ಭಾರತ ಮಾಧ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ನಿಧನ

ಭಾರತ ಮಾಧ್ಯಮ ಲೋಕದ ದಿಗ್ಗಜ ಎಂದೇ ಖ್ಯಾತಿ ಪಡೆದ ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕ ರಾಮೋಜಿ ರಾವ್ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ ನ ಸ್ಟಾರ್ ಆಸ್ಪತ್ರೆಯಲ್ಲಿ ಇಂದು ಮುಸುಕಿನ ಜಾವ 3:45ಕ್ಕೆ ಅಗಲಿದ್ದಾರೆ ಎಂದು ತಿಳಿದು ಬಂದಿದೆ.

ಜೂನ್ 5ರಂದು ಹೃದಯ ಸಂಬಂಧಿ ಸಮಸ್ಯೆಯಿಂದ ಉಸಿರಾಟಕ್ಕೆ ತೀವ್ರ ತೊಂದರೆಯಾಗಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯ ನಂತರ ಹೃದಯ ಸ್ಟೆಂಟ್ ಹಾಕಲಾಯಿತು. ಬಳಿಕ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದಾರೂ ಚಿಕಿತ್ಸೆ ಫಲಿಸದೇ ನಿಧನಾರಾಗಿದ್ದಾರೆ ಎನ್ನಲಾಗಿದೆ.

ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇರುವ ಅವರ ಮನೆಗೆ ರವಾನಿಸಿ, ನಿವಾಸದಲ್ಲೇ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿ ಗ್ರಾಮದಲ್ಲಿ 1936ರ ನವೆಂಬರ್ 16 ರಂದು ಕೃಷಿಕ ಕುಟುಂಬದಲ್ಲಿ ಜನಿಸಿದರು. ಭವ್ಯವಾದ ರಾಮೋಜಿ ಫಿಲ್ಮ್‌ ಸಿಟಿಯ ನಿರ್ಮಾತೃಗಳು. ವಿಶ್ವದ ಅತಿ ದೊಡ್ಡ ಥೀಮ್ ಪಾರ್ಕ್‌ ಹಾಗೂ ಸಿನಿಮಾ ಸ್ಟುಡಿಯೋ ಅನ್ನೋ ಹೆಗ್ಗಳಿಕೆ ರಾಮೋಜಿ ಫಿಲ್ಮ್‌ ಸಿಟಿಗೆ ಇದೆ.

ಮಾರ್ಗದರ್ಶಿ ಚಿಟ್ ಫಂಡ್, ಈನಾಡು ಪತ್ರಿಕೆ, ಈಟಿವಿ ನೆಟ್‌ವರ್ಕ್, ರಮಾದೇವಿ ಪಬ್ಲಿಕ್ ಸ್ಕೂಲ್, ಪ್ರಿಯಾ ಫುಡ್ಸ್, ಕಲಾಂಜಲಿ, ಉಷಾಕಿರಣ್ ಮೂವೀಸ್, ಮಯೂರಿ ಫಿಲ್ಮ್ ಡಿಸ್ಟ್ರಿಬ್ಯೂಟರ್ಸ್ ಮತ್ತು ಡಾಲ್ಫಿನ್ ಗ್ರೂಪ್ ಆಫ್ ಹೋಟೆಲ್‌ಗಳು ರಾಮೋಜಿ ರಾವ್ ಒಡೆತನದ ಕಂಪನಿಗಳಾಗಿವೆ. ರಾಜಕೀಯ ಕ್ಷೇತ್ರದಲ್ಲೂ ಛಾಪು ಮೂಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಂತಾಪ

ಶ್ರೀ ರಾಮೋಜಿ ರಾವ್ ಅವರ ಅಗಲಿಕೆ ಅತ್ಯಂತ ದುಃಖ ತಂದಿದೆ.  ಅವರು ಭಾರತೀಯ ಮಾಧ್ಯಮದಲ್ಲಿ ಕ್ರಾಂತಿಯನ್ನು ಮಾಡಿದ ದಾರ್ಶನಿಕರಾಗಿದ್ದರು. ಅವರ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ. ಅವರು ಮಾಧ್ಯಮ ಮತ್ತು ಮನರಂಜನಾ ಜಗತ್ತಿನಲ್ಲಿ ನಾವೀನ್ಯತೆ ಮತ್ತು ಶ್ರೇಷ್ಠತೆಗಾಗಿ ಹೊಸ ಮಾನದಂಡಗಳನ್ನು ಸ್ಥಾಪಿಸಿದರು ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

 ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು  ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರ ಬುದ್ಧಿವಂತಿಕೆಯಿಂದ ಪ್ರಯೋಜನ ಪಡೆಯಲು ಹಲವಾರು ಅವಕಾಶಗಳನ್ನು ಪಡೆದಿರುವುದು ನನ್ನ ಅದೃಷ್ಟ ಎಂದು ನೆನೆದು ಭಾವುಕರಾಗಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

10 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

21 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

22 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

22 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago