ಭಾರತ ಸಂವಿಧಾನದ ಚುನಾವಣೆ ವ್ಯವಸ್ಥೆ ಜಗತ್ತಿಗೇ ಮಾದರಿ- ಶಾಸಕ ಧೀರಜ್ ಮುನಿರಾಜ್


ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ದಿನಾಚರಣೆ-2025 ಕಾರ್ಯಕ್ರಮ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ನಗರದ ಸಿದ್ದಲಿಂಗಯ್ಯ ವೃತ್ತದ ಬಳಿಯಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಹಾಗೂ ಮಾಜಿ ಪ್ರಧಾನಿ ಜಗಜೀವನ ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಂವಿಧಾನ ಜಾಗೃತಿ ಜಾಥಾ ನಡೆಯಿತು. ಸಂವಿಧಾನ ಪೀಠಿಕೆಯುಳ್ಳ ಬೆಳ್ಳಿ ರಥದ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು, ಬೃಹತ್ ರಾಷ್ಟ್ರ ಧ್ವಜ ಹಿಡಿದು ಸಂಚರಿಸಿದರು.

ಸಂವಿಧಾನದ ಮಹತ್ವ ಸಾರುವ ಭಿತ್ತಿಪತ್ರಗಳು ಹಾಗೂ ಘೋಷಣೆಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚರಿಸಿ, ಭಗತ್ ಸಿಂಗ್ ಕ್ರೀಡಾಂಗಣದ ವೇದಿಕೆ ತಲುಪಿತು.

ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು ಭಾರತ ಪೀಠಿಕೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಸಮಾರಂಭದಲ್ಲಿ ಭಾಗವಹಿಸಿದ್ದ ನೂರಾರು ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಪ್ರತಿಜ್ಞಾವಿಧಿಯಲ್ಲಿ ಭಾರತದ ಜನತೆಯಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುದಕ್ಕಾಗಿ ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡುವುದಾಗಿ ತಿಳಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ಧೀರಜ್ ಮುನಿರಾಜ್, ಅಮೇರಿಕಾದಲ್ಲಿ ಟ್ರಂಪ್ ಆಡಳಿತ ಹಸ್ತಾಂತರವಾಗುವಾಗ ಕಾನೂನು ಕೊಡಕು ಎದುರಾಗಿತ್ತು. ಆದರೆ ಭಾರತ ಸಂವಿಧಾನದ ಚುನಾವಣೆ ವ್ಯವಸ್ಥೆ ಜಗತ್ತಿಗೇ ಮಾದರಿಯಾಗಿದ್ದು, ಗ್ರಾಮ ಪಂಚಾಯಿತಿಯಿಂದ ಹಿಡಿದು, ಪ್ರಧಾನ ಮಂತ್ರಿಯವರೆಗೆ ಚುನಾವಣೆ ಆಯ್ಕೆಯಲ್ಲಿ ಯಾವುದೇ ಗೊಂದಲಗಳಿಲ್ಲ. ಅಧಿಕಾರ ಮುಗಿದ ನಂತರ ಕೆಲ ಕ್ಷಣಗಳಲ್ಲಿಯೇ ಹಸ್ತಾಂತರ ಮಡಬೇಕಿದೆ. ದೇಶದ ಪ್ರಜೆಗಳಿಗೆ ಮೂಲಭೂತ ಹಕ್ಕುಗಳನ್ನು ನೀಡುವ ಮೂಲಕ ಸಮಾನತೆ, ಸಮಬಾಳು ಪರಿಕಲ್ಪನೆ ಹೊಂದಿರುವುದು ನಮ್ಮ ಸಂವಿದಾನ. ಇಂತಹ ಸಂವಿಧಾನದ ಆಶಯಗಳಿಗೆ ದಕ್ಕೆ ಬಾರದಂತೆ ಜನಪ್ರತಿನಿಧಿಯಾಗಿ ನನ್ನ ಕರ್ತವ್ಯ ನಿರ್ವಹಿಸುತ್ತೇನೆ ಎಂದರು.

ಸಂವಿಧಾನ ಕುರಿತಾಗಿ ಮಾತನಾಡಿದ ಉಪನ್ಯಾಸಕ ಎನ್.ಮಹೇಶ್, ದೇಶದಲ್ಲಿ ಬ್ರಿಟೀಷರ ಆಳ್ವಿಕೆಯಿದ್ದಾಗ ನಮ್ಮದೇ ಆಡಳಿತ ವ್ಯವಸ್ಥೆ ಬಂದು ನಾವು ಸ್ವತಂತ್ರ್ಯರಾಗಬೇಕೆನ್ನುವ ಕೂಗು ಇತ್ತು. ಅಂತೆಯೇ ದೇಶಕ್ಕೆ ಒಂದು ಸಂವಿಧಾನ ಬೇಕು ಎನ್ನುವ ಒತ್ತಾಯಗಳಿದ್ದವು. ಸಂವಿಧಾನವು 1949ರ ನವೆಂಬರ್ 26 ರಂದು ಸಾಕಾರಕ್ಕೆ ಬಂದು, 1950ರ ಜನವರಿ 26ರಂದು ಅನುಷ್ಠಾನಕ್ಕೆ ತರಲಾಯಿತು. ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಡಾ.ಬಾಬು ರಾಜೇಂದ್ರ ಪ್ರಸಾದ್ ಕಾರ್ಯ ನಿರ್ವಹಿಸಿದ್ದರು. ಕರಡು ಸಮಿತಿ ಅಧ್ಯಕ್ಷರಾಗಿದ್ದ ಸಂವಿಧಾನದ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಫ್ರಾನ್ಸ್, ಸೋವಿಯತ್ ಒಕ್ಕೂಟ, ಐರ್ಲೆಂಡ್ ಜಪಾನ್ ಮೊದಲಾದ ದೇಶಗಳ ಸಂವಿಧಾನವನ್ನು ಅಭ್ಯಸಿಸಿ, ಅಳವಡಿಸಿಕೊಂಡು ಇದು ವಿಶ್ವದ ಯಾವುದೇ ಸ್ವತಂತ್ರ್ಯ ದೇಶಗಳ ಅತಿ ಉದ್ದವಾದ ಸಂವಿಧಾನವಾಗಿದೆ. ಭಾರತದ ಸಂವಿಧಾನದಲ್ಲಿ 448 ವಿಧಿಗಳು, 25 ಭಾಗಗಳು, 12 ಶೆಡ್ಯೂಲ್ 5 ಅನುಬಂಧಗಳು, 98 ತಿದ್ದುಪಡಿಗಳಿವೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರ.ಕೆ.ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಪೌರಾಯುಕ್ತ ಕಾರ್ತಿಕೇಶ್ವರ ಗಾಯಕ ಅಶ್ವಿನ್ ಶರ್ಮ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದ ರಾಜು, ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ, ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ.ಟಿ.ಎಸ್, ತಾಲೂಕು ಪಂಚಾಯಿತಿ ಇ.ಓಮಂಜುನಾಥ ಅರ್ತಿ,ಡಿವೈಎಸ್ಪಿ ಪಾಂಡುರಂಗ.ಎಸ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿ.ಎನ್.ಶೇಷಾದ್ರಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘಟನೆಯ ಮುಖಂಡರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

16 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago