ಭಾರತ ಮಾಧ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ನಿಧನ

ಭಾರತ ಮಾಧ್ಯಮ ಲೋಕದ ದಿಗ್ಗಜ ಎಂದೇ ಖ್ಯಾತಿ ಪಡೆದ ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕ ರಾಮೋಜಿ ರಾವ್ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ ನ ಸ್ಟಾರ್ ಆಸ್ಪತ್ರೆಯಲ್ಲಿ ಇಂದು ಮುಸುಕಿನ ಜಾವ 3:45ಕ್ಕೆ ಅಗಲಿದ್ದಾರೆ ಎಂದು ತಿಳಿದು ಬಂದಿದೆ.

ಜೂನ್ 5ರಂದು ಹೃದಯ ಸಂಬಂಧಿ ಸಮಸ್ಯೆಯಿಂದ ಉಸಿರಾಟಕ್ಕೆ ತೀವ್ರ ತೊಂದರೆಯಾಗಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯ ನಂತರ ಹೃದಯ ಸ್ಟೆಂಟ್ ಹಾಕಲಾಯಿತು. ಬಳಿಕ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದಾರೂ ಚಿಕಿತ್ಸೆ ಫಲಿಸದೇ ನಿಧನಾರಾಗಿದ್ದಾರೆ ಎನ್ನಲಾಗಿದೆ.

ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇರುವ ಅವರ ಮನೆಗೆ ರವಾನಿಸಿ, ನಿವಾಸದಲ್ಲೇ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿ ಗ್ರಾಮದಲ್ಲಿ 1936ರ ನವೆಂಬರ್ 16 ರಂದು ಕೃಷಿಕ ಕುಟುಂಬದಲ್ಲಿ ಜನಿಸಿದರು. ಭವ್ಯವಾದ ರಾಮೋಜಿ ಫಿಲ್ಮ್‌ ಸಿಟಿಯ ನಿರ್ಮಾತೃಗಳು. ವಿಶ್ವದ ಅತಿ ದೊಡ್ಡ ಥೀಮ್ ಪಾರ್ಕ್‌ ಹಾಗೂ ಸಿನಿಮಾ ಸ್ಟುಡಿಯೋ ಅನ್ನೋ ಹೆಗ್ಗಳಿಕೆ ರಾಮೋಜಿ ಫಿಲ್ಮ್‌ ಸಿಟಿಗೆ ಇದೆ.

ಮಾರ್ಗದರ್ಶಿ ಚಿಟ್ ಫಂಡ್, ಈನಾಡು ಪತ್ರಿಕೆ, ಈಟಿವಿ ನೆಟ್‌ವರ್ಕ್, ರಮಾದೇವಿ ಪಬ್ಲಿಕ್ ಸ್ಕೂಲ್, ಪ್ರಿಯಾ ಫುಡ್ಸ್, ಕಲಾಂಜಲಿ, ಉಷಾಕಿರಣ್ ಮೂವೀಸ್, ಮಯೂರಿ ಫಿಲ್ಮ್ ಡಿಸ್ಟ್ರಿಬ್ಯೂಟರ್ಸ್ ಮತ್ತು ಡಾಲ್ಫಿನ್ ಗ್ರೂಪ್ ಆಫ್ ಹೋಟೆಲ್‌ಗಳು ರಾಮೋಜಿ ರಾವ್ ಒಡೆತನದ ಕಂಪನಿಗಳಾಗಿವೆ. ರಾಜಕೀಯ ಕ್ಷೇತ್ರದಲ್ಲೂ ಛಾಪು ಮೂಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಂತಾಪ

ಶ್ರೀ ರಾಮೋಜಿ ರಾವ್ ಅವರ ಅಗಲಿಕೆ ಅತ್ಯಂತ ದುಃಖ ತಂದಿದೆ.  ಅವರು ಭಾರತೀಯ ಮಾಧ್ಯಮದಲ್ಲಿ ಕ್ರಾಂತಿಯನ್ನು ಮಾಡಿದ ದಾರ್ಶನಿಕರಾಗಿದ್ದರು. ಅವರ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ. ಅವರು ಮಾಧ್ಯಮ ಮತ್ತು ಮನರಂಜನಾ ಜಗತ್ತಿನಲ್ಲಿ ನಾವೀನ್ಯತೆ ಮತ್ತು ಶ್ರೇಷ್ಠತೆಗಾಗಿ ಹೊಸ ಮಾನದಂಡಗಳನ್ನು ಸ್ಥಾಪಿಸಿದರು ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

 ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು  ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರ ಬುದ್ಧಿವಂತಿಕೆಯಿಂದ ಪ್ರಯೋಜನ ಪಡೆಯಲು ಹಲವಾರು ಅವಕಾಶಗಳನ್ನು ಪಡೆದಿರುವುದು ನನ್ನ ಅದೃಷ್ಟ ಎಂದು ನೆನೆದು ಭಾವುಕರಾಗಿದ್ದಾರೆ.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

18 minutes ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

2 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

7 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

9 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

12 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago