಲ್ಮ್‌ ಸಿಟಿಗೆ ಇದೆ.

ಮಾರ್ಗದರ್ಶಿ ಚಿಟ್ ಫಂಡ್, ಈನಾಡು ಪತ್ರಿಕೆ, ಈಟಿವಿ ನೆಟ್‌ವರ್ಕ್, ರಮಾದೇವಿ ಪಬ್ಲಿಕ್ ಸ್ಕೂಲ್, ಪ್ರಿಯಾ ಫುಡ್ಸ್, ಕಲಾಂಜಲಿ, ಉಷಾಕಿರಣ್ ಮೂವೀಸ್, ಮಯೂರಿ ಫಿಲ್ಮ್ ಡಿಸ್ಟ್ರಿಬ್ಯೂಟರ್ಸ್ ಮತ್ತು ಡಾಲ್ಫಿನ್ ಗ್ರೂಪ್ ಆಫ್ ಹೋಟೆಲ್‌ಗಳು ರಾಮೋಜಿ ರಾವ್ ಒಡೆತನದ ಕಂಪನಿಗಳಾಗಿವೆ. ರಾಜಕೀಯ ಕ್ಷೇತ್ರದಲ್ಲೂ ಛಾಪು ಮೂಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಂತಾಪ

ಶ್ರೀ ರಾಮೋಜಿ ರಾವ್ ಅವರ ಅಗಲಿಕೆ ಅತ್ಯಂತ ದುಃಖ ತಂದಿದೆ.  ಅವರು ಭಾರತೀಯ ಮಾಧ್ಯಮದಲ್ಲಿ ಕ್ರಾಂತಿಯನ್ನು ಮಾಡಿದ ದಾರ್ಶನಿಕರಾಗಿದ್ದರು. ಅವರ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ. ಅವರು ಮಾಧ್ಯಮ ಮತ್ತು ಮನರಂಜನಾ ಜಗತ್ತಿನಲ್ಲಿ ನಾವೀನ್ಯತೆ ಮತ್ತು ಶ್ರೇಷ್ಠತೆಗಾಗಿ ಹೊಸ ಮಾನದಂಡಗಳನ್ನು ಸ್ಥಾಪಿಸಿದರು ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

 ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು  ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರ ಬುದ್ಧಿವಂತಿಕೆಯಿಂದ ಪ್ರಯೋಜನ ಪಡೆಯಲು ಹಲವಾರು ಅವಕಾಶಗಳನ್ನು ಪಡೆದಿರುವುದು ನನ್ನ ಅದೃಷ್ಟ ಎಂದು ನೆನೆದು ಭಾವುಕರಾಗಿದ್ದಾರೆ.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

10 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

10 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

15 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

17 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

20 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

21 hours ago