ಭಾರತ ಮಾಧ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ನಿಧನ

ಭಾರತ ಮಾಧ್ಯಮ ಲೋಕದ ದಿಗ್ಗಜ ಎಂದೇ ಖ್ಯಾತಿ ಪಡೆದ ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕ ರಾಮೋಜಿ ರಾವ್ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ ನ ಸ್ಟಾರ್ ಆಸ್ಪತ್ರೆಯಲ್ಲಿ ಇಂದು ಮುಸುಕಿನ ಜಾವ 3:45ಕ್ಕೆ ಅಗಲಿದ್ದಾರೆ ಎಂದು ತಿಳಿದು ಬಂದಿದೆ.

ಜೂನ್ 5ರಂದು ಹೃದಯ ಸಂಬಂಧಿ ಸಮಸ್ಯೆಯಿಂದ ಉಸಿರಾಟಕ್ಕೆ ತೀವ್ರ ತೊಂದರೆಯಾಗಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯ ನಂತರ ಹೃದಯ ಸ್ಟೆಂಟ್ ಹಾಕಲಾಯಿತು. ಬಳಿಕ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದಾರೂ ಚಿಕಿತ್ಸೆ ಫಲಿಸದೇ ನಿಧನಾರಾಗಿದ್ದಾರೆ ಎನ್ನಲಾಗಿದೆ.

ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇರುವ ಅವರ ಮನೆಗೆ ರವಾನಿಸಿ, ನಿವಾಸದಲ್ಲೇ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿ ಗ್ರಾಮದಲ್ಲಿ 1936ರ ನವೆಂಬರ್ 16 ರಂದು ಕೃಷಿಕ ಕುಟುಂಬದಲ್ಲಿ ಜನಿಸಿದರು. ಭವ್ಯವಾದ ರಾಮೋಜಿ ಫಿಲ್ಮ್‌ ಸಿಟಿಯ ನಿರ್ಮಾತೃಗಳು. ವಿಶ್ವದ ಅತಿ ದೊಡ್ಡ ಥೀಮ್ ಪಾರ್ಕ್‌ ಹಾಗೂ ಸಿನಿಮಾ ಸ್ಟುಡಿಯೋ ಅನ್ನೋ ಹೆಗ್ಗಳಿಕೆ ರಾಮೋಜಿ ಫಿಲ್ಮ್‌ ಸಿಟಿಗೆ ಇದೆ.

ಮಾರ್ಗದರ್ಶಿ ಚಿಟ್ ಫಂಡ್, ಈನಾಡು ಪತ್ರಿಕೆ, ಈಟಿವಿ ನೆಟ್‌ವರ್ಕ್, ರಮಾದೇವಿ ಪಬ್ಲಿಕ್ ಸ್ಕೂಲ್, ಪ್ರಿಯಾ ಫುಡ್ಸ್, ಕಲಾಂಜಲಿ, ಉಷಾಕಿರಣ್ ಮೂವೀಸ್, ಮಯೂರಿ ಫಿಲ್ಮ್ ಡಿಸ್ಟ್ರಿಬ್ಯೂಟರ್ಸ್ ಮತ್ತು ಡಾಲ್ಫಿನ್ ಗ್ರೂಪ್ ಆಫ್ ಹೋಟೆಲ್‌ಗಳು ರಾಮೋಜಿ ರಾವ್ ಒಡೆತನದ ಕಂಪನಿಗಳಾಗಿವೆ. ರಾಜಕೀಯ ಕ್ಷೇತ್ರದಲ್ಲೂ ಛಾಪು ಮೂಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಂತಾಪ

ಶ್ರೀ ರಾಮೋಜಿ ರಾವ್ ಅವರ ಅಗಲಿಕೆ ಅತ್ಯಂತ ದುಃಖ ತಂದಿದೆ.  ಅವರು ಭಾರತೀಯ ಮಾಧ್ಯಮದಲ್ಲಿ ಕ್ರಾಂತಿಯನ್ನು ಮಾಡಿದ ದಾರ್ಶನಿಕರಾಗಿದ್ದರು. ಅವರ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ. ಅವರು ಮಾಧ್ಯಮ ಮತ್ತು ಮನರಂಜನಾ ಜಗತ್ತಿನಲ್ಲಿ ನಾವೀನ್ಯತೆ ಮತ್ತು ಶ್ರೇಷ್ಠತೆಗಾಗಿ ಹೊಸ ಮಾನದಂಡಗಳನ್ನು ಸ್ಥಾಪಿಸಿದರು ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

 ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು  ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರ ಬುದ್ಧಿವಂತಿಕೆಯಿಂದ ಪ್ರಯೋಜನ ಪಡೆಯಲು ಹಲವಾರು ಅವಕಾಶಗಳನ್ನು ಪಡೆದಿರುವುದು ನನ್ನ ಅದೃಷ್ಟ ಎಂದು ನೆನೆದು ಭಾವುಕರಾಗಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

11 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

12 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago